Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನೀರಿನ ಅಸಮರ್ಪಕ ಬಳಕೆಯಿಂದ ಬರ | ಪ್ರತಿಯೊಬ್ಬರು ಜಲಸಂರಕ್ಷಣೆಗೆ ಒತ್ತು ನೀಡಿ

Facebook
Twitter
Telegram
WhatsApp

ಚಿತ್ರದುರ್ಗ. ಫೆ.23:   ನೀರಿನ ಅಸಮರ್ಪಕ ಬಳಕೆಯಿಂದ ನೀರಿನ ಸಮಸ್ಯೆ ಹಾಗೂ ಬರ ಹೆಚ್ಚಾಗುತ್ತಿದೆ.  ಪ್ರತಿಯೊಬ್ಬರು ಜಲರಕ್ಷಕರಾಗಿ ಎಚ್ಚೆತ್ತುಕೊಂಡಾಗ ಮಾತ್ರ ಅಮೂಲ್ಯವಾದ ನೀರನ್ನು ಜೋಪಾನವಾಗಿ ಕಾಪಾಡಲು ಸಾಧ್ಯ ಎಂದು ಚಿತ್ರದುರ್ಗ ಆಕಾಶವಾಣಿ ಕಾರ್ಯಕ್ರಮ ಮುಖ್ಯಸ್ಥರಾದ ಎಂ.ರೇಣುಕಾ ಪ್ರಕಾಶ್ ತಿಳಿಸಿದರು.

 

ಇಲ್ಲಿನ ಆಕಾಶವಾಣಿ ಕೇಂದ್ರದಲ್ಲಿ ಶುಕ್ರವಾರ ಜಿಯೋ ರೈನ್ ವಾಟರ್ ಬೋರ್ಡ್ ಮತ್ತು ಆಕಾಶವಾಣಿ ವತಿಯಿಂದ ನಡೆದ ಜಿಯೋ ರೈನ್ ವಾಟರ್ ಬೋರ್ಡ್ ಜಲ ರಕ್ಷಕರು ಪ್ರಾಯೋಜಿತ ಸರಣಿಯ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹಲವಾರು ನದಿ, ಕೆರೆಗಳಲ್ಲಿ ನೀರು ಕಡಿಮೆಯಾಗುತ್ತಿದ್ದು, ನೀರಿನ ಸಮಸ್ಯೆ ಸಾರ್ವತ್ರಿಕ ಸಮಸ್ಯೆಯಾಗಿದೆ. ಪ್ರತಿಯೊಬ್ಬರು ಜಲಸಂರಕ್ಷಣೆಗೆ ಒತ್ತು ನೀಡಬೇಕು. ಮಳೆ ನೀರು ಕೊಯ್ಲು ಮಾಡುವುದರಿಂದ ನೀರಿಗೆ ಬೇರೆಯವರ ಮೇಲೆ ಅವಲಂಬಿತರಾಗುವುದು ತಪ್ಪಲಿದೆ.  ಜಲ ರಕ್ಷಕ ಸರಣಿ ಕಾರ್ಯಕ್ರಮದಲ್ಲಿ ವಿಜೇತರಾದವರು ಮುಂದಿನ ದಿನಗಳಲ್ಲಿ ಜಲ ತಜ್ಞರು ಹಾಗೂ ಜಲರಕ್ಷಕರಾಗಬೇಕು ಎಂದು ಕಿವಿಮಾತು ಹೇಳಿದರು.
ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ಮಾತನಾಡಿ, ನೀರಿಲ್ಲದ ಬದುಕು ಊಹಿಸಿಕೊಳ್ಳಲು ಸಾಧ್ಯವಿಲ್ಲ. ನೀರಿಗಾಗಿ ದೇಶ ದೇಶಗಳ ನಡುವೆ ಯುದ್ದವಾದರೂ ಆಶ್ಚರ್ಯವಿಲ್ಲ. ಜನ-ಜಾನುವಾರುಗಳಿಗೆ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಬಾರದು ಎಂದು  ಜಿಲ್ಲಾಡಳಿತದಿಂದ ಕ್ರಿಯಾ ಯೋಜನೆ ಸಿದ್ದವಾಗಿದೆ. ಪರಿಸರ ಕಾಡುಗಳ ನಾಶ. ಜಾಗತೀಕರಣದಿಂದ ನಗರೀಕರಣದೆಡೆಗೆ ಸಾಗುತ್ತಿರುವುದು ಕೂಡ ನೀರಿನ ಕೊರತೆಗೆ ಕಾರಣವಾಗಿದೆ. ಸರ್ಕಾರದ ಎಲ್ಲಾ ಪ್ರಯತ್ನಗಳಿಗೆ ಜನಸಾಮಾನ್ಯರು ಕೈಜೋಡಿಸಬೇಕು.

ಭೂಮಿಯಿಂದ ನೀರನ್ನು ಮೇಲಕ್ಕೆತ್ತುವ ಕೆಲಸವಾಗುತ್ತಿದೆಯೇ ವಿನಃ ನೀರನ್ನು ಇಂಗಿಸುವ ಕಡೆ ಯಾರು ಗಮನ ಕೊಡದಿರುವುದು ಬೇಸರದ ಸಂಗತಿ ಎಂದು ವಿಷಾಧಿಸಿದರು.
ಪ್ಲಾಸ್ಟಿಕ್ ಬಳಕೆ ಹೆಚ್ಚಾಗುತ್ತಿರುವುದು ಪರಿಸರಕ್ಕೆ ಮಾರಕವಾಗಿದೆ. ಪ್ರತಿ ಮನೆಗಳಲ್ಲಿಯೂ ಮಳೆ ನೀರು ಕೊಯ್ಲು ಅಳವಡಿಸಿಕೊಂಡರೆ ನೀರಿನ ಸಮಸ್ಯೆಗೆ ಉಪಾಯ ಕಂಡುಕೊಳ್ಳಬಹುದು ಎಂದು ಹೇಳಿದರು.

ಅಂತರ್ಜಲ ತಜ್ಞ ಎನ್.ಜೆ.ದೇವರಾಜರೆಡ್ಡಿ ಮಾತನಾಡಿ, ಆಕಾಶವಾಣಿ ಕಾರ್ಯಕ್ರಮದಲ್ಲಿ ನೀರಿನ ಮಿತ ಬಳಕೆ ಹಾಗೂ ಸಂರಕ್ಷಣೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಸಾಕಷ್ಟು ಪ್ರಯೋಜನಕಾರಿಯಾಗಿದೆ. ಆಕಾಶವಾಣಿಯಲ್ಲಿ ಸರಣಿ ಕಾರ್ಯಕ್ರಮ ನೀಡಬೇಕಾದರೆ ಸಾಕಷ್ಟು ಸಿದ್ದತೆ ಮಾಡಿಕೊಳ್ಳಬೇಕು. ಚಿತ್ರದುರ್ಗ ಆಕಾಶವಾಣಿಗೆ ತನ್ನದೆ ಆದ ಇತಿಹಾಸವಿದೆ. ಇಲ್ಲಿ ನೀಡಿದ ಮೂರು ಕಾರ್ಯಕ್ರಮಗಳಿಂದ ವಿಭಿನ್ನವಾದ ಪಾಠ ಕಲಿತಿದ್ದೇನೆ. ಊಟಕ್ಕೆ ಸಮಸ್ಯೆಯಿಲ್ಲ. ಸಾಕಷ್ಟು ಆಹಾರ ಧಾನ್ಯಗಳಿವೆ. ಆದರೆ ನಮ್ಮ ಮುಂದಿರುವ ಸವಾಲೆಂದರೆ ಜಲ ರಕ್ಷಿಸುವುದು ಎನ್ನುವುದನ್ನು ಯಾರು ಮರೆಯಬಾರದು. ಮಳೆ ನೀರು ಕೊಯ್ಲು ಕುರಿತು ಮನೆ ಮನೆಗಳಲ್ಲಿ ಜಾಗೃತಿ ಮೂಡಬೇಕಿದೆ ಎಂದರು.

ಜಲರಕ್ಷಕ ಕಾರ್ಯಕ್ರಮ ನಿರೂಪಕರಾದ ದ್ಯಾಮಲಾಂಬ ಉಪಸ್ಥಿತರಿದ್ದರು. ಜಲರಕ್ಷಕರು ಆಕಾಶವಾಣಿ ಕಾರ್ಯಕ್ರಮ ಸರಣಿಯ ಸ್ಪರ್ಧೆಯಲ್ಲಿ ವಿಜೇತರಾದ ಬಾಗಲಕೋಟೆ ಜಿಲ್ಲೆ ಮುದೋಳ ತಾಲ್ಲೂಕಿನ ಸಂಗಪ್ಪ ತೇರದಾಳ್, ಚಿತ್ರದುರ್ಗ ಜಿಲ್ಲೆ ಚಳ್ಳೆಕೆರೆ ತಾಲ್ಲೂಕಿನ ಜುಂಜರಗುಂಟೆ ಗ್ರಾಮದ ಬಿ.ಶ್ರೇಯಸ್, ನರಸಿಂಹಸ್ವಾಮಿ, ಚಿತ್ರದುರ್ಗ ನಗರದ ಚಿಕ್ಕಪೇಟೆಯ ರೂಪ ಪಾಂಡುರಂಗರಾವ್, ಗೋನೂರು ಗ್ರಾಮದ ಉಷ ಎಂ.ಮಂಜಣ್ಣ, ಬಚ್ಚಬೋರನಹಟ್ಟಿಯ ಸಣ್ಣಬೋರಯ್ಯ, ನಗರದ ಕೆ.ಮೂಗಬಸಪ್ಪ, ಮೊಳಕಾಲ್ಮುರು ತಾಲ್ಲೂಕಿನ ಓಬಣ್ಣ, ಪಾಪಣ್ಣ, ಹಿರಿಯೂರು ತಾಲ್ಲೂಕಿನ ಗಿರೀಶ್, ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಗ್ರಾಮದ ಸುಬ್ರಾಯ ಎಲ್.ಹೆಗ್ಡೆ ಇವರುಗಳಿಗೆ ಬಹುಮಾನ ವಿತರಿಸಲಾಯಿತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಲಗುವ ಮುನ್ನ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

  ಸುದ್ದಿಒನ್ : ಬಾಳೆಹಣ್ಣಿನಲ್ಲಿ ಅನೇಕ ಪೋಷಕಾಂಶಗಳು ಅಡಗಿವೆ. ಇವು ದೇಹಕ್ಕೆ ತುಂಬಾ ಒಳ್ಳೆಯದು. ಅದಕ್ಕಾಗಿಯೇ ಸದಾ ಲಭ್ಯವಿರುವ ಬಾಳೆಹಣ್ಣನ್ನು ತಿನ್ನಲು ತಜ್ಞರು ಸಲಹೆ ನೀಡುತ್ತಾರೆ. ಬಾಳೆ ಹಣ್ಣಿನಲ್ಲಿ ಪೊಟ್ಯಾಸಿಯಮ್, ವಿಟಮಿನ್ ಸಿ, ವಿಟಮಿನ್

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು!

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು! ಈ ರಾಶಿಯವರು ದೊಡ್ಡ ಮಹಾತ್ಮಾಕಾಂಕ್ಷೆ ಹೊಂದಿರುವರು, ಸೋಮವಾರ- ರಾಶಿ ಭವಿಷ್ಯ ಮೇ-20,2024 ಸೂರ್ಯೋದಯ: 05:46, ಸೂರ್ಯಾಸಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

error: Content is protected !!