ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಚಿತ್ರದುರ್ಗ. ಆ.28: ಪಡಿತರ ಚೀಟಿದಾರರ ಇ-ಕೆವೈಸಿ ಸಂಗ್ರಹಣೆ ಮಾಡಿಸಲು ಆಗಸ್ಟ್ 31 ಅಂತಿಮ ಗಡುವು ನಿಗದಿಪಡಿಸಿದ್ದು, ಇ-ಕೆವೈಸಿ ಸಂಗ್ರಹಣೆಯಾಗಿಲ್ಲದ ಪಡಿತರ ಚೀಟಿದಾರರು ತಪ್ಪದೇ ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಪಡಿತರ ಚೀಟಿದಾರರ ಇ.ಕೆ.ವೈ.ಸಿ ಸಂಗ್ರಹಣೆಯನ್ನು 2017ರಿಂದ ನ್ಯಾಯಬೆಲೆ ಅಂಗಡಿಗಳ ಮೂಲಕ ಸಂಗ್ರಹಣೆ ಮಾಡಲಾಗುತ್ತಿದೆ. ಚಿತ್ರದುರ್ಗ ಜಿಲ್ಲೆಯ ಇ-ಕೆ.ವೈ.ಸಿ ಸಂಗ್ರಹಣೆಯ ಪ್ರಗತಿಯನ್ನು ಪರಾಮರ್ಶೆ ಮಾಡಲಾಗಿ, ಇದುವರೆಗೂ ಜಿಲ್ಲೆಯಲ್ಲಿ ಅಂತ್ಯೋದಯ ಪಡಿತರ ಚೀಟಿ ಸದಸ್ಯರ ಶೇ.96.34 ಮತ್ತು ಆದ್ಯತಾ ಪಡಿತರ ಚೀಟಿ ಸದಸ್ಯರ ಶೇ.97.18 ಸೇರಿದಂತೆ ಒಟ್ಟು ಶೇ.97.07ರಷ್ಟು ಇ-ಕೆ.ವೈ.ಸಿ ಸಂಗ್ರಹಣೆ ಮಾಡಲಾಗಿದೆ.
ಪಡಿತರ ಚೀಟಿಯಲ್ಲಿನ ಸದಸ್ಯರ ಇ-ಕೆ.ವೈ.ಸಿ ಸಂಗ್ರಹಣೆಯಾಗದೇ ಇದ್ದಲ್ಲಿ ಮುಂಬರುವ ದಿನಗಳಲ್ಲಿ ಅಂತಹ ಪಡಿತರ ಚೀಟಿಗಳು, ಸದಸ್ಯರುಗಳ ಹೆಸರುಗಳು ಪಡಿತರ ಚೀಟಿಗಳಿಂದ ಬಿಟ್ಟು ಹೋಗುವ ಮತ್ತು ಆಹಾರಧಾನ್ಯ ಹಂಚಿಕೆ ಸ್ಥಗಿತಗೊಳ್ಳುವ ಸಂಭವವಿರುತ್ತದೆ.
ಆದ್ದರಿಂದ ಇ-ಕೆ.ವೈ.ಸಿ ಸಂಗ್ರಹಣೆಯಾಗಿಲ್ಲದ್ದ ಪಡಿತರ ಚೀಟಿದಾರರು, ಸದಸ್ಯರುg ಇದೇ ಆಗಸ್ಟ್ 31ರೊಳಗೆ ತಾವು ರಾಜ್ಯದ, ಜಿಲ್ಲೆಯ, ತಾಲ್ಲೂಕಿನ, ಹಳ್ಳಿಯ, ತಾವು ಇರುವ ಸ್ಥಳದಲ್ಲಿಯೇ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ತಮ್ಮ ಜೀವಮಾಪನ ನೀಡಿ ಇ-ಕೆ.ವೈ.ಸಿ ಸಂಗ್ರಹಿಸಿಕೊಳ್ಳಲು ಪಡಿತರ ಚೀಟಿದಾರರಿಗೆ ಅಂತಿಮ ಗಡುವು ನೀಡಿದ್ದು, ತಪ್ಪದೇ ಇ.ಕೆ.ವೈ.ಸಿ ಮಾಡಿಸಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್