Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಈ ಹಿಂದೆಯೇ ಬಿಜೆಪಿಯ ಬಿ ಟೀಂ ಜೆಡಿಎಸ್ ಎಂದು ಹೇಳಿದ್ದೆವು : ದಿನೇಶ್ ಗುಂಡೂರಾವ್

---Advertisement---

BJP ಬಿ ಟೀಂ JDS ಎಂದು ನಾವು ಅನೇಕ ಬಾರಿ ಹೇಳಿದ್ದೆವು. ಈಗ HDK ನಮ್ಮ‌ ಮಾತು ಸತ್ಯ ಎಂಬುದನ್ನು ನಿರೂಪಿಸಲು ಹೊರಟಿದ್ದಾರೆ ಎಂದು ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.

JDS ಪಕ್ಷಕ್ಕೆ ಯಾವುದೇ ತತ್ವ ಸಿದ್ದಾಂತಗಳಿಲ್ಲ.‌ ಕೋಮುವಾದಿ ಪಕ್ಷ BJP ಜೊತೆಗೆ ಮೈತ್ರಿ ಮಾಡಿಕೊಳ್ಳಲು ಹೊರಟಿರುವ JDSಗೆ ಯಾವ ಸಿದ್ದಾಂತವಿದೆ?. ಅದೊಂದು ಅವಕಾಶವಾದಿ ಪಕ್ಷ.‌ ಅಧಿಕಾರಕ್ಕಾಗಿ ಯಾರ ಜೊತೆಗಾದರೂ ಸೈ.

JDS ಮುಂದಿರುವ ಜಾತ್ಯಾತೀತ ಎಂಬ ಪದ ಕೇವಲ ಸೋಗಲಾಡಿತನವಷ್ಟೆ. 2006 ರಲ್ಲಿ BJP ಜೊತೆ ಸೇರಿ 20-20 ಸರ್ಕಾರ ಮಾಡಿದಾಗಲೇ ಜಾತ್ಯಾತೀತ ತತ್ವಕ್ಕೆ HDK ಎಳ್ಳು‌ ನೀರು ಬಿಟ್ಟಿದ್ದರು. ಆಗಲೇ JDSನ ಅವನತಿ ಶುರುವಾಗಿದ್ದು. 2004ರಲ್ಲಿ 59 ಸ್ಥಾನ ಗೆದ್ದಿದ್ದ JDS ಈ ಬಾರಿ 19 ಸ್ಥಾನಕ್ಕೆ ಕುಸಿಯಲು ಈ ನಕಲಿ ಜಾತ್ಯಾತೀತ ಸಿದ್ದಾಂತವೇ ಕಾರಣ.

BJPಗೆ ವಿಪಕ್ಷ ನಾಯಕನ ಎರವಲು ಸೇವೆ ನೀಡುತ್ತಿರುವ HDK, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಬದಲು ವಿಲೀನ ಮಾಡಿಕೊಳ್ಳಲಿ. ಆಗ ತಾವೇ ಅಧಿಕೃತವಾಗಿ ವಿಪಕ್ಷ ನಾಯಕನಾಗಬಹುದು. ಈ ಮೂಲಕವಾದರೂ HDKಯವರ ಸುಳ್ಳು ಜಾತ್ಯಾತೀತತೆಯ ನಕಲಿ‌ ಶ್ಯಾಮನ ಅವತಾರ ಕೊನೆಯಾಗಲಿ‌ ಎಂದು ಟ್ವೀಟ್ ಮಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment