Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

---Advertisement---

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ ಫೇಲ್ ಆಗುತ್ತಿದೆ. ಇನ್ನು ಕೆಲವೆಡೆ ಗ್ರಾಮಸ್ಥರೆ ಚುನಾವಣೆಯನ್ನು ಬಹಿಷ್ಕಾರ ಮಾಡಿದ್ದಾರೆ. ಜನಪ್ರತಿನಿಧಿಗಳು ಎನಿಸಿಕೊಂಡವರು ಗೆದ್ದ ಮೇಲೆ ಐದು ವರ್ಷ ಜನರ ಕಡೆಗೆ, ಗ್ರಾಮದ ಕಡೆಗೆ ತಿರುಗಿ ನೋಡುವುದೇ ಇಲ್ಲ. ಹೀಗಾಗಿ ಮೂಲ ಸೌಕರ್ಯಕ್ಕೆ ಒದ್ದಾಡುತ್ತಿರುವ ಕೆಲ ಗ್ರಾಮಸ್ಥರು ಚುನಾವಣೆಯನ್ನೇ ಬಹಿಷ್ಕಾರ ಮಾಡಿದ್ದಾರೆ. ಅದರಲ್ಲಿ ಕೋಟೆನಾಡಿನ ಕಾಟನಾಯಕನಹಳ್ಳಿ ಕೂಡ ಒಂದು.

 

ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಕೆರೆ ತುಂಬಿಸುವ ಯೋಜನೆಗೆ ಚಾಲನೆ‌ ನೀಡಿಲ್ಲ. ಹೀಗಾಗಿ ರೊಚ್ಚಿಗೆದ್ದ ಗ್ರಾಮಸ್ಥರು, ಚುನಾವಣೆ ಬಹಿಷ್ಕಾರ ಮಾಡಿ, ಮುಂಜಾನೆಯಿಂದ‌‌ ಒಬ್ಬನೇ ಒಬ್ಬ ಕೂಡ ಮತ ಹಾಕಲು ಬಂದಿರಲಿಲ್ಲ. ಹಿರಿಯೂರು ತಾಲೂಕಿನ ಕಾಟನಾಯಕನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಇದು ತಿಳಿಯುತ್ತಿದ್ದಂತೆ ಗ್ರಾಮದ ಜನರ ಮನವೊಲಿಸಲು ತಹಶೀಲ್ದಾರ್ ಓಡೋಡಿ ಬಂದಿದ್ದಾರೆ. ಕಡೆಗೂ ಸಂಧಾನ ಸಭೆ ಸಫಲವಾಗಿದ್ದು, ಗ್ರಾಮಸ್ಥರು ಮತದಾನಕ್ಕೆ ಒಪ್ಪಿದ್ದಾರೆ.

ಅಷ್ಟರಲ್ಲಾಗಲೇ ಸಂಜೆ 4.30. ಇನ್ನರ್ಧ ಗಂಡೆಯಲ್ಲಿ ಮತದಾನವೇ ಮುಗಿಯಬೇಕಾಗಿತ್ತು. ಗ್ರಾಮದ ಸರಕಾರಿ ಹಿರಿಯ ಪ್ರಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 263 ರಲ್ಲಿ ಘಟನೆ ನಡೆದಿದ್ದು, ಮತದಾನದ ಸಮಯ ಮುಕ್ತಾಯವಾಗುತ್ತಿದ್ದಂತೆ ಮತಗಟ್ಟೆಗೆ ಜನರ ದೌಡು ಬಂದಿದೆ. ಒಟ್ಟು 1322 ಮತದಾರರಿರುವ ಕಾಟನಾಯಕನಹಳ್ಳಿ ಗ್ರಾಮ ಇದಾಗಿದೆ. ಮುಂಜಾನೆಯಿಂದ ಚಲಾವಣೆಯಾದ ಮತಗಳು ಸುಮಾರು ಕೇವಲ 300. 4:30 ರ ಮತರ ಮತಗಟ್ಟೆಗೆ ಒಮ್ಮೆಲೇ ಆಗಮಿಸಿದ 300-400 ಮತದಾರರು ಮತ ಹಾಕಿದ್ದಾರೆ. ಕಡೆಗೂ ಜನರ ಮನಸ್ಸನ್ನು ಬದಲಾಯಿಸಿ ತಹಶಿಲ್ದಾರ್ ಮತ ಹಾಕುವಂತೆ ಮಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment