Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಡಾ. ಶಿವಮೂರ್ತಿ ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ : ಶ್ಯೂರಿಟಿಗೆ ಸಹಿ ಹಾಕಿದವರು ಯಾರು ಗೊತ್ತಾ ?

---Advertisement---

 

ಸುದ್ದಿಒನ್, ಚಿತ್ರದುರ್ಗ, ನವಂಬರ್.10 : ಕಳೆದ ವರ್ಷದಿಂದ ಜೈಲಿನಲ್ಲಿರುವ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ  ಶರಣರಿಗೆ ಇಂದು ಬಿಡುಗಡೆ ಭಾಗ್ಯ ಸಿಗಬಹುದು ಎಂಬ ನಿರೀಕ್ಷೆ ಇತ್ತು. ಆದರೆ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಮುಂದೂಡಿಕೆ ಮಾಡಿದೆ.  ನವೆಂಬರ್ 15 ಕ್ಕೆ ಮುಂದೂಡಿಕೆ ಮಾಡಿ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ ಆದೇಶ ಹೊರಡಿಸಿದೆ.

ಅರ್ಜಿ ವಿಚಾರಣೆ ವೇಳೆ ಸರ್ಕಾರಿ ವಕೀಲ ಹೆಚ್.ಆರ್. ಜಗದೀಶ್ ಅವರು ಆಕ್ಷೇಪಣೆ ಸಲ್ಲಿಸಿದ್ದು, ಈಗಾಗಲೇ 2ನೇ ಪ್ರಕರಣದಲ್ಲಿ ಬಾಡಿ ವಾರೆಂಟ್ ಇರುವುದರಿಂದ ಮತ್ತು ಸಾಕ್ಷ್ಯ ನಾಶ ಸಾಧ್ಯತೆ ಹಿನ್ನೆಲೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಬೇಕೆಂದು ಮನವಿ ಸಲ್ಲಿಸಿದರು.

ಮುರುಘಾ ಶ್ರೀಗಳ ವಿರುದ್ಧ ಎರಡು ಪ್ರಕರಣ ದಾಖಲಾಗಿದೆ. ಅದರಲ್ಲಿ ಒಂದು ಪ್ರಕರಣಕ್ಕೆ ಈಗಾಗಲೇ ಜಾಮೀನು ಸಿಕ್ಕಿದೆ. ಈ ಜಾಮೀನು ಪ್ರತಿಯನ್ನು ಇಂದು ಮುರುಘಾ ಶರಣರ ಪರ ವಕೀಲರಾದ ಸಂದೀಪ್ ಪಾಟೀಲ್, ಇಂದು ಕೋರ್ಟ್ ಗೆ ಸಲ್ಲಿಸಿದ್ದಾರೆ. ಈ ಮೂಲಕ ಇಂದು ಬಿಡುಗಡೆಯಾಗುವ ಸಾಧ್ಯತೆ ಇತ್ತು ಎಂದೇ ಭಾವಿಸಲಾಗಿತ್ತು. ಆದರೆ ಆ ನಿರೀಕ್ಷೆ ಹುಸಿಯಾಗಿದೆ.

ಶ್ರೀಗಳ ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ. ಶ್ಯೂರಿಟಿ ಹಾಕಿರುವ ಪ್ರತಿಗಳನ್ನು ಪರಿಶೀಲನೆ ಮಾಡುವ ಉದ್ದೇಶದಿಂದ ಮತ್ತು ಮೂರು ದಿನಗಳ ದೀಪಾವಳಿ ಹಬ್ಬದ ರಜೆಯ ಪ್ರಯುಕ್ತ ವಿಚಾರಣೆಯನ್ನು, ಕೋರ್ಟ್ ಮುಂದೂಡಲಾಗಿದೆ. ಇನ್ನು ಶ್ರೀಗಳ ಜಾಮೀನಿಗೆ, ಶಾಸಕ ವೀರೇಂದ್ರ ಅವರ ಸಹೋದರ ಕೆಸಿ ನಾಗಾರಾಜ್ ಹಾಗೂ ಮಧುಸೂದನ್ ಎಂಬುವವರು ಶ್ಯೂರಿಟಿ ನೀಡಿದ್ದಾರೆ‌. ಇದರ ಜೊತೆಗೆ ಎರಡು ಲಕ್ಷ ಬಾಂಡ್ ಹಾಗೂ ಜಮೀನಿನ  ಸಲ್ಲಿಕೆ‌
ಮಾಡಿದ್ದಾರೆ. ನವೆಂಬರ್ 15ಕ್ಕೆ ಅರ್ಜಿ ವಿಚಾರಣೆಯಾದ ಬಳಿಕ ಬಿಡುಗಡೆ ಸಾಧ್ಯತೆ ಇದೆ ಎನ್ನಲಾಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...