Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಣ ದ್ವಿಗುಣ : ಆಂಧ್ರ ಮೂಲದ ಕ್ರೌಡ್ ಕ್ಲಬ್ ಇಂಟರ್ ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ಹೆಸರಿನಲ್ಲಿ ರೂ.4.79 ಕೋಟಿ ಮೋಸ

---Advertisement---

ದಾವಣಗೆರೆ, ಆ.30 :  ಆಂಧ್ರಪ್ರದೇಶದ ಕರ್ನೂಲ್ ಸ್ಕಂದ ಶಾಪಿಂಗ್ ಮಾಲ್, ಓಲ್ಡ್ ಟಾಕೀಸ್ ವಿಳಾಸದ ಕ್ರೌಡ್ ಕ್ಲಬ್ ಇಂಟರ್ ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ಕೋಡೆ ರಮಣಯ್ಯ ತಂದೆ ಕೋಡೆ ಶ್ರೀನಿವಾಸಲು ಇವರು ಈ ಪ್ರೈವೇಟ್ ಲಿಮಿಟೆಡ್‍ನಲ್ಲಿ ಠೇವಣಿ ಇಟ್ಟಲ್ಲಿ 60 ದಿನಗಳಲ್ಲಿ ಹಣ ದ್ವಿಗುಣವಾಗಲಿದೆ ಎಂದು ನಂಬಿಸಿ 106 ಗ್ರಾಹಕರಿಂದ ರೂ.4,79,99,000 ಗಳನ್ನು ಹೂಡಿಕೆ ಮಾಡಿಸಿಕೊಂಡು ಮೋಸ ಮಾಡಲಾಗಿದೆ ಎಂದು ಹೊಳಲ್ಕೆರೆ ತಾಲ್ಲೂಕು ಚಿಕ್ಕಜಾಜೂರು ಗ್ರಾಮದ ರಮೇಶಪ್ಪ ಇವರು ನೀಡಿದ ದೂರು ಮೇರೆಗೆ ಪ್ರಕರಣ ದಾಖಲಿಸಿ ದಾವಣಗೆರೆ ಸಿಐಡಿ, ಸಿಐಯು ಘಟಕದಿಂದ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಉಪಾಧೀಕ್ಷಕರಾದ ಮಾಲತೇಶ್ ಎನ್.ಕೂನಬೇವು ತಿಳಿಸಿದ್ದಾರೆ.

ರಮೇಶಪ್ಪನಿಗೆ ಪರಿಚಯಸ್ಥರಾದ ಟಿ.ವಿ.ಶೇಷಯ್ಯ ಮತ್ತು ಎಂ.ಏಳುಕೊಂಡಲು ಇವರು ಕ್ರೌಡ್ ಕ್ಲಬ್ ಇಂಟರ್ ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ನಲ್ಲಿ ಹಣ ಠೇವಣಿ ಇಟ್ಟಲ್ಲಿ 60 ದಿನಗಳಲ್ಲಿ ಹಣ ದ್ವಿಗುಣವಾಗಲಿದೆ ಎಂದು ತಿಳಿಸಿ ಕಂಪನಿಯ ಙes ಬ್ಯಾಂಕ್ ಖಾತೆ 114563300000374 ಗೆ ಹಣ ವರ್ಗಾವಣೆ ಮಾಡಿದ್ದು 60 ದಿನಗಳ ನಚಿತರ ರಮೇಶಪ್ಪ ರೂ.1,96,000 ರೂ.ಗಳನ್ನು ವಾಪಸ್ ಪಡೆದಿದ್ದರು. ನಾನು ಇಟ್ಟ ಠೇವಣಿಗೆ ಬಾಂಡ್ ಪೇಪರ್ ಮೇಲೆ ಅಗ್ರಿಮೆಂಟ್ ಸಹ ನೀಡಿರುತ್ತಾರೆ. ಇದನ್ನು ನಂಬಿ ನಾನು ಸೇರಿದಂತೆ ಸ್ನೇಹಿತರಿಗೆ ಮತ್ತು ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಪರಿಚಯಸ್ಥರಿಗೆ ತಿಳಿಸಿ ಒಟ್ಟು 106 ಜನರಿಂದ ರೂ. ರೂ.4,79,99,000 ಹೂಡಿಕೆ ಮಾಡಿಸಲಾಗಿತ್ತು. ಈ ಮೊತ್ತಕ್ಕೆ 60 ದಿನಗಳ ನಂತರ ಯಾವುದೇ ಹಣ ವಾಪಸ್ ನೀಡಿರುವುದಿಲ್ಲ. ಇದರಿಂದ ಇಷ್ಟು ಗ್ರಾಹಕರು ಕಂಪನಿಯನ್ನು ನಂಬಿ ಮೋಸ ಹೋಗಿರುತ್ತಾರೆ.

ಪ್ರಕರಣವು ಪ್ರಸ್ತುತ ದಾವಣಗೆರೆ ಸಿಐಡಿ, ಸಿಐಯು ಘಟಕದಲ್ಲಿ ತನಿಖೆ ನಡೆಯುತ್ತಿದ್ದು ಕ್ರೌಡ್ ಕ್ಲಬ್ ಇಂಟರ್ ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ಹೆಸರುಗಳಲ್ಲಿ ಸ್ಥಿರ ಮತ್ತು ಚರ ಆಸ್ತಿಗಳನ್ನು ಮಾಡಿರುವುದಾಗಿ ತಿಳಿದು ಬಂದಿದ್ದು ಈ ಸಂಸ್ಥೆಯ ಹೆಸರಿನಲ್ಲಿ ಆಸ್ತಿ ಇದ್ದಲ್ಲಿ ಮಾಹಿತಿ ನೀಡಲು ಮತ್ತು ಕಂಪನಿಯಿಂದ ಮೋಸ ಹೋಗಿದ್ದಲ್ಲಿ 9480800192 ಗೆ ಮಾಹಿತಿ ನೀಡಲು ತಿಳಿಸಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment