Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜೆಡಿಎಸ್ ನಿಂದ‌ ಕಾಂಗ್ರೆಸ್ ಗೆ ಬಂದ ದತ್ತಣ್ಣನಿಗೆ ಸಿಗಲಿಲ್ಲ ಟಿಕೆಟ್ : ಸಭೆ ಕರೆದು ಸ್ವತಂತ್ರವಾಗಿ ಸ್ಪರ್ಧಿಸುತ್ತಾರಾ..?

Facebook
Twitter
Telegram
WhatsApp

ಚಿಕ್ಕಮಗಳೂರು: ಪಕ್ಷದಲ್ಲಿ ಅಳೆದು ತೂಗಿ ಟಿಕೆಟ್ ನೀಡಬೇಕಾದ ಪರಿಸ್ಥಿತಿ ಇದೆ. ಹೀಗಾಗಿ ಚುನಾವಣೆ ದಿನಾಂಕ ಘೋಷಣೆಯಾದರೂ ಕೂಡ ಪಕ್ಷಗಳು ಸಾಕಷ್ಟು ಯೋಚನೆ ಮಾಡಿನೇ ಟಿಕೆಟ್ ಘೋಷಣೆ ಮಾಡುತ್ತಿವೆ. ಯಾರಿಗೆ ಜನ ಬೆಂಬಲವಿದೆ. ಹಣ ಬಲವಿದೆ ಹೀಗೆ ಅನೇಕ ವಿಚಾರಗಳನ್ನಿಟ್ಟುಕೊಂಡು ಟಿಕೆಟ್ ಘೋಷಣೆ ಮಾಡಲಾಗುತ್ತಿದೆ. ಇದೀಗ ಕಾಂಗ್ರೆಸ್ ನಿಂದಾನೂ ಎರಡು ಪಟ್ಟಿ ರಿಲೀಸ್ ಆಗಿದೆ. ಅದರಲ್ಲಿ ಜೆಡಿಎಸ್ ನಿಂದ ಬಂದ ವೈಎಸ್ ವಿ ದತ್ತಾ, ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್ ಬೇರೋಬ್ಬರ ಪಾಲಾಗಿದೆ. ಹೀಗಾಗಿ ವೈ ಎಸ್ ವಿ ದತ್ತಾ ಬೇಸರ ಮಾಡಿಕೊಂಡಿದ್ದಾರೆ.

ತಮ್ಮ ಶಿಷ್ಯರಿಗೆ ಪತ್ರ ಬರೆಯುವ ಮೂಲಕ ಮೇಷ್ಟ್ರು ಅಸಮಾಧಾನ ಹೊರ ಹಾಕಿದ್ದಾರೆ. “ಆತ್ಮೀಯ ಪ್ರೀತಿ ಪಾತ್ರರಾದ ನನ್ನ ಅಭಿಮಾನಿಗಳಲ್ಲಿ ವಿನಂತಿಸಿಕೊಳ್ಳುವುದೇನೆಂದರೆ ನೀವೂ ನನಗೆ ಪ್ರೀತಿಯ ಧಾರೆ ಎರೆದಿದ್ದೀರಿ. ಹಣವಿಲ್ಲದ, ಜಾತಿಯಿಲ್ಲದ ನನ್ನನ್ನು ದತ್ತಣ್ಣ.. ನಮ್ಮ ದತ್ತಣ್ಣ ಎಂದು ಅಭಿಮಾನದಿಂದ ಕರೆದಿದ್ದೀರಿ. ಪ್ರೀತಿಯಿಂದ ಬೆಳೆಸಿದ್ದೀರಿ.

ಈಗ ಬಂದಿರುವ ವಿಶೇಷ ರಾಜಕೀಯ ಪರಿಸ್ಥಿತಿಯಲ್ಲಿ ನಿಮ್ಮ ಜೊತೆ ನಾನಿರಬೇಕು, ನನ್ನ ಜೊತೆಗೆ ನೀವಿರಬೇಕು ಎಂಬುದು ಅನಿವಾರ್ಯತೆ. ಈ ಕಾರಣದಿಂದ ಇದು ನನ್ನ‌.ತ್ತು ನಿಮ್ಮೆಲ್ಲರ ಆತ್ಮಗೌರವಕ್ಕೆ, ಸ್ವಾಭಿಮಾನಕ್ಕೆ ಆದ ಅಪಮಾನವಾಗಿದೆ. ಹೀಗಾಗಿ ಈ ಕ್ಷೇತ್ರದ ಮತದಾರರ ಸ್ವಾಭಿಮಾನಕ್ಕಾಗಿ ನಾನು ನಿಮ್ಮೆಲ್ಲರ ಆಶೀರ್ವಾದ ಪಡೆಯಲು, ಕಡೂರು ಪಟ್ಟಣದಲ್ಲಿ ದಿನಾಂಕ 9-4-2023ನೇ ಭಾನುವಾರ, ಬೆಳಗ್ಗೆ 11ಕ್ಕೆ ನನ್ನ ಅಭಿಮಾನಿಗಳ ಸಭೆ ಕರೆದಿದ್ದೇನೆ. ತಾವೂ ತಮ್ಮ ಸಂಗಡಿಗರೊಂದಿಗೆ,‌ ಬಂಧು ಬಾಂಧವರೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬಂದು, ನನ್ನನ್ನು ಹರಸಿ, ಆಶೀರ್ವದಿಸಬೇಕಾಗಿ ವಿನಂತಿ” ಎಂದು ಪತ್ರದ ಮೂಲಕ ಮಾಹಿತಿ ಹಂಚಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ-ಹೊಳಲ್ಕೆರೆ ಹೆದ್ದಾರಿಯಲ್ಲಿ ಅಪಘಾತ | ಓರ್ವ ಮೃತ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 20 : ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ಮಂಜುನಾಥ (36) ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಹೊಳಲ್ಕೆರೆ ಹೆದ್ದಾರಿಯ ಕಣಿವೆ ಬಳಿ ಶನಿವಾರ ಸಂಜೆ ನಡೆದಿದೆ. ಬೆಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ

ಈ ವರ್ಷ ಒಳ್ಳೆಯದ್ದಕ್ಕಿಂತ ಕೆಟ್ಟದೇ ಹೆಚ್ಚು : ಭವಿಷ್ಯ ನುಡಿದ ವಿಜಯಪುರ ಬಸವೇಶ್ವರ ಕಾರ್ಣಿಕಾ

ವಿಜಯಪುರ: ಕಾರ್ಣಿಕಾ ನುಡಿಯನ್ನು ರಾಜ್ಯದ ಜನತೆ ಹೆಚ್ಚಾಗಿ ನಂಬುತ್ತಾರೆ. ಇದೀಗ ವಿಜಯಪುರದ ಕೊಡೆಕಲ್ ಬಸವೇಶ್ವರ ದೇವಸ್ಥಾನದ ಶೂನ್ಯ ಶಂಕರಲಿಂಗ ದಿಂಡವಾರ ಶರಣರು ಮಳೆ ಬೆಳೆ ಬಗ್ಗೆ ಕಾರ್ಣಿಕಾ ನುಡಿದಿದ್ದಾರೆ‌. ಜಾತ್ರೆಯಿದ್ದ ಹಿನ್ನೆಲೆ ಪುರಾಣ ಮುಕ್ತಾಯ,

ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಮೋದಿ ಅಬ್ಬರ : ಅಭ್ಯರ್ಥಿಗಳ ಗೆಲುವಿಗೆ ಮತಯಾಚನೆ

ಬೆಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆ ಪ್ರಧಾನಿ ಮೋದಿ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ‌. ರಾಜ್ಯಕ್ಕೆ ಬಂದಿರುವ ಪ್ರಧಾನಿ ಮೋದಿ ಅಭ್ಯರ್ಥಿಗಳ ಪರವಾವಿ ಮತಯಾಚನೆ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಸಂಚಾರ ನಡೆಸಿ, ಮತಯಾಚನೆ ಮಾಡಿದ್ದಾರೆ. ಚಿಕ್ಕಬಳ್ಳಾಪುರದ

error: Content is protected !!