Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ನಾಟಕಗಳಿಂದ ದೇವರ ಅಸ್ತಿತ್ವ ಉಳಿಯಲು ಸಾಧ್ಯ : ಎನ್.ಆರ್. ಲಕ್ಷ್ಮೀಕಾಂತ್

---Advertisement---

ಸುದ್ದಿಒನ್, ಹಿರಿಯೂರು, ಅಕ್ಟೋಬರ್. 02 : ನಾಟಕ, ಕಲೆ, ಸಂಗೀತ ಮತ್ತು ಸಾಹಿತ್ಯ ಒಡನಾಟದಿಂದ ಮಕ್ಕಳಲ್ಲಿ ಸೃಜನಶೀಲತೆ ಬೆಳೆಯಲಿದೆ ಎಂದು ಬಿಜೆಪಿ ಹಿರಿಯ ಮುಖಂಡ ಎನ್ ಆರ್. ಲಕ್ಷ್ಮಿಕಾಂತ್ ಅಭಿಪ್ರಾಯಪಟ್ಟರು.

ನೂರಾಡಿ ರಸ್ತೆಯ ವೇದಾವತಿ ನಗರದಲ್ಲಿ ನವರಾತ್ರಿ ಅಂಗವಾಗಿ ಶ್ರೀ ಕೃಷ್ಣ ಕೃಪಾಪೋಷಿತ ನಾಟಕ ಮಂಡಳಿ ಏರ್ಪಡಿಸಿದ್ದ ಶ್ರೀ ಶಾಂಭವಿ ಮಹಾತ್ಮೆ ಎಂಬ ಪೌರಾಣಿಕ ನಾಟಕ ಕುರಿತು ಮಾತನಾಡಿದರು.

 

ಪ್ರೇಕ್ಷಕರಿಂದ ಇಂದಿಗೂ ರಂಗಭೂಮಿ ಜೀವಂತವಾಗಿದೆ. ಹರಿಕಥೆ, ನಾಟಕಗಳಿಂದ ದೇವರ ಅಸ್ತಿತ್ವ ಉಳಿಯಲು ಸಾಧ್ಯವಾಗಿದೆ. ಸಂಗೀತ ಮತ್ತು ಸಾಹಿತ್ಯ ಒಲವು ಇರುವವರಲ್ಲಿ ಮನುಷ್ಯತ್ವ ಇರುತ್ತದೆ. ಜನರ ಮನಸ್ಸನ್ನು ಸೃಜನಗೊಳಿಸಲು ಸಂಗೀತ ನಾಟಕಗಳು ಮುಖ್ಯ ಎಂದರು.

 

ಜೆಡಿಎಸ್ ಮುಖಂಡ ಎಂ. ರವೀಂದ್ರಪ್ಪ ಮಾತನಾಡಿ ನಾಟಕಗಳಿಂದ ಗ್ರಾಮೀಣ ಪ್ರತಿಭೆಗಳನ್ನು ಗುರುತಿಸುವ ಕೆಲಸವಾಗುತ್ತಿದೆ. ಸಂಸ್ಕೃತಿಯ ಪ್ರತೀಕವಾಗಿರುವ ಪೌರಾಣಿಕ ನಾಟಕ ಕಲೆ ಅಸ್ತಿತ್ವ ಕಳೆದುಕೊಳ್ಳದಂತೆ ಕಲೆಯನ್ನು ನಮ್ಮ ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವ ಕೆಲಸವಾಗಬೇಕಿದೆ. ಆಧುನಿಕತೆಯ ಭರಾಟೆಯ ಟಿವಿ, ಮೊಬೈಲ್ ಬಳಕೆ ಯುಗದಲ್ಲಿ ರಾತ್ರಿಯಿಂದ ಬೆಳಗಿನ ಜಾವದ ತನಕ ಮನೆ ಮಂದಿಯೆಲ್ಲಾ ಕುಳಿತು ನಾಟಕ ನೋಡುತ್ತಿದ್ದ ದಿನಗಳು ಹೆಚ್ಚಾಗಲಿ, ಪಾತ್ರಧಾರಿಗಳು ಉತ್ತಮವಾಗಿ ನಾಟಕವನ್ನು ಪ್ರದರ್ಶಿಸಿದರು. ನಾವು ಮೈಮರೆತು ಕುಳಿತು ವೀಕ್ಷಿಸಿದೇವು ಎಂದು ಪಾತ್ರಧಾರಿಗಳ ಅಭಿನಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

 

ನಾಟಕಕ್ಕೆ ಮಸ್ಕಲ್ ವಿಶ್ವನಾಥ್ ಸಂಗೀತ ನಿರ್ದೇಶನ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಬಿಜೆಪಿ ಮಂಡಲ ಅಧ್ಯಕ್ಷ ವಿಶ್ವನಾಥ್, ಪಾತ್ರಧಾರಿಗಳಾದ ಚಿತ್ರ ಜಿತ್ ಯಾದವ್, ಟಿಬಿ ಗೊಲ್ಲರಹಟ್ಟಿ ಎನ್. ಲಕ್ಷ್ಮೀಕಾಂತ್, ಎಂ. ಲೋಕೇಶ್, ನಿಜಲಿಂಗಪ್ಪ , ಶ್ರೀನಿವಾಸ್, ಹರೀಶ್, ವೆಂಕಟೇಶ್, ನಟರಾಜ್, ಹೆಚ್.ಆರ್. ತಿಪ್ಪೇಸ್ವಾಮಿ, ಜಗದೀಶ್, ಹನುಮಂತಪ್ಪ, ನಿಂಗಣ್ಣ, ನಂದೀಶ್ ಸೇರಿದಂತೆ ಮತ್ತಿತರರು ಇದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...