Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ : ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

Facebook
Twitter
Telegram
WhatsApp

ಚಿತ್ರದುರ್ಗ. ಸೆ.12: ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿರುವ ನಿಗಮಗಳಾದ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭೀವೃದ್ಧಿ ನಿಗಮ ಹಾಗೂ ಪ.ಜಾತಿ ಅಲೆಮಾರಿ, ಅರೆ ಅಲೆಮಾರಿಗಳ ಅಭಿವೃದ್ಧಿ ನಿಗಮಗಳಿಂದ 2024-25ನೇ ಸಾಲಿನಲ್ಲಿ ವಿವಿಧ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನವಾಗಿದೆ.

ಪರಿಶಿಷ್ಟ ಜಾತಿ ಸಮುದಾಯಗಳ ಆರ್ಥಿಕ ಅಭಿವೃದ್ಧಿಗಾಗಿ, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ-1, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ-2, ಉದ್ಯಮಶೀಲತಾ ಅಭಿವೃದ್ಧಿ ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ, ಭೂ ಒಡೆತನ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದು.

ಈ ಯೋಜನೆಗಳ ಕುರಿತಾಗಿ ಸವಿವರವಾದ ಮಾಹಿತಿಯನ್ನು ಸಮಾಜ ಕಲ್ಯಾಣ ಇಲಾಖೆಯ ಸಾಲ ಸೇವೆಗಳ ಪೋರ್ಟಲ್ ವೆಬ್‌ಸೈಟ್  https://swdcorp.karnataka.gov.in      ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು.
ಆಸಕ್ತರು  https://sevasindhu.karnataka.gov.in     ತಂತ್ರಾAಶದ ಮೂಲಕ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. 2023-24ನೇ ಸಾಲಿನಲ್ಲಿ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂರವಾಣಿ ಸಂಖ್ಯೆ 08194-200214 ಅಥವಾ ಆಯಾ ತಾಲ್ಲೂಕಿನ ಅಭಿವೃದ್ಧಿ ಅಧಿಕಾರಿಗಳನ್ನು ಸಂಪರ್ಕಿಸಬಹುದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಂಗ್ರೆಸ್‍ನವರು ದಲಿತ ಪರ, ಅಹಿಂದ ಪರ ಎಂದು ತೋರ್ಪಡಿಕೆಗೆ ಹೇಳುವುದನ್ನು ನಿಲ್ಲಿಸಲಿ : ಬಾಳೆಕಾಯಿ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಸೆ. 17 : ಹಿಂದು ಧರ್ಮದಲ್ಲಿ ದಲಿತರನ್ನು ಸರಿಯಾದ ರೀತಿಯಲ್ಲಿ ನಡೆಸುತ್ತಿಲ್ಲ, ಅವರನ್ನು ಎಲ್ಲೂ ಸಹಾ

ರಸ್ತೆಯ ಬದಿಯ ಗುಂಡಿಗೆ ಬಿದ್ದ KSRTC ಬಸ್: ಮೂವರಿಗೆ ಗಂಭೀರ ಗಾಯ..!

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಚಳ್ಳಕೆರೆ : ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಗುಂಡಿಗೆ ಬಿದ್ದಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಸಾರ್ವಜನಿಕರಿಗೆ ಮಹತ್ವದ ಸೂಚನೆ ನೀಡಿದ ಬೆಸ್ಕಾಂ

ಚಿತ್ರದುರ್ಗ. ಸೆ.17: ಸೆ.28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಪ್ರಯುಕ್ತ ಚಿತ್ರದುರ್ಗ ನಗರದಲ್ಲಿ ಬೃಹತ್ ಶೋಭಾ ಯಾತ್ರೆ ಜರುಗಲಿದೆ. ಶೋಭಾ ಯಾತ್ರೆ ಮೆರವಣಿಗೆಯು ಚಳ್ಳಕೆರೆ ಗೇಟ್‌ನಿಂದ ಬಿ.ಡಿ.ರಸ್ತೆ ಮುಖಾಂತರ, ಗಾಂಧಿ ವೃತ್ತ, ಹೊಳಲ್ಕೆರೆ ರಸ್ತೆಯ

error: Content is protected !!