ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ತಾವು ಬಿಡುಗಡೆ ಮಾಡಿರುವ 105 ಕೋಟಿ ಎಷ್ಟು ಲಕ್ಷ ಜನ ರೈತರಿಗೆ ತಲುಪಲಿದೆ. ಅರೆಕಾಸಿನ ಮಜ್ಜಿಗೆಗೂ ಸಾಲುವುದಿಲ್ಲ. ಅಗಾಧ ಪ್ರಮಾಣದ ಬರ ಮತ್ತು ತಾವು ಬಿಡುಗಡೆ ಮಾಡಿರುವ ಹಣವನ್ನು ನೋಡಿದರೆ, ರೈತರಿಗೆ ಚಿಲ್ಲರೆ ಕಾಸಿನ ಭಿಕ್ಷೆ ಕೊಟ್ಟಂತೆ ಕಾಣುತ್ತದೆ ಎಂದು ಸರಣಿ ಟ್ವೀಟ್ ಮಾಡುವ ಮೂಲಕ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ಹೊರ ಹಾಕಿದ್ದಾರೆ.
NDRF ಮಾರ್ಗಸೂಚಿ ಪ್ರಕಾರ ಕೇಂದ್ರ ಸರ್ಕಾರ ಬಿಡುಗಡೆ ಮಾಡುವ ಹಣದ ಬಗ್ಗೆ ನಾವೂ ಕೂಡ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ. ಆದರೆ, ನಿಮ್ಮನ್ನು ಆಯ್ಕೆ ಮಾಡಿ ಅಧಿಕಾರದ ಗದ್ದುಗೆಗೆ ಕೂಡಿಸಿರುವ ರೈತಾಪಿ ವರ್ಗವನ್ನು ರಕ್ಷಿಸುವಂತದ್ದು ನಿಮ್ಮ ಕರ್ತವ್ಯ ನೀವು ಕೂಡಲೇ ಸಂಪೂರ್ಣವಾಗಿರುವ ಹಣವನ್ನು ಬಿಡುಗಡೆ ಮಾಡಬೇಕೆಂದು ಆಗ್ರಹ ಮಾಡುತ್ತೇನೆ.
ಈಗಾಗಲೇ ಸಾಕಷ್ಟು ಕಾಲಹರಣವನ್ನು ಮಾಡಿರುತ್ತೀರಿ, ರಾಜ್ಯದ ಆರ್ಥಿಕ ಸ್ಥಿತಿ ಉತ್ತಮ ಇದೆ ಎಂದು ಬೆನ್ನು ತಟ್ಟಿಕೊಳ್ಳುತ್ತಿರುವ ನಿಮ್ಮ ಸರ್ಕಾರ ಯಾಕೆ ರೈತರ ಪರಿಹಾರವನ್ನು ಪೂರ್ಣ ಬಿಡುಗಡೆ ಮಾಡುತ್ತಿಲ್ಲ. ಕೇಂದ್ರ ಸರ್ಕಾರಕ್ಕೆ 18000 ಕೋಟಿ ಬರ ಪರಿಹಾರಕ್ಕೆ ಮನವಿ ಮಾಡಿರುವ ರಾಜ್ಯ ಸರ್ಕಾರ 105 ಕೋಟಿ ಬಿಡುಗಡೆ ಮಾಡಿದ್ದು, ಶೇ 1 % ರಷ್ಟು ಆಗಿಲ್ಲ ಎಂದು ರೈತಾಪಿ ವರ್ಗದವರು ಕೇಳುತ್ತಿದ್ದಾರೆ. ಮಾತಿನಲ್ಲಲ್ಲಾ ಕೃತಿಯಲ್ಲಿ ನಿಮ್ಮ ಬದ್ದತೆ ತೋರಿಸಬೇಕು. ಕಳೆದ ವರ್ಷ ಪ್ರವಾಹದ ಸಂದರ್ಭದಲ್ಲಿ ನಾವು ಕೇವಲ ಎರಡು ತಿಂಗಳಲ್ಲಿ ಎನ್ ಡಿ ಆರ್ ಎಫ್ ನಿಯಮದ ಪ್ರಕಾರ ಒಟ್ಡು 2031 ಕೋಟಿ ನಾವು ಬಿಡುಗಡೆ ಮಾಡಿದ್ದೇವೆ ಹೀಗಾಗಿ ಈ ಪ್ರಶ್ನೆ ಕೇಳುವ ಹಕ್ಕು ನಮಗಿದೆ.
ರೈತರ ಪರವಾಗಿ ಅವರ ಹಿತಾಸಕ್ತಿ ಕಾಪಾಡುವುದು ಮತ್ತು ಅವರ ಹಕ್ಕನ್ನು ಕೊಡಿಸುವುದರಲ್ಲಿಯೇ ನನ್ನ ರಾಜಕೀಯ ಅಸ್ತಿತ್ವ ಇದೆ ಎಂದು ನಾನು ನಂಬಿದ್ದೇನೆ. ಅದಕ್ಕಾಗಿ ಸದಾ ನಾನು ರೈತರ ಪರ ಧ್ವನಿ ಎತ್ತಲು ಸಿದ್ದನಿದ್ದೇನೆ ಎಂದು ಸಾಲು ಸಾಲು ಟ್ವೀಟ್ ಮಾಡಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್