Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದ್ವಾರಕೀಶ್ ಗಾಡ್ ಫಾದರ್ ಆಗಿದ್ದರು ಚಿತ್ರದುರ್ಗದ ಜಾಫರ್ ಶರೀಫ್ : ಜಾಫರ್ ನಿಧನದ ದಿನ ದ್ವಾರಕೀಶ್ ಏನ್ ಹೇಳಿದ್ರು ಗೊತ್ತಾ..?

---Advertisement---

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 16 : ಇಂದು ದ್ವಾರಕೀಶ್ ಅವರು ಇಲ್ಲ. ಜಾಫರ್ ಶರೀಫ್ ಅವರೂ ಇಲ್ಲ. ಆದರೆ ಅವರಿಬ್ಬರ ಬಾಂಧವ್ಯ ಗಟ್ಟಿಯಾಗಿತ್ತು. ಆತ್ಮೀಯತೆ ಹೆಚ್ಚಾಗಿತ್ತು. ಅಣ್ಣ ತಮ್ಮಂದಿರಂತೆ ಸಂಬಂಧ ಹೊಂದಿದ್ದವರು. ವಯೋಸಹಜ ಕಾಯಿಲೆಯಿಂದ ಇಂದು ದ್ವಾರಕೀಶ್ ನಿಧನ ಹೊಂದಿದ್ದಾರೆ. ಈ ಸಂದರ್ಭದಲ್ಲಿ ಜಾಫರ್ ಶರೀಫ್ ನಿಧನದ ಸಂದರ್ಭದಲ್ಲಿ ಮಾತನಾಡಿದ ಆಡಿಯೋ ಕೂಡ ಹರಿದಾಡುತ್ತಿದೆ.

 

ಕೇಂದ್ರ ಸಚಿವರಾಗಿದ್ದ ಜಾಫರ್ ಶರೀಫ್ ಕಳೆದ 5 ವರ್ಷಗಳ ಹಿಂದೆ ಅಂದರೆ 25‌ ನವೆಂಬರ್ 2018ರಲ್ಲಿ ನಿಧನ ಹೊಂದಿದ್ದರು. ಆಗ ಅವರ ವಯಸ್ಸು 85 ಆಗಿತ್ತು.  1993ರಲ್ಲಿ ಚಳ್ಳಕೆರೆಯಲ್ಲಿ ಜನಿಸಿದ್ದವರು ಜಾಫರ್ ಶರೀಫ್. ಕೇಂದ್ರ ರೈಲ್ವೆ ಸಚಿವರಾಗಿದ್ದರು, ಇಂದಿರಾ ಗಾಂಧಿಯವರಿಗೆ ಆಪ್ತರಾಗಿದ್ದವರು. ರಾಜ್ಯದ ರೈಲ್ವೆಯ ಗೇಜ್ ಮಾರ್ಪಾಡು ಸಾಧನೆಯಲ್ಲಿ ಇವರದ್ದು ಮಹತ್ವದ ಪಾತ್ರವಿದೆ. ಆದರೆ ಕಳೆದ ಐದು ವರ್ಷಗಳ ಹಿಂದೆ‌ ನಿಧನ ಹೊಂದಿದರು.

ಇನ್ನು ನಟ, ನಿರ್ದೇಶಕ ದ್ವಾರಕೀಶ್ ಅವರಿಗೂ ಜಾಫರ್ ಶರೀಫ್ ಅವರಿಗೂ ಗಟ್ಟಿಯಾದ ನಂಟೊಂದಿತ್ತು. ಅವರ ಸಾವಿನ ದಿನ ಮಾತನಾಡಿದ್ದ ದ್ವಾರಕೀಶ್, ನಂಗೆ ಗಾಡ್ ಫಾದರ್ ಅಂತ ಇದ್ದರೆ ಅದು ಜಾಫರ್ ಶರೀಫ್ ಮಾತ್ರ. ನಂಗೆ ಹೃದಯ ಶಸ್ತ್ರ ಚಿಕಿತ್ಸೆ ಮಾಡಿಸಿದ್ದರು. ನನ್ನ ಹೆಂಡತಿಯೂ ಚಿತ್ರದುರ್ಗ, ಅವರು ಚಿತ್ರದುರ್ಗ‌ದವರು. ಮದ್ರಾಸ್ ನಲ್ಲಿದ್ದಾಗ ನಮ್ಮನ್ನ ನೋಡುವುದಕ್ಕೆ ಬರುತ್ತಾ ಇದ್ದರು. ಇಂದು ಈ ಸಾವಿನ ಸುದ್ದಿ ನಂಬುವುದಕ್ಕೆ ಆಗುತ್ತಿಲ್ಲ’ ಎಂದು ಕಣ್ಣೀರು ಹಾಕಿದ್ದರು. ಆದರೆ ಇಂದು ದ್ವಾರಕೀಶ್ ಕೂಡ ಪ್ರೀತಿ ಪಾತ್ರರನ್ನು ಬಿಟ್ಟು ಗೆಳೆಯನನ್ನು ಸೇರುವುದಕ್ಕೆ ಹೊರಟೆ ಹೋಗಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment