Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೊಸದುರ್ಗ ತಾಲೂಕಿನ 36916 ಹೆಕ್ಟೇರ್ ಪ್ರದೇಶಕ್ಕೆ ಹನಿ ನೀರಾವರಿ; 85 ಕೆರೆಗಳಿಗೆ ನೀರುಣಿಸುವ ಬೃಹತ್ ಯೋಜನೆಗೆ ಮುಖ್ಯಮಂತ್ರಿ ಚಾಲನೆ

Facebook
Twitter
Telegram
WhatsApp

ಚಿತ್ರದುರ್ಗ,( ಜೂನ್.02) : ಹೊಸದುರ್ಗ ತಾಲೂಕಿನ ಜನರ ಬಹುದಿನಗಳ ಕನಸಾಗಿದ್ದ ನೀರಾವರಿ ಯೋಜನೆಗಳು ನನಸಾಗುತ್ತಿವೆ. ಭದ್ರಾ ಮೇಲ್ಡಂಡೆ ಯೋಜನೆ ಕಾಮಗಾರಿಗಳಿಗೆ ವೇಗ ಸಿಗುತ್ತಿದೆ.

ಜೂನ್ 04 ರಂದು ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಹೊಸದುರ್ಗ ತಾಲೂಕಿನ ಕಸಬಾ, ಮಾಡದಕೆರೆ ಮತ್ತು ಶ್ರೀರಾಂಪುರ ಹೋಬಳಿಯ 116 ಗ್ರಾಮಗಳ 36916 ಹೆಕ್ಟೇರ್ ಕೃಷಿ ಭೂಮಿಯ ಖರೀಫ್ ಬೆಳೆಗಳಿಗೆ ಡ್ರಿಪ್ ಮೂಲಕ ಹನಿ ನೀರಾವರಿ ಒದಗಿಸುವ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಇದರೊಂದಿಗೆ ತಾಲೂಕಿನ 85 ಕೆರೆಗಳ ಸಾಮಥ್ರ್ಯದ ಶೇ.50 ನೀರು ತುಂಬುವ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಹೊಸದುರ್ಗ ತಾಲೂಕಿನ ಇಂಡಿದೇವರಹಟ್ಟಿ ಗ್ರಾಮದ ಬಳಿ ಜೂನ್ 4 ರಂದು ಮಧ್ಯಾಹ್ನ 2 ಗಂಟೆಗೆ ವಿಶ್ವೇಶ್ವರಯ್ಯ ಜಲನಿಗಮ ನಿಯಮಿತದಿಂದ ಭೂಮಿಪೂಜೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಪ್ರಮುಖ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಿ ಹಸ್ತಾಂತರಿಸುವ ಆಧಾರದ ಮೇಲೆ, ಪ್ರತಿಷ್ಠಿತ ನಿರ್ಮಾಣ ಸಂಸ್ಥೆಗಳಾದ  ಎನ್.ಸಿ.ಸಿ, ಜೈನ್ ಇರಿಗೇಷನ್ ಹಾಗೂ ಓಶಿಯನ್ ಕನ್ಸ್‍ಸ್ಟ್ರಕಷನ್ ಇಂಡಿಯಾ ಪ್ರೈವ್ಹೇಟ್ ಲಿಮಿಟೆಡ್ ಕಂಪನಿಗಳಿಗೆ ಗುತ್ತಿಗೆ ನೀಡಲಾಗಿದೆ.

ವಾಣಿ ವಿಲಾಸ ಸಾರದ ಹಿನ್ನೀರಿನಲ್ಲಿ ಬೃಹತ್ ಸೇತುವೆ ನಿರ್ಮಾಣ: ಹೊಸದುರ್ಗ ತಾಲ್ಲೂಕಿನ ವಾಣಿ ವಿಲಾಸ ಜಲಾಶಯದ ಹಿನ್ನೀರಿನ ಪ್ರದೇಶದಲ್ಲಿ ವಿಶ್ವೇಶ್ವರಯ್ಯ ಜಲ ನಿಮಗದಿಂದ ಬೃಹತ್ ಸೇತುವೆ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ.

ಜಲಾಶಯದ ಹಿನ್ನೀರಿನ ಎಡಭಾಗದ ಮಾಡದಕೆರೆ, ಬಲಭಾಗದ ಮತ್ತೋಡು ಮತ್ತು ಶ್ರೀರಾಂಪುರ ಹೋಬಳಿ ಜನರು ಸುಗಮವಾಗಿ ಸಂಚರಿಸಲು ಅನುಕೂಲವಾಗುವಂತೆ ಬೇವಿಹಳ್ಳಿ ಗ್ರಾಮದಿಂದ ಹುಣಸೇಕಟ್ಟೆ ಗ್ರಾಮದವರೆಗೆ 4684 ಮೀಟರ್ ರಸ್ತೆ ಹಾಗೂ 1140 ಮೀ ಉದ್ದದ ಸೇತುವೆಯನ್ನು ನಿರ್ಮಿಸಲಾಗುತ್ತಿದೆ. 136 .50ಕೋಟಿ ರೂಪಾಯಿಗಳ ವೆಚ್ಚದ ಕಾಮಗಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಚಾಲನೆ ನೀಡುವರು.

ಕಳೆದ 100 ವರ್ಷಗಳಿಂದ ಬವಣೆಗೆ ಒಳಗಾಗಿದ್ದ, ಈ ಭಾಗದ 50 ಸಾವಿರ ಜನರ ದೈನಂದಿನ ಓಡಾಟದ ಸಮಸ್ಯೆಗೆ ಮುಕ್ತಿ ಸಿಗಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಮನೆಯಿಂದ ಮತಚಲಾಯಿಸಿದ 3536 ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರು

ಚಿತ್ರದುರ್ಗ. ಏ.16: ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನ ಸಭಾ ಕ್ಷೇತ್ರಗಳಲ್ಲಿ ಏಪ್ರಿಲ್ 13 ರಿಂದ 16 ವರೆಗೆ ಜರುಗಿದ ಮನೆಯಿಂದ ಮತದಾನ ಕಾರ್ಯ ಪೂರ್ಣಗೊಂಡಿದೆ. 85 ವರ್ಷ ಮೇಲ್ಪಟ್ಟ 2601 ನಾಗರಿಕರು

ಪಿಯುಸಿಯಲ್ಲಿ 2 ಬಾರಿ ಫೇಲ್.. ಯುಪಿಎಸ್ಸಿಯಲ್ಲಿ ಪಾಸ್.. ಕನ್ನಡದಲ್ಲೇ ಪರೀಕ್ಷೆ ಬರೆದ ಬಳ್ಳಾರಿಯ ಶಾಂತಪ್ಪ ಬಗ್ಗೆ ಇಲ್ಲಿದೆ ಮಾಹಿತಿ

ಬಳ್ಳಾರಿ: ಯುಪಿಎಸ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಅದರಲ್ಲಿ 1016 ಅಭ್ಯರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಇದರಲ್ಲಿ ನಮ್ಮ ಕರ್ನಾಟಕದ ಶಾಂತಪ್ಪ ಜಡೆಮ್ಮನವರ್ ಕೂಡ ತೇರ್ಗಡೆಯಾಗಿದ್ದಾರೆ. ಶಾಂತಪ್ಪ ಮೂಲತಃ ಬಳ್ಳಾರಿಯವರು. ಕನ್ನಡದಲ್ಲಿಯೇ ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿರುವುದು

ಯುಪಿಎಸ್ಸಿ ಪರೀಕ್ಷಾ ಫಲಿತಾಂಶ ಪ್ರಕಟ : ಟಾಪ್ ಪಟ್ಟಿಯಲ್ಲಿರುವವರ ಮಾಹಿತಿ ಇಲ್ಲಿದೆ

ಯುಪಿಎಸ್ಸಿ 2023ರ ಸಿವಿಲ್ ಸರ್ವಿಸಸ್ ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಅದರಲ್ಲಿ ಆದಿತ್ಯಾ ಶ್ರೀವಾಸ್ತವ್ ಹೆಚ್ಚಿನ ಅಂಕವನ್ನು ಪಡೆಯುವ ಮೂಲಕ ಮೊದಲ ಸ್ಥಾನ ಪಡೆದಿದ್ದಾರೆ. ಅನಿಮೇಶ್ ಹಾಗೂ ಪ್ರಧಾನ್, ಡೊನೂರ್ ಅನನ್ಯಾ ರೆಡ್ಡಿ

error: Content is protected !!