Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿಂದೂ ಮಹಾಗಣಪತಿ ಶೋಭಯಾತ್ರೆ ವೇಳೆ ದರ್ಶನ್ ಭಾವಚಿತ್ರ ಬಾವುಟ ಹಾರಾಟಕ್ಕೆ ಬ್ರೇಕ್..!

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 28 : ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ನೇತೃತ್ವದಲ್ಲಿ ಹಿಂದೂ ಮಹಾಗಣಪತಿ ಬೃಹತ್ ಶೋಭಯಾತ್ರೆ ವಿಜೃಂಭಣೆಯಿಂದ ನಡೆಯತ್ತಿದೆ. ಈ ವೇಳೆ ಬಾರೀ ಜನಸ್ತೋಮ ಸೇರಿದೆ.

ಆದರೆ ಈ ಶೋಭಾಯಾತ್ರೆಯಲ್ಲಿ ದರ್ಶನ್ ಭಾವಚಿತ್ರವಿರುವ ಬಾವುಟ ಹಾರಾಟಕ್ಕೆ ಪೊಲೀಸರು ಬ್ರೇಕ್ ಹಾಕಿದ್ದಾರೆ. ಶೋಭಾಯಾತ್ರೆ ಮೆರವಣಿಗೆ ವೇಳೆ ದೇವರ ಚಿತ್ರವಿರುವ ಬಾವುಟಗಳನ್ನು ಹಾರಿಸುತ್ತಾರೆ. ಆದರೆ ಈ ಮೆರವಣಿಗೆಯಲ್ಲಿ ದರ್ಶನ್ ಬಾವುಟ ಹಾರಿಸುವ ಪ್ರಯತ್ನ ನಡೆದಿದೆ. ಶನಿವಾರ ಮಧ್ಯಾಹ್ನ 12.30 ಕ್ಕೆ ಈ ದೃಶ್ಯ ಕಂಡು ಬಂದಿದ್ದು ಚಿತ್ರದುರ್ಗ ನಗರದಲ್ಲಿಂದು ಹಿಂದೂ ಮಹಾ ಗಣಪತಿ ಶೋಭಾ ಯಾತ್ರೆಯಲ್ಲಿ ದರ್ಶನ್ ಅಭಿಮಾನಿಗಳು ಬೃಹತ್ ಗಾತ್ರದ ದರ್ಶನ್ ಭಾವಚಿತ್ರ ಇರುವ ಏನ್ರೀ ಮೀಡಿಯಾ ಎಂಬ ಭಾವುಟವನ್ನ ಕೈನಲ್ಲಿ ಹಿಡಿದು ದರ್ಶನ್ ಪರ ಘೋಷಣೆಗಳನ್ನ ಕೂಗುತ್ತಿದ್ದದ್ದು ಕಂಡು ಬಂದಿದೆ.

ಈ ವೇಳೆ ಹಿಂದೂ ಕಾರ್ಯಕರ್ತರು, ದರ್ಶನ್ ಅಭಿಮಾನಿಗೆ ಕಿವಿ ಮಾತು ಹೇಳಿದ್ದಾರೆ. ದರ್ಶನ್ ಬಾವುಟವನ್ನು ಹಾರಿಸಬೇಡಿ ಎಂದು ತಿಳಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕೆಲ ಹೊತ್ತು ದರ್ಶನ ಅಭಿಮಾನಿ ನಡುವೆ ಹಾಗೂ ಹಿಂದೂ ಕಾರ್ಯಕರ್ತರು ವಾಗ್ವಾದ ನಡೆದಿದ್ದು ಕಂಡು ಬಂದಿದೆ. ಅಷ್ಟರಲ್ಲಿ ಪೊಲೀಸರು ಬಾವುಟವನ್ನು ಕಸಿದುಕೊಂಡು ತಮ್ಮ ವಶಕ್ಕೆ ಪಡೆದಿದ್ದಾರೆ. ಇದರಿಂದಾಗಿ ದರ್ಶನ್ ಅಭಿಮಾನಿಗಳು ಸಪ್ಪೆ ಮೋರೆ ಹಾಕಿಕೊಂಡು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಗಣೇಶನ‌ ಮೆರವಣಿಗೆ ನಗರದ ಬಿ.ಡಿ. ರಸ್ತೆಯಲ್ಲಿ ಅದ್ದೂರಿಯಾಗಿ ಸಾಗುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಜೀಂ ಪ್ರೇಮ್‍ಜಿ ಫೌಂಡೇಶನ್ ಕಾರ್ಯ ಪ್ರಪಂಚಕ್ಕೆ ಮಾದರಿ: ಕೆ.ರಾಜಶೇಖರ ಹಿಟ್ನಾಳ

  ಸುದ್ದಿಒನ್, ಕೊಪ್ಪಳ, ಸೆಪ್ಟೆಂಬರ್. 28 : ಅಜೀಂ ಪ್ರೇಮ್‍ಜಿ ಫೌಂಡೇಶನ ಮಾಡುತ್ತಿರುವ ಸೇವಾ ಕಾರ್ಯವು ಪ್ರಪಂಚಕ್ಕೆ ಮಾದರಿಯಾಗಿದೆ ಎಂದು ಲೋಕಸಭಾ ಸದಸ್ಯರಾದ ಕೆ.ರಾಜಶೇಖರ ಹಿಟ್ನಾಳ ಹೇಳಿದರು. ಅವರು ನಗರದ ಸಿ.ಪಿ.ಎಸ್.ಶಾಲೆಯಲ್ಲಿ ಅಜೀಂ ಪ್ರೇಮ್‍ಜಿ

ಭಗತ್ ಸಿಂಗ್ ರ ಕನಸಿನ ಸಮಾಜವಾದಿ ಭಾರತಕ್ಕೆ ಕೈಜೋಡಿಸಿ : ರವಿಕುಮಾರ್

  ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 28 : ಬಿಳಿಯರು ತೊಲಗಬಹದು, ನಮ್ಮವರೇ ನಮ್ಮನ್ನು ಆಳ್ವಿಕೆ ಮಾಡಿ ಜನರ ಶೋಷಣೆ ನಿಲ್ಲುವುದಿಲ್ಲ’ ಎಂದು ಭಗತ್ ಸಿಂಗ್ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ನುಡಿದ್ದರು. ಅವರು ಹೇಳಿದ ಒಂದು

ಹಿಂದೂ ಮಹಾಗಣಪತಿ ಶೋಭಯಾತ್ರೆ ವೇಳೆ ದರ್ಶನ್ ಭಾವಚಿತ್ರ ಬಾವುಟ ಹಾರಾಟಕ್ಕೆ ಬ್ರೇಕ್..!

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 28 : ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ನೇತೃತ್ವದಲ್ಲಿ ಹಿಂದೂ ಮಹಾಗಣಪತಿ ಬೃಹತ್ ಶೋಭಯಾತ್ರೆ

error: Content is protected !!