Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ವಿವಾದದ ಬೆನ್ನಲ್ಲೇ ಯುವ ಕವಿಗೋಷ್ಠಿಯಿಂದ ಭಗವಾನ್ ಹೆಸರು ಕೈಬಿಟ್ಟ ದಸರಾ ಸಮಿತಿ..!

---Advertisement---

 

ಮೈಸೂರು : ನಾಡಹಬ್ಬ ಮೈಸೂರು ದಸರಾ ಆರಂಭವಾಗಿದೆ. ಇಂದಿನಿಂದ ಹಲವು ಕಾರ್ಯಕ್ರಮಗಳು ಮೈಸೂರಿನಲ್ಲಿ ಜರುಗಲಿವೆ. ಅದರಲ್ಲಿ ಯುವ ಕವಿಗೋಷ್ಠಿ ಕೂಡ. ಆದರೆ ಈ ಬಾರಿಯ ಯುವ ಕವಿಗೋಷ್ಠಿಯಿಂದ ಪ್ರೊ. ಕೆ ಎಸ್ ಭಗವಾನ್ ಅವರ ಹೆಸರನ್ನು ಕೈ ಬಿಡಲಾಗಿದೆ.

ಭಗವಾನ್ ಅವರು ಇತ್ತಿಚೆಗೆ ಕುವೆಂಪು ಅವರ ಒಂದು ಮಾತನ್ನು ಹೇಳಿದ್ದರು. ಅದು ಒಕ್ಕಲಿಗರ ಬಗ್ಗೆ. ಒಕ್ಕಲಿಗರು ಸಂಸ್ಕೃತಿ ಹೀನ ಪಶುಗಳು ಎಂದಿದ್ದರು. ಈ ಮಾತಿಗೆ ಕೋಪಗೊಂಡ ಒಕ್ಕಲಿಗ ಸಮುದಾಯ, ಈಗಾಗಲೇ ಪ್ರತಿಭಟನೆ ನಡೆಸಿ, ಭಗವಾನ್ ಅವರ ಮನೆಗೆ ಮುತ್ತಿಗೆ ಹಾಕುವ ಯತ್ನವನ್ನು ಮಾಡಿದ್ದಾರೆ. ಇದೀಗ ದಸರಾ ಸಮಿತಿ ಒಕ್ಕಲಿಗ ಸಮುದಾಯದ ಹಠಕ್ಕೆ ಮಣಿದಿದ್ದು, ಭಗವಾನ್ ಹೆಸರನ್ನು ಕೈಬಿಟ್ಟಿದೆ.

ದಸರಾ ಯುವ ಕವಿಗೋಷ್ಠಿ ಪಟ್ಟಿಯಿಂದ ಪ್ರೊ ಭಗವಾನ್ ಹೆಸರು ಕೈ ಬಿಡಬೇಕು. ಹಾಗೂ ಪ್ರೊ ಭಗವಾನ್ ಮೂಲಕ ಉದ್ಘಾಟನೆ ಮಾಡಿಸದಂತೆ ಒಕ್ಕಲಿಗ ಸಮುದಾಯ ಒತ್ತಾಯಿಸಿತ್ತು. ಒಂದು ವೇಳೆ ಅವರಿಂದ ಉದ್ಘಾಟನೆ ಮಾಡಿಸಿದರೆ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿತ್ತು. ಇದಕ್ಕೆ ಮಣಿದು ಮೈಸೂರು ದಸರಾ ಆಚರಣೆ ಸಮಿತಿ, ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಿ ಯುವ ಕವಿಗೋಷ್ಠಿಯನ್ನು ಪ್ರೊ. ಭಗವಾನ್ ಬದಲು ಸಾಹಿತಿ ಡಾ. ಡಿ.ಕೆ. ರಾಜೇಂದ್ರ ಅವರಿಂದ ಉದ್ಘಾಟನೆ ಮಾಡಿಸಲು ತೀರ್ಮಾನಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...