Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಬೆಳಗ್ಗೆ ಎದ್ದ ಕೂಡಲೇ ಕಾಫಿ..ಟೀ ಕುಡಿಯುವ ಬದಲಿಗೆ ಈ ನೀರು ಕುಡಿಯಿರಿ ಕೊಬ್ಬು ಕರಗುತ್ತೆ.. ತೂಕವೂ ಇಳಿಯುತ್ತೆ..!

---Advertisement---

ಸಾಕಷ್ಟು ಜನಕ್ಕೆ ಬೆಳಗ್ಗೆ ಎದ್ದ ಕೂಡಲೇ ಟೀ, ಕಾಫಿ ಕುಡಿದೇ ಅಭ್ಯಾಸವಿರುತ್ತದೆ. ಖಾಲಿ ಹೊಟ್ಟೆಯಲ್ಲಿಯೇ ಕುಡಿಯುತ್ತಾರೆ. ಆದರೆ ಅದು ಆರೋಗ್ಯಕ್ಕೆ ಅಷ್ಟೇನು ಒಳಿತಲ್ಲ. ಮೈಂಡ್ ರಿಫ್ರೆಶ್ ಆಗೋದಕ್ಕೆಂತ ಈ ಅಭ್ಯಾಸ ಮಾಡಿಕೊಂಡಿರುತ್ತಾರೆ. ಆದರೆ ನಾವೀಗ ಹೇಳುವ ಟಿಪ್ಸ್ ಫಾಲೋ ಮಾಡಿದ್ರೆ ಮೈಂಡು ರಿಫ್ರೆಶ್ ಆಗುತ್ತೆ, ಹೆಲ್ತ್ ಚೆನ್ನಾಗಿರುತ್ತೆ.

 

ದಿನಾ ಬೆಳಿಗ್ಗೆ ಎದ್ದ ಕೂಡಲೇ ಪುದೀನಾ ಮತ್ತು ಕಾಮಕಸ್ತೂರಿ ಬೀಜ ಬೆರೆಸಿದ ಬಿಸಿ ನೀರು ಕುಡಿಯಿರಿ. ಇದರಿಂದ ದೇಹದಲ್ಲಿ ಶೇಕರಣೆಯಾಗಿರುವ ಅಧಿಕ ಕೊಬ್ಬು ಕರಗುತ್ತದೆ. ಈ ಕೊಬ್ಬನ್ನ ಕರಗಿಸಲು ನಾನಾ ಕಸರತ್ತನ್ನ ಮಾಡ್ತೀರಿ. ಆದರೆ ಪುದೀಮಾ ಜೊತೆಗೆ ಸೀಡ್ಸ್ ಬೆರೆಸಿದ ನೀರನ್ನು ಕುಡಿಯುವುದರಿಂದ ಇದೆಲ್ಲವೂ ತಾನಾಗಿಯೇ ಕಡಿಮೆಯಾಗುತ್ತದೆ. ಅಷ್ಟೇ ಅಲ್ಲ ಇದರಿಂದ ತೂಕವೂ ಇಳಿಯುತ್ತದೆ. ಅಲ್ಲದೆ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಈ ನೀರಿಗೆ ನೀವೂ ಕಾಮಕಸ್ತೂರಿ ಬೀಜ ಸಿಗದೆ ಇದ್ದಾಗ ಚಿಯಾ ಸೀಡ್ಸ್ ಬಳಸಬಹುದು. ಚಿಯಾ ಬೀಜಗಳಲ್ಲಿ ಅಧಿಕ Omega – 3 fatty acid ಅಂಶವಿದೆ. ಜೀರ್ಣವಾಗುವ ನಾರಿನಂಶ, ಬಹಳಷ್ಟು ವಿಟಮಿನ್ ಗಳು ಇದ್ದು, ದೇಹದಲ್ಲಿ ಶೇಖರಣೆ ಆಗಿರುವ ಕಲ್ಮಶಗಳನ್ನು, ಹಾನಿಕಾರಕ ವಿಷವನ್ನು ಹೊರಹಾಕಲು ಸಹಕರಿಸುತ್ತದೆ. ಸಕ್ಕರೆ ಖಾಯಿಲೆ ನಿಯಂತ್ರಣಕ್ಕೆ ಬರುತ್ತೆ. ಅಧಿಕ ರಕ್ತದೊತ್ತಡವನ್ನು ಸಮಸ್ಥಿತಿಗೆ ತರುವಲ್ಲಿ ಸಹಕಾರಿಯಾಗುತ್ತದೆ.

ಬೀಜವನ್ನು ರಾತ್ರಿ ಇಡೀ ನೀರಿನಲ್ಲಿ ನೆನೆಸಿಡಿ. ಪುದೀನಾ ಕೂಡ ರಾತ್ರಿಯೇ ನೀರಿಗೆ ಹಾಕುವುದರಿಂದ ಅದರಲ್ಲಿರುವ ಅಂಶ ನೀರಿನಲ್ಲಿ ಬಿಟ್ಟುಕೊಳ್ಳುತ್ತೆ. ದೇಹಕ್ಕೆ ಹೆಚ್ಚಿನ ಲಾಭವೂ ಸಿಗಲಿದೆ. ಪ್ರತಿದಿನ ಈ ನೀರನ್ನು ಕುಡಿಯುವ ಅಭ್ಯಾಸ ಮಾಡಿಕೊಳ್ಳಿ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...