ಚಿತ್ರದುರ್ಗ. ಜುಲೈ. 21: ಚಿತ್ರದುರ್ಗ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಜಿಲ್ಲಾಧ್ಯಕ್ಷರಾಗಿ ತುರುವನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಡಾ. ಬಿ.ಕೃಷ್ಣಪ್ಪ ಅವರು ಬಹುಮತದಿಂದ ಆಯ್ಕೆಯಾಗಿದ್ದಾರೆ.

ಇಲ್ಲಿನ ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ಉಪ ನಿರ್ದೇಶಕರ ಕಚೇರಿಯಲ್ಲಿ ಸೋಮವಾರ ಜಿಲ್ಲಾ ಪ್ರಾಚಾರ್ಯರ ಸಂಘದ ಚುನಾವಣೆ ನಡೆಯಿತು.
ಚುನಾವಣೆಯಲ್ಲಿ ಜಿಲ್ಲಾ ಪ್ರಾಚಾರ್ಯರ ಸಂಘದ ಕಾರ್ಯದರ್ಶಿಯಾಗಿ ಚಳ್ಳಕೆರೆಯ ಜೋಗೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಸಿ. ಡಿ. ಸೋಮಶೇಖರಪ್ಪ ಹಾಗೂ ಖಜಾಂಚಿಯಾಗಿ ಹೊಸದುರ್ಗ ತಾಲೂಕಿನ ಬಾಳೆಗೊಂದು ಗುರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಆರ್.ಮಂಜುನಾಥ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನೂತನವಾಗಿ ಆಯ್ಕೆಯಾದ ಜಿಲ್ಲಾ ಪ್ರಾಚಾರ್ಯರ ಸಂಘದ ಎಲ್ಲಾ ಪದಾಧಿಕಾರಿಗಳನ್ನು ಪದವಿಪೂರ್ವ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕರು ಹಾಗೂ ವಿವಿಧ ಕಾಲೇಜುಗಳ ಪ್ರಾಚಾರ್ಯರು ಅಭಿನಂದಿಸಿದ್ದಾರೆ.








