ಬಿಜೆಪಿಯಲ್ಲಿ ಒಬ್ಬೊಬ್ಬರು ಒಂದೊಂದು ದಿಕ್ಕು; ಬೆಲೆ ಏರಿಕೆ ಹೋರಾಟದಲ್ಲಿ ಸಕ್ಸಸ್ ಆಗ್ತಾರಾ ವಿಜಯೇಂದ್ರ..?

ರಾಜ್ಯ ಕಾಂಗ್ರೆಸ್ ಸರ್ಕಾರ ಎಲ್ಲದರಲ್ಲೂ ಬೆಲೆ ಏರಿಕೆ ಮಾಡಿ ಬಡ, ಮಧ್ಯಮವರ್ಗದ ಜನರು ಬದುಕು ನಡೆಸುವುದು ಹೇಗೆ ಎಂಬ ಪ್ರಶ್ನೆಯನ್ನು ಹುಟ್ಟು ಹಾಕಿದೆ. ಇದೆಲ್ಲವನ್ನು ನೋಡುತ್ತಿರುವ ಬಿಜೆಪಿ ಸದ್ಯ ಹೋರಾಟದ ಹಾದಿ ಹಿಡಿದಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಮನದ್ರ ಅವರು ಹೋರಾಟಕ್ಕೆ ಕರೆ ಕೊಟ್ಟಿದ್ದಾರೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಈ ಹೋರಾಟಕ್ಕೆ ಮುನ್ನುಡಿ ಬರೆಯಲಾಗಿದೆ. ಆದರೆ ಈ ಬೆಲೆ ಏರಿಕೆಯ ಬಿಸಿ ವಿಜಯೇಂದ್ರ ಅವರಿಗೆ ಸವಾಲಿನ ಹೋರಾಟವೇ ಸರಿ. ಯಾಕಂದ್ರೆ ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ, ಎಲ್ಲರೂ ಒಗ್ಗಟ್ಟಾಗಿಲ್ಲ ಅನ್ನೋದನ್ನ ಬಾಯ್ಬಿಟ್ಟು ಹೇಳ ಬೇಕಿಲ್ಲ ಅಲ್ವಾ..? ಕಾಂಗ್ರೆಸ್ ವಿರುದ್ಧದ ಈ ಹೋರಾಟದಲ್ಲಿ ಬಿಜೆಪಿ ಈಗ ಒಗ್ಗಟ್ಟನ್ನ ಪ್ರದರ್ಶಿಸಬೇಕಾದ ಕಾಲ ಬಂದಿದೆ. ಆದರೆ ಬಿಜೆಪಿಯಲ್ಲಿ ಎಲ್ಲರೂ ಒಟ್ಟಾಗಿ ಕಾಣಿಸುತ್ತಿಲ್ಲ. ಯಾಕಂದ್ರೆ ಬಿಜೆಪಿ ವಿರುದ್ಧ ಅಶಿಸ್ತು ಪ್ರದರ್ಶನ ಮಾಡಿದರು ಎಂಬ ಕಾರಣಕ್ಕೆ ಈಗಾಗಲೇ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನ ಉಚ್ಛಾಟನೆ ಮಾಡಲಾಗಿದೆ. ಇನ್ನು ಕೆಲವರಿಗೆ ನೋಟೀಸ್ ಕೂಡ ಜಾರಿ ಮಾಡಲಾಗಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದ ಮೇಲೆ ಬಿಜೆಪಿಯಿಂದ ಪ್ರಬಲವಾದ ಹೋರಾಟಗಳು ನಡೆಯಲೇ ಇಲ. ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಕೇವಲ ಪಾದಯಾತ್ರೆ ಬಿಟ್ಟರೆ ಹೇಳಿಕೊಳ್ಳುವಂತಹ ಹೋರಾಟವೂ ನಡೆದಿಲ್ಲ. ಪ್ರಬಲ ವಿರೋಧ ಪಕ್ಷವಾಗಿ ಕೆಲಸ ಮಾಡಬೇಕಿದ್ದ ಬಿಜೆಪಿಯಲ್ಲಿಯೇ ಒಳ ಜಗಳ, ಗುಂಪುಗಾರಿಕೆ ನಡೆಯುತ್ತಿರುವುದು ಕಾರ್ಯಜರ್ತರಿಗೆ ಬೇಸರ ತರಿಸಿದೆ.

ರಾಜ್ಯದಲ್ಲಿ ಬೆಲೆ ಏರಿಕೆ ವಿರುದ್ಧದ ಹೋರಾಟಕ್ಕೆ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕರೆಕೊಟ್ಟಿದ್ದಾರೆ. ಮುನಿಸುಗಳ ನಡುವೆ ಹೋರಾಟ ಆರಂಭವಾಗಿದೆ. ಇಲ್ಲಿ ಜೆಡಿಎಸ್ ನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ನಡೆದಿಲ್ಲ. ಹೀಗಾಗಿ ಜೆಡಿಎಸ್ ಪ್ರತ್ಯೇಕ ಹೋರಾಟಕ್ಕೆ ಕರೆ ನೀಡಿದೆ. ಹೀಗಾಗಿ ಕರೆಕೊಟ್ಟಿರುವ ಹೋರಾಟವನ್ನು ಬಿವೈ ವಿಜಯೇಂದ್ರ ಅವರು ಸಕ್ಸಸ್ ಮಾಡುವುದೆ ಸವಾಲಿನ ಕೆಲಸವಾಗಿದೆ.

suddionenews

Recent Posts

ಏಪ್ರಿಲ್ 16 ಮತ್ತು 17ರಂದು ಸಿಇಟಿ ಪರೀಕ್ಷೆ : ಸುಗಮವಾಗಿ ಪರೀಕ್ಷೆ ನಡೆಸಲು ಅಧಿಕಾರಿಗಳಿಗೆ ಸೂಚನೆ

    ಚಿತ್ರದುರ್ಗ. ಏ. 09: ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಇದೇ ಏಪ್ರಿಲ್ 16…

5 seconds ago

ಚಿತ್ರದುರ್ಗ APMC | ಶೇಂಗಾ, ಕಡಲೆ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಏಪ್ರಿಲ್. 09 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.09 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ…

1 hour ago

500 ಕೋಟಿ ಕಿಕ್ ಬ್ಯಾಕ್ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರಿಗೆ ಸಂಕಷ್ಟ..!

ಮೂಡಾ ಹಗರಣಕ್ಕೆ‌ ಸಂಬಂಧಿಸಿದಂತೆ ಇಡಿಯ ತೂಗುಗತ್ತಿಯಲ್ಲಿಯೇ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಇದೀಗ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಆರೋಪ ಕೇಳಿ…

2 hours ago

ಈ ರಾಶಿಯವರು ಮುಟ್ಟಿದ್ದೆಲ್ಲ ಚಿನ್ನ, ಬಯಸಿದ್ದೆಲ್ಲಾ ಪಡೆದೇ ಪಡುತ್ತಾರೆ

ಈ ರಾಶಿಯವರು ಮುಟ್ಟಿದ್ದೆಲ್ಲ ಚಿನ್ನ, ಬಯಸಿದ್ದೆಲ್ಲಾ ಪಡೆದೇ ಪಡುತ್ತಾರೆ, ಈ ರಾಶಿಯವರು ಮದುವೆ ವಿಚಾರಕ್ಕೆ ತಂದೆ ತಾಯಿಂದ ಪ್ರತಿರೋಧ, ಬುಧವಾರದ…

9 hours ago

ದ್ವಿತೀಯ ಪಿಯು ಫಲಿತಾಂಶ ; ದಾವಣಗೆರೆಯಲ್ಲಿ ಕಳೆದ ವರ್ಷಕ್ಕಿಂದ ಕುಸಿದ ರಿಸಲ್ಟ್..!

ದಾವಣಗೆರೆ; ಇಂದು ದ್ವಿತೀಯ ಪಿಯು ಫಲಿತಾಂಶವನ್ನು ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ. ಆದರೆ ಈ ಬಾರಿ ಸಾಕಷ್ಟು ಮಕ್ಕಳು ಫೇಲ್…

19 hours ago

ಚಿತ್ರದುರ್ಗ : ಲಕ್ಷ್ಮಮ್ಮ ನಿಧನ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 08 : ನಗರದ ಜೋಗಿಮಟ್ಟಿ ರಸ್ತೆಯ ನಿವಾಸಿ ಹಾಗೂ ಛಾಯಾಗ್ರಾಹಕ ಶಂಕರ್ ಇವರ ತಾಯಿ ಲಕ್ಷ್ಮಮ್ಮ…

19 hours ago