Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಸೇರಿದಂತೆ 12 ಜಿಲ್ಲೆಗಳಲ್ಲಿ ಬರ ಸಮೀಕ್ಷೆ : ನಾಳೆ ಭೇಟಿ ನೀಡಲಿರುವ ಕೇಂದ್ರದ ತಂಡ

---Advertisement---

 

ನವದೆಹಲಿ: ರಾಜ್ಯದಲ್ಲಿ ಮಳೆ ಇಲ್ಲದೆ ಬೆಳೆಯೂ ಕೈಗೆ ಸಿಗದೆ ರೈತ ಕಂಗಲಾಗಿ ಕುಳಿತಿದ್ದಾನೆ. ಈ ವರ್ಷದ ಕೃಷಿಯ ಕನಸು ಅಷ್ಟೇ ಎಂಬ ಚಿಂತೆಯಲ್ಲಿ ರೈತನಿದ್ದಾನೆ. ರಾಜ್ಯದಲ್ಲಿ ಬರದ ಸ್ಥಿತಿ ಉಂಟಾಗಿದ್ದು, ಈಗಾಗಲೇ 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಇದೀಗ ಬರ ಸಮೀಕ್ಷೆ ನಡೆಸಲು ಕೇಂದ್ರದಿಂದಾನೇ ನಾಳೆ ತಂಡವೊಂದು ರಾಜ್ಯಕ್ಕೆ ಆಗಮಿಸಲಿದೆ.

ಕೇಂದ್ರ ಸರ್ಕಾರದ ಮೂರು ತಂಡ ನಾಳೆ ರಾಜ್ಯಕ್ಕೆ ಭೇಟಿ ನೀಡಲಿದೆ. ನಾಳೆಯಿಂದ ಅಕ್ಟೋಬರ್ 9ರವರೆಗೂ ಒಟ್ಟು ಹನ್ನೆರಡು ಜಿಲ್ಲೆಗಳಲ್ಲಿ ಸಮೀಕ್ಷೆ ನಡೆಸಲಿದೆ. ಬರದ ಸಮೀಕ್ಷೆಯ ಪ್ರವಾಸಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆ ಕೂಡ ನಡೆಯಲಿದೆ.

ಚಿತ್ರದುರ್ಗ, ದಾವಣಗೆರೆ, ಧಾರವಾಡ, ತುಮಕೂರು, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಕೊಪ್ಪಳ, ವಿಜಯನಗರ, ಚಿಕ್ಕಬಳ್ಳಾಪುರ ಸೇರಿದಂತೆ 12 ಜಿಲ್ಲೆಗಳಲ್ಲಿ ಸಮೀಕ್ಷೆ ನಡೆಸಲಿದೆ. ಕೇಂದ್ರದ ಬಳಿ ಬರ ಪೀಡಿತ ಪ್ರದೇಶಗಳಿಗೆ 6 ಸಾವಿರ ಕೋಟಿ ಪರುಹಾರವನ್ನು ಕೇಳಿದೆ. ಈಗ ಕೇಂದ್ರದ ತಂಡ ಪರಿಶೀಲನೆ ನಡೆಸಿ, ಯಾವ ರೀತಿಯ ವರದಿ ನೀಡಲಿದೆ ಅದರ ಮೇಲೆ ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆಯಾಗಲಿದೆ.

ಮುಂಗಾರು ಮಳೆ ಕೈಕೊಟ್ಟಿದ್ದೇ ರೈತರಿಗೆ ದೊಡ್ಡ ನಷ್ಟ ಉಂಟಾಗಿರುವುದು. ಮುಂಗಾರು ಮಳೆಯಲ್ಲಿ ಮಳೆ ಬೆಳೆಯ ಬಿತ್ತನೆ ಮಾಡಲಾಗುತ್ತದೆ. ಆದರೆ ಈ ಬಾರಿಯ ಬಿತ್ತನೆಗೆ ಮಳೆಯ ಹನಿಯೇ ಬೀಳದೆ ರೈತ ಸಂಕಷ್ಟಕ್ಕೆ ಸಿಲುಕಿದ್ದಾನೆ. ಹೀಗಾಗಿ ರಾಜ್ಯ ಸರ್ಕಾರ ರಾಜ್ಯದ ರೈತರ ಪರಿಸ್ಥಿತಿ ಕಂಡು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಿತ್ತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment