ನಾಟಕಗಳಿಂದ ದೇವರ ಅಸ್ತಿತ್ವ ಉಳಿಯಲು ಸಾಧ್ಯ : ಎನ್.ಆರ್. ಲಕ್ಷ್ಮೀಕಾಂತ್

1 Min Read

ಸುದ್ದಿಒನ್, ಹಿರಿಯೂರು, ಅಕ್ಟೋಬರ್. 02 : ನಾಟಕ, ಕಲೆ, ಸಂಗೀತ ಮತ್ತು ಸಾಹಿತ್ಯ ಒಡನಾಟದಿಂದ ಮಕ್ಕಳಲ್ಲಿ ಸೃಜನಶೀಲತೆ ಬೆಳೆಯಲಿದೆ ಎಂದು ಬಿಜೆಪಿ ಹಿರಿಯ ಮುಖಂಡ ಎನ್ ಆರ್. ಲಕ್ಷ್ಮಿಕಾಂತ್ ಅಭಿಪ್ರಾಯಪಟ್ಟರು.

ನೂರಾಡಿ ರಸ್ತೆಯ ವೇದಾವತಿ ನಗರದಲ್ಲಿ ನವರಾತ್ರಿ ಅಂಗವಾಗಿ ಶ್ರೀ ಕೃಷ್ಣ ಕೃಪಾಪೋಷಿತ ನಾಟಕ ಮಂಡಳಿ ಏರ್ಪಡಿಸಿದ್ದ ಶ್ರೀ ಶಾಂಭವಿ ಮಹಾತ್ಮೆ ಎಂಬ ಪೌರಾಣಿಕ ನಾಟಕ ಕುರಿತು ಮಾತನಾಡಿದರು.

 

ಪ್ರೇಕ್ಷಕರಿಂದ ಇಂದಿಗೂ ರಂಗಭೂಮಿ ಜೀವಂತವಾಗಿದೆ. ಹರಿಕಥೆ, ನಾಟಕಗಳಿಂದ ದೇವರ ಅಸ್ತಿತ್ವ ಉಳಿಯಲು ಸಾಧ್ಯವಾಗಿದೆ. ಸಂಗೀತ ಮತ್ತು ಸಾಹಿತ್ಯ ಒಲವು ಇರುವವರಲ್ಲಿ ಮನುಷ್ಯತ್ವ ಇರುತ್ತದೆ. ಜನರ ಮನಸ್ಸನ್ನು ಸೃಜನಗೊಳಿಸಲು ಸಂಗೀತ ನಾಟಕಗಳು ಮುಖ್ಯ ಎಂದರು.

 

ಜೆಡಿಎಸ್ ಮುಖಂಡ ಎಂ. ರವೀಂದ್ರಪ್ಪ ಮಾತನಾಡಿ ನಾಟಕಗಳಿಂದ ಗ್ರಾಮೀಣ ಪ್ರತಿಭೆಗಳನ್ನು ಗುರುತಿಸುವ ಕೆಲಸವಾಗುತ್ತಿದೆ. ಸಂಸ್ಕೃತಿಯ ಪ್ರತೀಕವಾಗಿರುವ ಪೌರಾಣಿಕ ನಾಟಕ ಕಲೆ ಅಸ್ತಿತ್ವ ಕಳೆದುಕೊಳ್ಳದಂತೆ ಕಲೆಯನ್ನು ನಮ್ಮ ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವ ಕೆಲಸವಾಗಬೇಕಿದೆ. ಆಧುನಿಕತೆಯ ಭರಾಟೆಯ ಟಿವಿ, ಮೊಬೈಲ್ ಬಳಕೆ ಯುಗದಲ್ಲಿ ರಾತ್ರಿಯಿಂದ ಬೆಳಗಿನ ಜಾವದ ತನಕ ಮನೆ ಮಂದಿಯೆಲ್ಲಾ ಕುಳಿತು ನಾಟಕ ನೋಡುತ್ತಿದ್ದ ದಿನಗಳು ಹೆಚ್ಚಾಗಲಿ, ಪಾತ್ರಧಾರಿಗಳು ಉತ್ತಮವಾಗಿ ನಾಟಕವನ್ನು ಪ್ರದರ್ಶಿಸಿದರು. ನಾವು ಮೈಮರೆತು ಕುಳಿತು ವೀಕ್ಷಿಸಿದೇವು ಎಂದು ಪಾತ್ರಧಾರಿಗಳ ಅಭಿನಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

 

ನಾಟಕಕ್ಕೆ ಮಸ್ಕಲ್ ವಿಶ್ವನಾಥ್ ಸಂಗೀತ ನಿರ್ದೇಶನ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಬಿಜೆಪಿ ಮಂಡಲ ಅಧ್ಯಕ್ಷ ವಿಶ್ವನಾಥ್, ಪಾತ್ರಧಾರಿಗಳಾದ ಚಿತ್ರ ಜಿತ್ ಯಾದವ್, ಟಿಬಿ ಗೊಲ್ಲರಹಟ್ಟಿ ಎನ್. ಲಕ್ಷ್ಮೀಕಾಂತ್, ಎಂ. ಲೋಕೇಶ್, ನಿಜಲಿಂಗಪ್ಪ , ಶ್ರೀನಿವಾಸ್, ಹರೀಶ್, ವೆಂಕಟೇಶ್, ನಟರಾಜ್, ಹೆಚ್.ಆರ್. ತಿಪ್ಪೇಸ್ವಾಮಿ, ಜಗದೀಶ್, ಹನುಮಂತಪ್ಪ, ನಿಂಗಣ್ಣ, ನಂದೀಶ್ ಸೇರಿದಂತೆ ಮತ್ತಿತರರು ಇದ್ದರು.

Share This Article
Enable Notifications OK No thanks