ಮೈಸೂರು: ಮೈಸೂರು ದಸರಾದ ಸಂಭ್ರಮ ನಾಡಿನೆಲ್ಲೆಡೆ ಶುರುವಾಗಿದೆ. ಗಜಪಡೆ ಅರಮನೆ ಆವರಣ ಸೇರಿ, ತರಬೇತಿ ಪಡೆಯುತ್ತಿವೆ. ಈ ಬಾರಿಯ ದಸರಾ ಉದ್ಘಾಟನೆ ಮಾಡುವುದು ಯಾರು ಎಂಬ ಕುತೂಹಲಕ್ಕೆ ತೆರೆ ಬಿದ್ದಿದ್ದು, ಸಿದ್ದರಾಮಯ್ಯ ಅವರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಸಾಹಿತಿ ಹಂಪ ನಾಗರಾಜಯ್ಯ ಅವರು ಈ ಬಾರಿಯ ದಸರಾ ಉದ್ಘಾಟನೆ ಮಾಡುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.

ದಸರಾ ಮಹೋತ್ಸವಕ್ಕೆ ಅಕ್ಬೋಬರ್ 3 ರಂದು ಚಾಲನೆ ಸಿಗಲಿದೆ. ಅಂದು ಬೆಳಗ್ಗೆ 9.15 ರಿಂದ 9.45ರ ಮುಹೂರ್ತದಲ್ಲಿ ದಸರಾ ಉದ್ಘಾಟನಾ ಪೂಜೆ ನೆರವೇರಲಿದೆ. ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಶುರುವಾಗಲಿದೆ. ಅದೇ ತಿಂಗಳ 12ರಂದು ಸಮಾರೋಪಗೊಳ್ಳಲಿದೆ ಎಂದು ಸರ್ಕಾರ ಅಧಿಕೃತವಾಗಿ ಮಾಹಿತಿ ನೀಡಿದೆ.
ಚಾಮುಂಡೇಶ್ವರಿ ಅಮ್ಮನವರಿಗೆ ಅಂದು ನವರಾತ್ರಿಯ ಪ್ರಥಮ ಪೂಜೆ ನೆರವೇರಲಿದೆ. ಸಂಜೆ 4.30ರ ನಂತರ ಜಂಬೂ ಸವಾರಿ ನಡೆಯಲಿದೆ. ರಾತ್ರಿ 7.30ರ ನಂತರ ಪಂಜಿನ ಕವಾಯತು ನಡೆಯಲಿದೆ. ನಾಡಿನ ಅಧಿದೇವತೆಯನ್ನು ಅಂಬಾರಿ ಮೇಲೆ ನೋಡಲು ಜನ ಕಾತುರದಿಂದ ಕಾಯುತ್ತಿದ್ದಾರೆ. ಪ್ರತಿ ವರ್ಷ ಕೂಡ ದಸರಾ ಎಂದರೆ ಚಾಮುಂಡಿ ಭಕ್ತರಿಗೆ ಹರುಷವೇ ಸರಿ. ಒಂಭತ್ತು ದಿನಗಳ ಕಾಲ ನವರಾತ್ರಿಯ ಸಂಭ್ರಮದಲ್ಲಿ ಮೈಸೂರು ದೀಪಾಲಂಕಾರಗಳಿಂದ ಕಂಗೊಳಿಸಲಿದೆ. ಆ ಸಮಯದಲ್ಲಿ ಮೈಸೂರು ನೋಡುವುದಕ್ಕೇನೆ ಚೆಂದ. ನಮ್ಮ ರಾಜ್ಯ ಮಾತ್ರವಲ್ಲ ವಿದೇಶಿಗರಿಗೂ ಮೈಸೂರು, ಚಾಮುಂಡಿ, ದಸರಾ ಎಂದರೆ ಬಹಳ ಇಷ್ಟ. ಈ ವರ್ಷ ಮುಂಗಾರು ಮಳೆಯೇ ಉತ್ತಮವಾಗಿರುವ ಕಾರಣ, ದಸರಾವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಕಳೆದ ವರ್ಷ ಬರಗಾಲವಿದ್ದ ಕಾರಣ, ಸರಳವಾಗಿ, ಸಾಂಪ್ರದಾಯಿಕವಾಗಿ ದಸರಾ ಆಚರಣೆ ಮಾಡಲಾಗಿತ್ತು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











