Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯೂಟ್ಯೂಬ್ ನಿಂದ ಡಾ.ಬ್ರೋ ತಿಂಗಳಿಗೆ ದುಡಿಯುವುದು 1 ಲಕ್ಷದ 76 ಸಾವಿರ..!

Facebook
Twitter
Telegram
WhatsApp

ಡಾ.ಬ್ರೋ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ನಮಸ್ಕಾರ ದೇವ್ರು ಅಂತಾನೇ ವಿಡಿಯೋ ಮಾಡುವ ಗಗನ್, ಡಾ.ಬ್ರೋ ಹೆಸರಲ್ಲಿ ಕನ್ನಡಿಗರ ಮನಸ್ಸನ್ನ ಗೆದ್ದಿದ್ದಾರೆ. ಯೂಟ್ಯೂಬ್ ನಲ್ಲಂತೂ ಯಾವ ಸ್ಟಾರ್ ಗಳಿಗೂ ಇಲ್ಲ ಅಷ್ಟು ದೊಡ್ಡ ಫಾಲೋವರ್ಸ್ ಹೊಂದಿದ್ದಾರೆ. ಮಿಲಿಯನ್ ಗಟ್ಟಲೇ ಸಬ್ಸ್ಕೈಬರ್ ಇದಾರೆ. ಡಾ.ಬ್ರೋಗೆ ಅಷ್ಟೊಂದು ಫಾಲೋವರ್ಸ್ ಸುಮ್ಮನೆ ಬಂದಿಲ್ಲ. ಡಾ.ಬ್ರೋ ಅಷ್ಟು ಕಷ್ಟ ವಿಡಿಯೋಗಳನ್ನ ಮಾಡಿ ಹಾಕುತ್ತಾರೆ. ದೇಶ ವಿದೇಶಗಳನ್ನ ಸುತ್ತುತ್ತಾರೆ.

ಬೇರೆ ಬೇರೆ ದೇಶದ ಸ್ಥಳಗಳು, ಅಲ್ಲಿನ ಫುಡ್ ಹೀಗೆ ಎಷ್ಟೋ ಕಡೆ ಅಸಾಧ್ಯವಾದುದ್ದೆಲ್ಲವನ್ನು ತೋರಿಸಿದ್ದಾರೆ. ಮುಗ್ಧತೆಯ ಮಾತುಗಳಿಂದಾನೇ ಎಲ್ಲರನ್ನು ತಲುಪುತ್ತಿದ್ದಾರೆ. ಯಾವುದೇ ಭಯವಿಲ್ಲದೆ ಎಲ್ಲಾ ಕಡೆಗೂ ನುಗ್ಗುತ್ತಾರೆ. ಇಂತಹ ಡಾ.ಬ್ರೋಗೆ ಇಡೀ ಪ್ರಪಂಚ ಸುತ್ತುವ ಆಸೆ. 195 ದೇಶಗಳಿಗೂ ಹೋಗುವ ಆಸೆ.

ಯೂಟ್ಯೂಬ್ ನಿಂದ ಸಾಕಷ್ಟು ಹಣ ಸಂಪಾದನೆ ಮಾಡಬಹುದು ಎಂಬುದು ಈಗಾಗಲೇ ಎಲ್ಲರಿಗೂ ಗೊತ್ತಿರುವ ವಿಚಾರ. ಅದರಂತೆ ಡಾ.ಬ್ರೋ ಬಗ್ಗೆ ಹಲವರಿಗೆ ಸಾಕಷ್ಟು ಕುತೂಹಲ ಇರುತ್ತೆ. ಆ ವಿಚಾರದ ಬಗ್ಗೆ ಸ್ವತಃ, ಸಾಕಗಷಿ ಸಮೇತ ಡಾ.ಬ್ರೋ ಮಾಹಿತಿ ನೀಡಿದ್ದಾರೆ. ಲೈವ್ ಗೆ ಬಂದಿದ್ದ ಬ್ರೋ, ಅಭಿಮಾನಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ. ಅದರಲ್ಲಿ ವ್ಯಕ್ತಿಯೊಬ್ಬರು ಯೂಟ್ಯೂಬ್ ನಲ್ಲಿ ನಿಮ್ಮ ತಿಂಗಳ ಆದಾಯ ಎಷ್ಟು ಎಂದು ಕೇಳಿದ್ದಾರೆ. ಅದಕ್ಕೆ ಡಾ.ಬ್ರೋ ತಮ್ಮ‌ ಮೊಬೈಲ್ ತೆಗೆದು ಸಂಪಾದನೆಯನ್ನು ತೋರಿಸಿದ್ದಾರೆ. ಅದರಲ್ಲಿ 2 ಸಾವಿರದ 100 ಡಾಲರ್ ಇತ್ತು. ಅಂದ್ರೆ 1 ಲಕ್ಷದ 76 ಸಾವಿರ ಹಣ. ಈ ತಿಂಗಳು ಬಂದಿರುವ ಹಣ ಇದು. ಆದರೆ ದೇಶ ವಿದೇಶಗಳನ್ನು ಸುತ್ತಲು ಅದರಲ್ಲಿ ಖರ್ಚು ಮಾಡಿಕೊಳ್ಳುತ್ತಾರೆ. ಹಾಗೇ ವಿಡಿಯೋ ಎಡಿಟಿಂಗ್ ಮಾಡುವುದಕ್ಕೂ ಅದರಲ್ಲಿಯೇ ಹಣ ನೀಡುತ್ತಾರೆ. ಉಳಿಯುವುದು 10-20 ಸಾವಿರ. ಆದರೆ ಇದರ ನಡುವೆ ಜಾಹೀರಾತುಗಳಿಂದಾನೂ ಒಳ್ಳೆಯ ಹಣ ಅವರ ಕೈ ಸೇರುತ್ತಿದೆ. ಈ ಬಗ್ಗೆಯೂ ಹೇಳಿಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!