Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಾಹಿತಿ ಹಂಪ ನಾಗರಾಜಯ್ಯ ಅವರಿಂದ ದಸರಾ ಉದ್ಘಾಟನೆ..!

---Advertisement---

 

 

ಮೈಸೂರು: ಮೈಸೂರು ದಸರಾದ ಸಂಭ್ರಮ ನಾಡಿನೆಲ್ಲೆಡೆ ಶುರುವಾಗಿದೆ. ಗಜಪಡೆ ಅರಮನೆ ಆವರಣ ಸೇರಿ, ತರಬೇತಿ ಪಡೆಯುತ್ತಿವೆ. ಈ ಬಾರಿಯ ದಸರಾ ಉದ್ಘಾಟನೆ ಮಾಡುವುದು ಯಾರು ಎಂಬ ಕುತೂಹಲಕ್ಕೆ ತೆರೆ ಬಿದ್ದಿದ್ದು, ಸಿದ್ದರಾಮಯ್ಯ ಅವರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಸಾಹಿತಿ ಹಂಪ ನಾಗರಾಜಯ್ಯ ಅವರು ಈ ಬಾರಿಯ ದಸರಾ ಉದ್ಘಾಟನೆ ಮಾಡುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.

ದಸರಾ ಮಹೋತ್ಸವಕ್ಕೆ ಅಕ್ಬೋಬರ್ 3 ರಂದು ಚಾಲನೆ ಸಿಗಲಿದೆ. ಅಂದು ಬೆಳಗ್ಗೆ 9.15 ರಿಂದ 9.45ರ ಮುಹೂರ್ತದಲ್ಲಿ ದಸರಾ ಉದ್ಘಾಟನಾ ಪೂಜೆ ನೆರವೇರಲಿದೆ. ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಶುರುವಾಗಲಿದೆ. ಅದೇ ತಿಂಗಳ 12ರಂದು ಸಮಾರೋಪಗೊಳ್ಳಲಿದೆ ಎಂದು ಸರ್ಕಾರ ಅಧಿಕೃತವಾಗಿ ಮಾಹಿತಿ ನೀಡಿದೆ.

ಚಾಮುಂಡೇಶ್ವರಿ ಅಮ್ಮನವರಿಗೆ ಅಂದು ನವರಾತ್ರಿಯ ಪ್ರಥಮ ಪೂಜೆ ನೆರವೇರಲಿದೆ. ಸಂಜೆ 4.30ರ ನಂತರ ಜಂಬೂ ಸವಾರಿ ನಡೆಯಲಿದೆ. ರಾತ್ರಿ 7.30ರ ನಂತರ ಪಂಜಿನ ಕವಾಯತು ನಡೆಯಲಿದೆ. ನಾಡಿನ ಅಧಿದೇವತೆಯನ್ನು ಅಂಬಾರಿ ಮೇಲೆ ನೋಡಲು ಜನ ಕಾತುರದಿಂದ ಕಾಯುತ್ತಿದ್ದಾರೆ. ಪ್ರತಿ ವರ್ಷ ಕೂಡ ದಸರಾ ಎಂದರೆ ಚಾಮುಂಡಿ ಭಕ್ತರಿಗೆ ಹರುಷವೇ ಸರಿ. ಒಂಭತ್ತು ದಿನಗಳ ಕಾಲ ನವರಾತ್ರಿಯ ಸಂಭ್ರಮದಲ್ಲಿ ಮೈಸೂರು ದೀಪಾಲಂಕಾರಗಳಿಂದ ಕಂಗೊಳಿಸಲಿದೆ. ಆ ಸಮಯದಲ್ಲಿ ಮೈಸೂರು ನೋಡುವುದಕ್ಕೇನೆ ಚೆಂದ. ನಮ್ಮ ರಾಜ್ಯ ಮಾತ್ರವಲ್ಲ ವಿದೇಶಿಗರಿಗೂ ಮೈಸೂರು, ಚಾಮುಂಡಿ, ದಸರಾ ಎಂದರೆ ಬಹಳ ಇಷ್ಟ. ಈ ವರ್ಷ ಮುಂಗಾರು ಮಳೆಯೇ ಉತ್ತಮವಾಗಿರುವ ಕಾರಣ, ದಸರಾವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಕಳೆದ ವರ್ಷ ಬರಗಾಲವಿದ್ದ ಕಾರಣ, ಸರಳವಾಗಿ, ಸಾಂಪ್ರದಾಯಿಕವಾಗಿ ದಸರಾ ಆಚರಣೆ ಮಾಡಲಾಗಿತ್ತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...