Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿಲ್ಲೆಯ ರೈತರಿಗೆ ಬರ ಪರಿಹಾರ ಶೀಘ್ರ : ಕೆಡಿಪಿ ಸಭೆಯಲ್ಲಿ ಜಂಟಿಕೃಷಿ ನಿರ್ದೇಶಕ ಮಂಜುನಾಥ್ ಮಾಹಿತಿ

---Advertisement---

ಸುದ್ದಿಒನ್, ಚಿತ್ರದುರ್ಗ, ಜನವರಿ.16 : ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರ ನೇತೃತ್ವದಲ್ಲಿ ಜಿಲ್ಲಾ ಪಂಚಾಯಿತಿ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ರಾಜ್ಯ ಸರ್ಕಾರದಿಂದಲೇ ರೈತರಿಗೆ ಗರಿಷ್ಟ 2 ಸಾವಿರ ಪರಿಹಾರವನ್ನು ಪಾವತಿಸಲು ಅಗತ್ಯ ದತ್ತಾಂಶವನ್ನು ಈಗಾಗಲೆ ಸಲ್ಲಿಸಲಾಗಿದ್ದು, ಶೀಘ್ರವೇ ಪರಿಹಾರ ಮೊತ್ತ ರೈತರಿಗೆ ಪಾವತಿಯಾಗಲಿದೆ ಎಂದು ಜಂಟಿಕೃಷಿ ನಿರ್ದೇಶಕ ಮಂಜುನಾಥ್ ತಿಳಿಸಿದರು.

ಮಳೆಯ ಕೊರತೆಯಿಂದಾಗಿ ಜಿಲ್ಲೆಯ 06 ತಾಲ್ಲೂಕುಗಳನ್ನು ಈಗಾಗಲೆ ಬರ ಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ಜಿಲ್ಲೆಯಲ್ಲಿ 2.35 ಲಕ್ಷ ಹೆ. ನಲ್ಲಿ ಬೆಳೆ ಹಾನಿಯಾಗಿದೆ.
ಹೀಗಾಗಿ ನಿಯಮಾನುಸಾರ ಇನ್‍ಪುಟ್ ಸಬ್ಸಿಡಿ ನೀಡುವಂತೆ ಜಿಲ್ಲೆಯಿಂದ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಬೆಳೆ ಪರಿಹಾರ ಪಾವತಿಯಲ್ಲಿ ದುರುಪಯೋಗ ತಡೆಯಲು ಈ ಬಾರಿ ಫ್ರುಟ್ಸ್ ತಂತ್ರಾಂಶ ಹಾಗೂ ಬೆಳೆ ಕಟಾವು ಸಮೀಕ್ಷೆ ಆಧಾರದಲ್ಲಿ ಪರಿಹಾರವನ್ನು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುವುದು ಎಂದು ಹೇಳಿದರು.

ಜಿಲ್ಲಾಧಿಕಾರಿಗಳು ಮಾತನಾಡಿ, ಫ್ರುಟ್ಸ್ ತಂತ್ರಾಂಶದಲ್ಲಿ ಮಾಹಿತಿ ಜೋಡಣೆ ಕಾರ್ಯ ಜಿಲ್ಲೆಯಲ್ಲಿ ಈಗಾಗಲೆ ಶೇ. 81 ರಷ್ಟು ಪೂರ್ಣಗೊಂಡಿದ್ದು, ರೈತ ಸಮುದಾಯದಲ್ಲಿ ಈ ಬಗ್ಗೆ ವ್ಯಾಪಕ ತಿಳುವಳಿಕೆ ನೀಡುವ ಕಾರ್ಯ ನಡೆಯುತ್ತಿದೆ ಎಂದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment