Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

Facebook
Twitter
Telegram
WhatsApp

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ ಫೇಲ್ ಆಗುತ್ತಿದೆ. ಇನ್ನು ಕೆಲವೆಡೆ ಗ್ರಾಮಸ್ಥರೆ ಚುನಾವಣೆಯನ್ನು ಬಹಿಷ್ಕಾರ ಮಾಡಿದ್ದಾರೆ. ಜನಪ್ರತಿನಿಧಿಗಳು ಎನಿಸಿಕೊಂಡವರು ಗೆದ್ದ ಮೇಲೆ ಐದು ವರ್ಷ ಜನರ ಕಡೆಗೆ, ಗ್ರಾಮದ ಕಡೆಗೆ ತಿರುಗಿ ನೋಡುವುದೇ ಇಲ್ಲ. ಹೀಗಾಗಿ ಮೂಲ ಸೌಕರ್ಯಕ್ಕೆ ಒದ್ದಾಡುತ್ತಿರುವ ಕೆಲ ಗ್ರಾಮಸ್ಥರು ಚುನಾವಣೆಯನ್ನೇ ಬಹಿಷ್ಕಾರ ಮಾಡಿದ್ದಾರೆ. ಅದರಲ್ಲಿ ಕೋಟೆನಾಡಿನ ಕಾಟನಾಯಕನಹಳ್ಳಿ ಕೂಡ ಒಂದು.

 

ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಕೆರೆ ತುಂಬಿಸುವ ಯೋಜನೆಗೆ ಚಾಲನೆ‌ ನೀಡಿಲ್ಲ. ಹೀಗಾಗಿ ರೊಚ್ಚಿಗೆದ್ದ ಗ್ರಾಮಸ್ಥರು, ಚುನಾವಣೆ ಬಹಿಷ್ಕಾರ ಮಾಡಿ, ಮುಂಜಾನೆಯಿಂದ‌‌ ಒಬ್ಬನೇ ಒಬ್ಬ ಕೂಡ ಮತ ಹಾಕಲು ಬಂದಿರಲಿಲ್ಲ. ಹಿರಿಯೂರು ತಾಲೂಕಿನ ಕಾಟನಾಯಕನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಇದು ತಿಳಿಯುತ್ತಿದ್ದಂತೆ ಗ್ರಾಮದ ಜನರ ಮನವೊಲಿಸಲು ತಹಶೀಲ್ದಾರ್ ಓಡೋಡಿ ಬಂದಿದ್ದಾರೆ. ಕಡೆಗೂ ಸಂಧಾನ ಸಭೆ ಸಫಲವಾಗಿದ್ದು, ಗ್ರಾಮಸ್ಥರು ಮತದಾನಕ್ಕೆ ಒಪ್ಪಿದ್ದಾರೆ.

ಅಷ್ಟರಲ್ಲಾಗಲೇ ಸಂಜೆ 4.30. ಇನ್ನರ್ಧ ಗಂಡೆಯಲ್ಲಿ ಮತದಾನವೇ ಮುಗಿಯಬೇಕಾಗಿತ್ತು. ಗ್ರಾಮದ ಸರಕಾರಿ ಹಿರಿಯ ಪ್ರಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 263 ರಲ್ಲಿ ಘಟನೆ ನಡೆದಿದ್ದು, ಮತದಾನದ ಸಮಯ ಮುಕ್ತಾಯವಾಗುತ್ತಿದ್ದಂತೆ ಮತಗಟ್ಟೆಗೆ ಜನರ ದೌಡು ಬಂದಿದೆ. ಒಟ್ಟು 1322 ಮತದಾರರಿರುವ ಕಾಟನಾಯಕನಹಳ್ಳಿ ಗ್ರಾಮ ಇದಾಗಿದೆ. ಮುಂಜಾನೆಯಿಂದ ಚಲಾವಣೆಯಾದ ಮತಗಳು ಸುಮಾರು ಕೇವಲ 300. 4:30 ರ ಮತರ ಮತಗಟ್ಟೆಗೆ ಒಮ್ಮೆಲೇ ಆಗಮಿಸಿದ 300-400 ಮತದಾರರು ಮತ ಹಾಕಿದ್ದಾರೆ. ಕಡೆಗೂ ಜನರ ಮನಸ್ಸನ್ನು ಬದಲಾಯಿಸಿ ತಹಶಿಲ್ದಾರ್ ಮತ ಹಾಕುವಂತೆ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

ನಾಳೆ ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ :   ಸಿದ್ದತೆ ಹೇಗಿದೆ ?

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಸಹೋದರಿಯರ ನಡುವೆ ಜಗಳ, ಮುನಿಸು ಇರುವುದು ಸಹಜ. ಆದ್ರೆ, ಕೋಟೆನಾಡಿನಲ್ಲಿ ಮಾತ್ರ ಮುನಿದು

error: Content is protected !!