Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ವ್ಯರ್ಥವಾಗಿ ಹರಿದ ಕುಡಿಯುವ ನೀರು : ಸಾರ್ವಜನಿಕರ ಆಕ್ರೋಶ

---Advertisement---

ಸುದ್ದಿಒನ್, ಚಿತ್ರದುರ್ಗ, ಮೇ. 30 : ಕಳೆದ ವರ್ಷ ಮಳೆಯಿಲ್ಲದೆ ಬೆಳೆ ಇರಲಿ ಕುಡಿಯುವ ನೀರಿಗೂ ಎಷ್ಟು ಸಮಸ್ಯೆಯಾಗಿದೆ ಎಂಬುದು ಜನ ಕಂಡಿದ್ದಾರೆ. ಜೀವ ಜಲ ಬರಿದಾಗಿದೆ. ಈಗಷ್ಟೇ ಮಳೆಯ ಸಿಂಚನವಾಗಿದೆ. ಆದರೆ ಭೂಮಿಯೊಳಗಿನ ಅಂತರ್ಜಲ ಬತ್ತಿ ಹೋಗದಂತೆ ಕಾಪಾಡಲು ಮರಗಿಡಗಳನ್ನು ಹಾಕಬೇಕು. ಇರುವ ಮರವೆಲ್ಲಾ ಕಡಿದು ಅಂತರ್ಜಲ ಬತ್ತಿ ಹೋಗುತ್ತಿದೆ. ಹೀಗಿರುವಾಗ ಪ್ರತಿ ಸಲ ನೀರಿನ್ನು ವ್ಯರ್ಥ ಮಾಡಬೇಡಿ. ನೀರು ಉಳಿಸಿ ಅನ್ನೋ ಸಲಹೆಗಳು ಕೇಳಿ ಬರುತ್ತವೆ.

ಆದರೆ ನಗರದಲ್ಲಿ ಕುಡಿಯುವ ನೀರು ಚರಂಡಿ‌ ನೀರಿನಂತೆ ಹರಿದು ಹೋಗುತ್ತಿದೆ. ಈ ದೃಶ್ಯವನ್ನು ನೋಡುತ್ತಿದ್ದರೆ ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಹೂ ಹಳೆಯ ನಾಣ್ಣುಡಿಯೊಂದು ನೆನಪಾಗುತ್ತಿದೆ. ಹೌದು ನಗರದಲ್ಲಿ ಬಹಳಷ್ಟು ಕಡೆ ಕುಡಿಯಲು‌ ನೀರಿಲ್ಲದಿದ್ದರೂ ಕೆಲವೆಡೆ ಮಾತ್ರ ನೀರು ಹೀಗೆ ವ್ಯರ್ಥವಾಗಿ ರಸ್ತೆಯ ಮೇಲೆ ಹರಿಯುತ್ತಿದೆ.


ನಗರದ ಹೃದಯ ಭಾಗದಲ್ಲಿರುವ ತಾಲ್ಲೂಕು ಕಚೇರಿ ಮುಂಭಾಗದಲ್ಲಿರುವ ಪ್ರವಾಸಿ ಮಂದಿರದ ಆವರಣದಲ್ಲಿ ರಾತ್ರಿಯಿಡೀ ನೀರು ವ್ಯರ್ಥವಾಗಿ ಹರಿಯುತ್ತಿದ್ದ ದೃಶ್ಯ ಮಾತ್ರ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ನಗರದ ಮಧ್ಯ ಭಾಗದಲ್ಲಿರುವ ತಾಲ್ಲೂಕು ಕಚೇರಿಯ ಮುಂಭಾಗದ ರಸ್ತೆಯಲ್ಲಿ ವಾಸವಿ ವೃತ್ತ, ಒನಕೆ ಓಬವ್ವ ವೃತ್ತದ ಮೂಲಕ ಹರಿದು ಜಿಲ್ಲಾ ಖಜಾನೆಯ ಬಿಳಿಯ ಚರಂಡಿಗೆ ನೀರು ಹರಿದಿದೆ.

ಹೇಳಿ ಕೇಳಿ ಚಿತ್ರದುರ್ಗ ಬಯಲು ಸೀಮೆ. ಇಲ್ಲಿ ನೀರಿಗಾಗಿ ಆಗಾಗ ಸಮಸ್ಯೆ ಕಾಣಿಸುತ್ತಲೇ ಇರುತ್ತದೆ. ಇರುವ ನೀರನ್ನು ವ್ಯರ್ಥ ಮಾಡದಂತೆ ಕಾಪಾಡಿಕೊಳ್ಳಬೇಕಿದೆ. ಆದರೆ ಹೀಗೆ ಸರ್ಕಾರಿ ಕಚೇರಿಗಳಲ್ಲೇ ನೀರು ವ್ಯರ್ಥವಾದರೇ ಹೇಗೆ ಎಂಬುದು ನೋಡುಗರ ಆಕ್ರೋಶವಾಗಿತ್ತು.


ಬುಧವಾರ ಮಧ್ಯರಾತ್ರಿ ಸುಮಾರು 1 ಗಂಟೆಯಿಂದ ಗುರುವಾರ ಬೆಳಿಗ್ಗೆ 6 ಗಂಟೆಯಾದರೂ ನೀರು ಪೋಲಾಗಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಸುದ್ದಿಒನ್ ಗೆ ಮಾಹಿತಿ ನೀಡಿದರು. ನಗರದಲ್ಲಿಯೇ ಕೆಲವು ಪ್ರದೇಶಗಳಲ್ಲಿ 15 ದಿನಗಳಾದರೂ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ. ಕುಡಿಯುವ ನೀರಿಗೆ ಜನ ಸಂಕಷ್ಟ ಪಡುತ್ತಿದ್ದಾರೆ. ಇಲ್ಲಿ ನೋಡಿದರೆ ಮಧ್ಯರಾತ್ರಿಯಲ್ಲಿ ಪೋಲಾಗುತ್ತಿರುವುದನ್ನು ನೋಡಿದರೆ ತುಂಬಾ ನೋವಾಗುತ್ತದೆ ಎಂಬುದು ನೀರಿನ ಮಹತ್ವ ಅರಿತಿದ್ದವರ ಪ್ರತ್ಯಕ್ಷದರ್ಶಿಗಳ ಮಾತಾಗಿತ್ತು. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಹೀಗೆ ಅತ್ಯಮೂಲ್ಯವಾದ ಜೀವಜಲ ವ್ಯರ್ಥವಾಗದಂತೆ ನೋಡಿಕೊಳ್ಳಲಿ ಎಂಬುದು ಸಾರ್ವಜನಿಕರ ಅಭಿಪ್ರಾಯ.

 

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment