Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾರಘಟ್ಟದಲ್ಲಿ ವಿಜೃಂಭಣೆಯಿಂದ ನಡೆದ ದುರ್ಗಾಂಭಿಕ ದೇವಿ ಜಾತ್ರೆ

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ: ಸೀಬಾರದ ಸಮೀಪವಿರುವ ಮಾರಘಟ್ಟದಲ್ಲಿ ಐದು ವರ್ಷಕ್ಕೊಮ್ಮೆ ನಡೆಯುವ ದುರ್ಗಾಂಭಿಕ ದೇವಿ ಜಾತ್ರೆ ಮೂರು ದಿನಗಳ ಕಾಲ ವಿಜೃಂಭಣೆಯಿಂದ ನಡೆಯಿತು.

ದೇವಸ್ಥಾನ ಸೇರಿದಂತೆ ಇಡಿ ಗ್ರಾಮವನ್ನೇ ವಿದ್ಯುತ್ ದೀಪಗಳಿಂದ ಜಗಮಗಿಸುವಂತೆ ಅಲಂಕರಿಸಲಾಗಿತ್ತು.

ಸಿಡಿ ಕಂಬವನ್ನು ಬಣ್ಣಬಣ್ಣದ ವಸ್ತ್ರ, ಬಾಳೆದಿಂಡು, ಬಲೂನು ಹಾಗೂ ಕಂಬದ ಒಂದು ತುದಿಯನ್ನು ಕಮಾನು ರೀತಿಯಲ್ಲಿ ಸಿಂಗರಿಸಿ ದುರ್ಗಾಂಭ ದೇವಿಯನ್ನು ಬಗೆ ಬಗೆಯ ಹೂವು ಹಾಗೂ ಹಾರಗಳಿಂದ ಅಲಂಕರಿಸಿ ಪೂಜಿಸಲಾಯಿತು. ಎಲ್ಲಾ ಜಾತಿಯವರು ಯಾವುದೇ ತಾರತಮ್ಯವಿಲ್ಲದೆ ಜಾತ್ರೆಯಲ್ಲಿ ದುರ್ಗಾಂಭಿಕ ದೇವಿಗೆ ಭಕ್ತಿ ಸಮರ್ಪಿಸಿದರು.

ಸಿಡಿ ಆಡಲು ಅವಕಾಶ ನೀಡದ ಕಾರಣ ಹರಕೆ ಹೊತ್ತವರು ಸಿಡಿಯ ಒಂದು ಕಂಬ ಹಿಡಿದು ನೆಲದಲ್ಲಿಯೇ ಮೂರು ಸುತ್ತು ತಿರುಗಿ ಹರಕೆ ತೀರಿಸಿದರು. ಪೋಷಕರು ಚಿಕ್ಕ ಚಿಕ್ಕ ಮಕ್ಕಳನ್ನು ಸಿಡಿ ಕಂಬಕ್ಕೆ ತಾಕಿಸುತ್ತಿದ್ದರು.

ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ಬಿಜೆಪಿ.ಗ್ರಾಮಾಂತರ ಮಂಡಲ ಅಧ್ಯಕ್ಷ ನಂದಿನಾಗರಾಜ್, ಐನಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವೀಣ ದೇವರಾಜ್, ಚಿಕ್ಕಣ್ಣ, ಷಣ್ಮುಖಪ್ಪ, ಶಿವಮೂರ್ತಿ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರುಗಳು ಜಾತ್ರೆಯಲ್ಲಿ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೊತ್ತಂಬರಿ ಸೊಪ್ಪಿನ ಟೀ ಕೇಳಿದ್ದೀರಾ..? ಒಮ್ಮೆ ಮಾಡಿಕೊಂಡು ಕುಡಿಯಿರಿ : ಎಷ್ಟೆಲ್ಲಾ ಅನುಕೂಲ ಗೊತ್ತಾ ?

ಸುದ್ದಿಒನ್ : ಹಲವರಿಗೆ ಬೆಳಗ್ಗೆ ಚಹಾ ಕುಡಿಯುವ ಅಭ್ಯಾಸವಿರುತ್ತದೆ. ಅನೇಕ ಜನರು ಬೆಳಿಗ್ಗೆ ಹಾಲಿನಿಂದ ತಯಾರಿಸಿದ ಚಹಾ ಮತ್ತು ಕಾಫಿ ಕುಡಿಯುತ್ತಾರೆ. ಆದರೆ, ಕೆಲವರು ಗ್ರೀನ್ ಟೀ ಕುಡಿಯುತ್ತಾರೆ, ಇನ್ನು ಕೆಲವರು ಲೆಮನ್ ಟೀ

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ.

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ. ಗುರುವಾರ- ರಾಶಿ ಭವಿಷ್ಯ ಮೇ-9,2024 ಸೂರ್ಯೋದಯ: 05:50, ಸೂರ್ಯಾಸ್ತ : 06:35 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್

error: Content is protected !!