Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಡಿವಿ ಸದಾನಂದ ಗೌಡ..!

---Advertisement---

 

ಹಾಸನ : ಜಿಲ್ಲೆಯಲ್ಲಿ ಬರ ಅಧ್ಯಯನ ಬಳಿಕ ಮಾಜಿ ಸಿಎಂ ಡಿವಿ ಸದಾನಂದ ಗೌಡ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಲೋಕಸಭಾ ಚುನಾವಣೆಗೆ ಟಿಕೆಟ್ ಆಕಾಂಕ್ಷಿಯಾಗಿದ್ದ ಡಿವಿಎಸ್, ಇದೀಗ ರಾಜಕೀಯದಿಂದಾನೇ ದೂರ ಸರಿದಿದ್ದಾರೆ. ಪಕ್ಷದಿಂದ ಗರಿಷ್ಠ ಲಾಭ ಪಡೆದಿದ್ದೇನೆ. ಇನ್ನು ಹೆಚ್ಚಿನದ್ದನ್ನು ಆಸೆ ಪಡುವುದಿಲ್ಲ ಎಂದು ಹೇಳಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಟ್ಟರೆ ಪಕ್ಷದಿಂದ ಸಾಕಷ್ಟು ಸಹಾಯ ಆಗಿದ್ದು, ನನಗೇನೆ. ಕಳೆದ 30 ವರ್ಷದಿಂದ ಪಕ್ಷ ನನಗೆ ಎಲ್ಲವನ್ನು ಕೊಟ್ಟಿದೆ. ಸಿಎಂ ಆಗಿದ್ದೇನೆ, ಸಂಸದ ಸ್ಥಾನ ಸಿಕ್ಕಿದೆ, ಮೋದಿ ಜೊತೆಗೆ ಕೇಂದ್ರ ಸಚಿವನಾಗಿದ್ದೆ, ವಿರೋಧ ಪಕ್ಷದ ನಾಯಕ, ಬಿಜೆಪಿ ರಾಜ್ಯಾಧ್ಯಕ್ಷ ಎಲ್ಲವೂ ಸಿಕ್ಕಿದೆ. ಹೀಗಾಗಿ ಚುನಾವಣಾ ರಾಜಕೀಯದಿಂದ ಮುಂದುವರೆಯಬಾರದು ಎಂದು ನಿರ್ಧಾರ ಮಾಡಿದ್ದೇನೆ ಎಂದು ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ.

ಇದೇ ವೇಳೆ ಬರದ ಬಗ್ಗೆ ಮಾತನಾಡಿ, ನಾವೂ ಬರ ಅಧ್ಯಯನಕ್ಕೆ ಬಂದಾಗ ಮಳೆ ಆರಂಭವಾಗಿದೆ. ಆದರೆ ಈಗ ಮಳೆ ಬಂದರೆ ಯಾವುದೇ ಪ್ರಯೋಜನವಾಗಲ್ಲ ಅನ್ನೋದು ನನ್ನ ಅಭಿಪ್ರಾಯ. ಬರಕ್ಕೆ ಕೇಂದ್ರ ಹಾಗೂ ರಾಜ್ಯ ಎರಡು ಸರ್ಕಾರಗಳು ಪರಿಹಾರ ನೀಡಬೇಕಿದೆ. ಕೇಂದ್ರ ಸರ್ಕಾರದ ಮೇಲೆ ನಾವೂ ಒತ್ತಡ ಹಾಕುತ್ತೇವೆ. ಹಾಸನ ಜಿಲ್ಲೆಯಲ್ಲಿ ಆಗಸ್ಟ್ ತಿಂಗಳಿನಲ್ಲಿ ಶೇ. 73ರಷ್ಟು ಮಳೆ ಕೊರತೆ ಎದುರಾಗಿದೆ. ಇದು 125 ವರ್ಷಗಳಲ್ಲಿ ಇದೆ ಮೊದಲ ಬಾರಿಗೆ ಈ ರೀತಿ ಆಗಿರುವುದು. ರೈತರ ಪರಿಸ್ಥಿತಿ ನೋಡಿದರೆ ಕಣ್ಣಲ್ಲಿ ನೀರು ಬರುತ್ತದೆ ಎಂದು ರಾಜ್ಯದಲ್ಲಿ ತಾಂಡವವಾಡುತ್ತಿರುವ ಬರದ ಬಗ್ಗೆ ಮಾಹಿತಿ ನೀಡಿದ್ದಾರೆ. ಹಾಸನ ಜಿಲ್ಲೆಯಾದ್ಯಂತ ಇಂದು ಬಿಜೆಪಿ ನಾಯಕರು ಬರ ಅಧ್ಯಯನ ನಡೆಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...