Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈ ಹಿಂದೆಯೇ ಬಿಜೆಪಿಯ ಬಿ ಟೀಂ ಜೆಡಿಎಸ್ ಎಂದು ಹೇಳಿದ್ದೆವು : ದಿನೇಶ್ ಗುಂಡೂರಾವ್

Facebook
Twitter
Telegram
WhatsApp

BJP ಬಿ ಟೀಂ JDS ಎಂದು ನಾವು ಅನೇಕ ಬಾರಿ ಹೇಳಿದ್ದೆವು. ಈಗ HDK ನಮ್ಮ‌ ಮಾತು ಸತ್ಯ ಎಂಬುದನ್ನು ನಿರೂಪಿಸಲು ಹೊರಟಿದ್ದಾರೆ ಎಂದು ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.

JDS ಪಕ್ಷಕ್ಕೆ ಯಾವುದೇ ತತ್ವ ಸಿದ್ದಾಂತಗಳಿಲ್ಲ.‌ ಕೋಮುವಾದಿ ಪಕ್ಷ BJP ಜೊತೆಗೆ ಮೈತ್ರಿ ಮಾಡಿಕೊಳ್ಳಲು ಹೊರಟಿರುವ JDSಗೆ ಯಾವ ಸಿದ್ದಾಂತವಿದೆ?. ಅದೊಂದು ಅವಕಾಶವಾದಿ ಪಕ್ಷ.‌ ಅಧಿಕಾರಕ್ಕಾಗಿ ಯಾರ ಜೊತೆಗಾದರೂ ಸೈ.

JDS ಮುಂದಿರುವ ಜಾತ್ಯಾತೀತ ಎಂಬ ಪದ ಕೇವಲ ಸೋಗಲಾಡಿತನವಷ್ಟೆ. 2006 ರಲ್ಲಿ BJP ಜೊತೆ ಸೇರಿ 20-20 ಸರ್ಕಾರ ಮಾಡಿದಾಗಲೇ ಜಾತ್ಯಾತೀತ ತತ್ವಕ್ಕೆ HDK ಎಳ್ಳು‌ ನೀರು ಬಿಟ್ಟಿದ್ದರು. ಆಗಲೇ JDSನ ಅವನತಿ ಶುರುವಾಗಿದ್ದು. 2004ರಲ್ಲಿ 59 ಸ್ಥಾನ ಗೆದ್ದಿದ್ದ JDS ಈ ಬಾರಿ 19 ಸ್ಥಾನಕ್ಕೆ ಕುಸಿಯಲು ಈ ನಕಲಿ ಜಾತ್ಯಾತೀತ ಸಿದ್ದಾಂತವೇ ಕಾರಣ.

BJPಗೆ ವಿಪಕ್ಷ ನಾಯಕನ ಎರವಲು ಸೇವೆ ನೀಡುತ್ತಿರುವ HDK, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಬದಲು ವಿಲೀನ ಮಾಡಿಕೊಳ್ಳಲಿ. ಆಗ ತಾವೇ ಅಧಿಕೃತವಾಗಿ ವಿಪಕ್ಷ ನಾಯಕನಾಗಬಹುದು. ಈ ಮೂಲಕವಾದರೂ HDKಯವರ ಸುಳ್ಳು ಜಾತ್ಯಾತೀತತೆಯ ನಕಲಿ‌ ಶ್ಯಾಮನ ಅವತಾರ ಕೊನೆಯಾಗಲಿ‌ ಎಂದು ಟ್ವೀಟ್ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

error: Content is protected !!