Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆಯ ದುಗ್ಗಮ್ಮ ಜಾತ್ರೆಯಲ್ಲಿ ಬಳೆಗಳದ್ದೇ ಸದ್ದು : 1 ಕೋಟಿ ವಹಿವಾಟು

Facebook
Twitter
Telegram
WhatsApp

ದಾವಣಗೆರೆ: ಜಿಲ್ಲೆಯಲ್ಲಿ ಪ್ರತಿ ಎರಡು ವರ್ಷಕ್ಕೊಮ್ಮೆ ದುಗ್ಗಮ್ಮ ಜಾತ್ರೆ ನಡೆಯಲಿದೆ. ಈ ಬಾರಿಯೂ ದುಗ್ಗಮ್ಮ ಜಾತ್ರೆಯನ್ನು ಅದ್ದೂರಿಯಾಗಿ ಮಾಡಲಾಗಿದೆ. ದುಗ್ಗಮ್ಮ ಜಾತ್ರೆ ಬರೋಬ್ಬರಿ ಒಂದು ತಿಂಗಳ ಕಾಲ ನಡೆಯಲಿದೆ. ಈ ಜಾತ್ರೆಗೆ ಸುತ್ತಮುತ್ತಲಿನ ಜನರು ಸಹ ಸೇರುತ್ತಾರೆ. ಇಲ್ಲಿ ಬಳಗಳದ್ದೇ ಸದ್ದು ಇರುತ್ತದೆ‌. ಜೊತೆಗೆ ಆದಾಯವೂ ಕಡಿಮೆ ಏನು ಇಲ್ಲ. ಬಳೆಯಿಂದಾನೇ ಒಂದು ಕೋಟಿಗೂ ಹೆಚ್ಚು ವಹಿವಾಟು ಮಾಡಿಕೊಳ್ಳಲಾಗಿದೆ.

 

ಬೆಣ್ಣೆ ನಗರಿ ದಾವಣಗೆರೆಯ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೂ ಬಳಗಳಿಂದಾನೇ ಸಿಂಗಾರ ಮಾಡಲಾಗಿದೆ. ಬಳೆಗಳೆ ಈ ಜಾತ್ರೆಯ ವಿಶೇಷವಾಗಿದೆ. ಬಳೆಗಳನ್ನು ಮಾರಾಟ ಮಾಡಿಯೇ ಇಲ್ಲಿನ ಬಳೆಗಾರರು ಕೋಟಿ ಕೋಟಿ ಹಣ ದುಡಿಯುತ್ತಾರೆ. ಅಷ್ಟಕ್ಕೂ ಈ ಜಾತ್ರೆಯಲ್ಲಿ ಬಳೆಗಳನ್ನೇ ಮಾರಾಟ ಮಾಡುವುದು ಯಾಕೆ..? ಅದರ ಹಿಂದೆ ಒಂದು ಇತಿಹಾಸವೇ ಇದೆ‌.

 

ದುರ್ಗಾಂಭಿಕೆ ಮೂಲತಃ ವಿಜಯ ನಗರ ಜಿಲ್ಲೆಯ ದುಗ್ಗಾವತಿಯ ಮೂಲದವಳು. ದುಗ್ಗಾವತ್ತಿ ದುಗ್ಗಮ್ಮ ಎನ್ನುತ್ತಾರೆ. ದುಗ್ಗಾವತಿಗೆ ದಾವಣಗೆರೆ ಮೂಲದ ಬಳೆಗಾರನೊಬ್ಬ ಬಳೆ ಮಾರಾಟಕ್ಕೆ ಹೋಗುತ್ತಿದ್ದ. ಅಲ್ಲಿ ರೈತರು ಕೊಟ್ಟ ದವಸ ಧಾನ್ಯಗಳ ಚಕ್ಕಡಿಯ ಮೂಲಕ ತರುವ ಆ ಚಕ್ಕಡಿ ಮೂಲಕವೇ ಕರಿಕಲ್ಲಿನ ರೂಪದಲ್ಲಿ ಬಂದವಳು ದುಗ್ಗಮ್ಮ ಅಥವಾ ದುರ್ಗಾದೇವಿ. ಬಳೆಗಾರನ ಮೂಲಕ ಬಂದು ಇಲ್ಲಿ ಪ್ರತಿಷ್ಠಾಪನೆ ಗೊಂಡು ಖ್ಯಾತಿ ಗಳಿಸಿದ ದುಗ್ಗಮ್ಮನ ನೆನಪಿಗೆ ಬಂದವರು ಬಳೆ ಖರೀದಿ ಮಾಡಲೇ ಬೆೇಕು. ಹೀಗಾಗಿ ಜಾತ್ರೆಗೆ ಬರುವವರೆಲ್ಲಾ ತಾಯಿಯ ದರ್ಶನ ಪಡೆದು, ಪೂಜೆ ಮಾಡಿ, ಜಾತ್ರೆಯಲ್ಲಿ ಸುತ್ತುತ್ತಾರೆ. ಜಾತ್ರೆಯಲ್ಲಿ ಯಾವ ವಸ್ತುವನ್ನು ತೆಗೆದುಕೊಳ್ಳುತ್ತಾರೋ ಬಿಡುತ್ತಾರೋ ಆದರೆ ಬಳೆಯನ್ನು ಎಲ್ಲರು ಕೊಂಡು ಕೊಳ್ಳಲೇಬೇಕು ಎಂಬ ಸಂಪ್ರದಾಯವಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!