Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿಸೆಂಬರ್‌ನಲ್ಲಿ ದುರ್ಗೋತ್ಸವ ಆಚರಣೆ : ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್‌

Facebook
Twitter
Telegram
WhatsApp

 

ವರದಿ : ಸುರೇಶ್ ಪಟ್ಟಣ್, ಮೊ :8722022817

ಚಿತ್ರದುರ್ಗ, ಸುದ್ದಿಒನ್ (ಸೆ.26) :  ಡಿಸೆಂಬರ್‌ನಲ್ಲಿ ದುರ್ಗೋತ್ಸವವನ್ನು ಆಚರಣೆ ಮಾಡಲಾಗುವುದೆಂದು ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್ ತಿಳಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಇದ್ದಾಗ ದುರ್ಗೋತ್ಸವ ಕಾರ್ಯಕ್ರಮ ನಡೆದಿತ್ತು. ಈಗ ಮತ್ತೊಮ್ಮೆ ದುರ್ಗೋತ್ಸವ ಮಾಡಲು ಸಂಬಂಧಪಟ್ಟ ಸಚಿವರೊಂದಿಗೆ ಮಾತನಾಡಿದ್ದೇನೆ. ಅವರು ಸಹಾ ಸಮ್ಮತ್ತಿಸಿದ್ದಾರೆ. ಮೂರರಿಂದ ಐದು ದಿನಗಳ ಕಾಲ ಉತ್ಸವವವನ್ನು ನಡೆಸಲಾಗುವುದು. ಕೇಂದ್ರ ಪ್ರವಾಸೋದ್ಯಮ ಸಚಿವರು ಇದರಲ್ಲಿ ಭಾಗವಹಿಸುವಂತೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ಈ ದುರ್ಗೋತ್ಸವದಲ್ಲಿ ಅಪ್ಪರ್ ಭದ್ರಾ ಯೋಜನೆ, ನೇರ ರೈಲು ಮಾರ್ಗ, 83 ವರ್ಷಗಳ ಬಳಿಕ ತುಂಬಿರುವ ವಾಣಿವಿಲಾಸ ಸಾಗರದ ಬಗ್ಗೆ ಚರ್ಚೆ, ಸಂವಾದಗಳು ನಡೆಯಲಿದೆ ಎಂದರು.

ಅ. 28ರಂದು ಕೋಟೆಯ ಮೇಲೆ ಕಾರ್ಯಕ್ರಮವೊಂದನ್ನು ನಡೆಸಲು ಸಚಿವರು ನಿರ್ಧಾರ ಮಾಡಿದ್ದಾರೆ. ಇದರ ಬಗ್ಗೆ ಮುಂದಿನ ದಿನಮಾನದಲ್ಲಿ ಪೂರ್ವಭಾವಿ ಸಭೆಯನ್ನು ನಡೆಸುವುದರ ಮೂಲಕ ಕಾರ್ಯಕ್ರಮಗಳ ರೂಪುರೇಷವನ್ನು ನಿರ್ಧಾರ ಮಾಡಲಾಗುವುದು. ಇದರ ನೇತೃತ್ವವನ್ನು ಜಿಲ್ಲಾಧಿಕಾರಿಗಳು ವಹಿಸಲಿದ್ದಾರೆ ಎಂದು ಕೆ.ಎಸ್. ನವೀನ್ ಹೇಳಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!