Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿಂದೆ ಜಾತಿಗಣತಿ ಮಾಡಿದಾಗ ಕೋಟಿ ಸಂಖ್ಯೆ ಇತ್ತು.. ಈಗ ಮಾಡಿದರೆ ವೀರಶೈವ 2 ಕೋಟಿ ಇರುತ್ತೆ : ಶ್ರೀಶೈಲ ಜಗದ್ಗುರು

---Advertisement---

ದಾವಣಗೆರೆ: ಈ ಹಿಂದೆ ಸಮಾಜವನ್ನು ಒಡೆದು ಇಬ್ಬಾಗ ಮಾಡಲು ಹೋಗಿ ಕೈ ಸುಟ್ಟಿಕೊಂಡರು. ಇದೀಗ ಜಾತಿಗಣತಿ ಮೂಲಕ ಸಮಾಜವನ್ನು ಸಂಕುಚಿತ ಮಾಡಲು ಹೊರಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ, ಶ್ರೀ ಶೈಲ ಮಠದ ಚನ್ನಸಿದ್ದರಾಮ ಪಂಡಿತರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಕಿಡಿಕಾರಿದ್ದಾರೆ.

ಲಿಂಗಾಯತ ಅಧಿವೇಶನದಲ್ಲಿ ಮಾತನಾಡಿದ ಅವರು, ಸಮಾಜಕ್ಕೆ ಯಾವಾಗ ಅನ್ಯಾಯವಾಗುತ್ತದೋ, ಸಮಾಜಕ್ಕೆ ಯಾವಾಗ ಧಕ್ಕೆಯಾಗುತ್ತದೋ ಅಂದು ಸಮಾಜದ ಪರವಾಗಿ ನಿಂತಿರುವುದು ಲಿಂಗಾಯತ ಸಮುದಾಯ. ಕೆಲವರು ರಾಜಕೀಯ ವಿಚಾರಕ್ಕೆ ಸಮಾಜವನ್ನು ಒಡೆಯುವ ಕೆಲಸ ಮಾಡಿದ್ದರು. ಆಗ ಸಮಾಜದ ಪರವಾಗಿ ನಿಂತು, ಇಬ್ಬಾಗವಾಗದಂತೆ ತಡೆದವರು ಶಾಮನೂರು ಶಿವಶಂಕರಪ್ಪನವರು. ರಾಜಕೀಯ ಮುಖ್ಯವಲ್ಲ, ಸಮಾಜ ಮುಖ್ಯ ಎಂದು ನಿಂತರು. ಪದೇ ಪದೇ ಸಮಾಜದ ವಿಚಾರಕ್ಕೆ ಕೈ ಹಾಕಿದವರಿಗೆ ಎಚ್ಚರಿಕೆ ಕೊಡುತ್ತೇವೆ. ಹಿಂದೆ ಸಮಾಜ ಒಡೆಯಲು ಹೋಗಿ ಕೈ ಸುಟ್ಟಿಕೊಂಡರು.

ಈಗ ಮತ್ತದೆ ಕೆಲಸವನ್ನು ಮಾಡುವುದಕ್ಕೆ ಹೊರಟಿದ್ದಾರೆ. ಮತ್ತೆ ಕೈ ಸುಟ್ಟುಕೊಳ್ಳಬೇಕಾಗುತ್ತದೆ. ಹಿಂದೆ ಚೆನ್ನಪ್ಪರೆಡ್ಡಿ ಆಯೋಗ ಜಾತಿಗಣತಿ ವರದಿ ಮಾಡಿದಾಗ ಒಂದು ಕೋಟಿಗೂ ಅಧಿಕ ಇತ್ತು. ಈಗ ಮತ್ತೆ ಜಾತಿಗಣತಿ ಮಾಡಿದರೆ ವೀರಶೈವ ಎರಡು ಕೋಟಿಗೂ ಅಧಿಕವಾಗುತ್ತದೆ. ಲಿಂಗಾಯತ ಒಳಪಂಗಡಗಳೆಲ್ಲಾ ಒಂದಾಗಬೇಕು. ಮುಸ್ಲಿಂ ಸಮುದಾಯಕ್ಕೆ ಹೇಗೆ 786 ಕೋಡ್ ಇದೆಯೋ ಅದೇ ತರಹ ವೀರಶೈವ ಲಿಂಗಾಯತ ಧರ್ಮಕ್ಕೆ ಒಂದು ಕೋಡ್ ಹೇಳುತ್ತೇವೆ. 856 ವೀರಶೈವ ಲಿಂಗಾಯತ ಕೋಡ್ ಆಗಿ ಬಳಸಬೇಕು ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...