Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಂಗೋಲಿಯಲ್ಲಿ ಅರಳಿದ ಶ್ರೀ ರಾಮನ ಚಿತ್ರ | ಕಣ್ಮನ ಸೆಳೆದ  ಶ್ರೀರಾಮ, ಸೀತೆ ಹಾಗೂ ಹನುಮಂತನ ವೇಷಧಾರಿ ಮಕ್ಕಳು

Facebook
Twitter
Telegram
WhatsApp

ಸುದ್ದಿಒನ್, ದಾವಣಗೆರೆ, ಜನವರಿ.21  : ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ಉದ್ಘಾಟನೆ ಮತ್ತು ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಇಲ್ಲಿನ ವಿದ್ಯಾನಗರದ ಉದ್ಯಾನದಲ್ಲಿ 

‘ಸೂಪರ್ ಮಾಮ್ಸ್ ಆಫ್ ದಾವಣಗೆರೆ’ ಮಹಿಳಾ ತಂಡದ ಸದಸ್ಯೆಯರು  ದೀಪ ಬೆಳಗುವ ಮೂಲಕ ‘ಶ್ರೀರಾಮ ದೀಪಾವಳಿ’ ಆಚರಿಸಿದರು.

ಇದಕ್ಕೂ ಮೊದಲು ಸೂಪರ್ ಮಾಮ್ಸ್ ಆಫ್ ದಾವಣಗೆರೆ ವತಿಯಿಂದ ಮಹಿಳೆಯರು ವಿದ್ಯಾನಗರದ ಶಿವ ಪಾರ್ವತಿ ದೇವಾಲಯದಿಂದ ಶ್ರೀ ರಾಮ ನಾಮ ಜಪಿಸುತ್ತಾ  ಉದ್ಯಾನದವರೆಗೆ ಮೆರವಣಿಗೆ ನಡೆಸಿದರು.

ಬಳಿಕ ಉದ್ಯಾನದಲ್ಲಿ ರಂಗೋಲಿಯಲ್ಲಿ ಅರಳಿದ ಶ್ರೀ ರಾಮನಿಗೆ ಜ್ಯೋತಿ ಬೆಳಗುವ ಮೂಲಕ ಪ್ರಾರ್ಥನೆ ಸಲ್ಲಿಸಿ, ಜೈ ಶ್ರೀರಾಮ್ ಘೋಷಣೆ ಕೂಗಿದರು. ರಂಗೋಲಿಯಲ್ಲಿ ಮೂಡಿದ್ದ ಶ್ರೀರಾಮನ ಚಿತ್ರದ ಸುತ್ತ ದೀಪಗಳನ್ನು ಇಟ್ಟು ಸಂಭ್ರಮಿಸಿದರು.

‘ಜನವರಿ 22ರಂದು ಮನೆಯಲ್ಲಿ ವಿಶೇಷ ಪೂಜೆ ಮಾಡುತ್ತಿದ್ದು, ಎರಡನೇ ದೀಪಾವಳಿಯಂತೆ ಆಚರಿಸುತ್ತೇವೆ. ಆ ದಿನ ಅಯೋಧ್ಯೆಗೆ ಹೋಗಲು ಆಗದ ಹಿನ್ನೆಲೆಯಲ್ಲಿ ಒಟ್ಟಾಗಿ ಸೇರಿ ರಾಮನಿಗೆ ನಮನ ಸಲ್ಲಿಸಲಿದ್ದೇವೆ’ ಎಂದು  ತಂಡದ ಸದಸ್ಯೆಯರು ತಿಳಿಸಿದರು.

ಇದೇ ವೇಳೆ ಮಕ್ಕಳು ಶ್ರೀರಾಮ, ಸೀತೆ ಹಾಗೂ ಹನುಮಂತನ ವೇಷ ಧರಿಸಿ ಎಲ್ಲರ ಗಮನ ಸೆಳೆದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಧಾರಾಕಾರ ಮಳೆಗೆ ಕೋಲಾರದಲ್ಲಿ ಎರಡೂವರೆ ಎಕರೆ ಬಾಳೆ ನಾಶ..!

ಕೋಲಾರ: ಮಳೆಯನ್ನು ಕಂಡು ರೈತ ಅದೆಷ್ಟೋ ವರ್ಷಗಳು ಆಗಿತ್ತೇನೋ ಎಂಬ ಭಾವನೆ ಈ ಬಾರಿಯ ಬಿಸಿಲು ನೋಡಿ ಮೂಡಿತ್ತು. ಆದರೆ ವರುಣರಾಯ ಕೃಪೆ ಏನೋ ತೋರಿದ್ದಾನೆ. ನಿನ್ನೆಯಿಂದ ರಾಜ್ಯದಲ್ಲಿ ಮಳೆಯಾಗುತ್ತಿದೆ. ಇನ್ಮುಂದೆ ಉತ್ತಮ ಮಳೆಯಾಗುವ

30 ವರ್ಷದ ಹಳೇ ಕಥೆ ಹೇಳಿದ ಶಿವರಾಮೇಗೌಡ : ಇಂಗ್ಲೆಂಡ್ ನಲ್ಲೂ ತಗಲಾಕಿಕೊಂಡಿದ್ರಂತೆ ರೇವಣ್ಣ..!

ಮಂಡ್ಯ: ಅಬ್ಬಬ್ಬಾ.. ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರ ವಿಚಾರಗಳು ದಿನೇ‌ ದಿನೇ ಒಂದೊಂದು ವಿಚಾರಗಳು ಬೆಳಕಿಗೆ ಬರುತ್ತಿವೆ. ಕಳೆದ ಮೂವತ್ತು ವರ್ಷಗಳ ಹಿಂದೆಯೂ ಇಂಥದ್ದೊಂದು ಘಟನೆ ಅದರಲ್ಲೂ ಇಂಗ್ಲೆಂಡ್ ನಲ್ಲಿ‌ ನಡೆದಿತ್ತಂತೆ. ಈ

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

error: Content is protected !!