Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿಂದೆ ಜಾತಿಗಣತಿ ಮಾಡಿದಾಗ ಕೋಟಿ ಸಂಖ್ಯೆ ಇತ್ತು.. ಈಗ ಮಾಡಿದರೆ ವೀರಶೈವ 2 ಕೋಟಿ ಇರುತ್ತೆ : ಶ್ರೀಶೈಲ ಜಗದ್ಗುರು

Facebook
Twitter
Telegram
WhatsApp

ದಾವಣಗೆರೆ: ಈ ಹಿಂದೆ ಸಮಾಜವನ್ನು ಒಡೆದು ಇಬ್ಬಾಗ ಮಾಡಲು ಹೋಗಿ ಕೈ ಸುಟ್ಟಿಕೊಂಡರು. ಇದೀಗ ಜಾತಿಗಣತಿ ಮೂಲಕ ಸಮಾಜವನ್ನು ಸಂಕುಚಿತ ಮಾಡಲು ಹೊರಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ, ಶ್ರೀ ಶೈಲ ಮಠದ ಚನ್ನಸಿದ್ದರಾಮ ಪಂಡಿತರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಕಿಡಿಕಾರಿದ್ದಾರೆ.

ಲಿಂಗಾಯತ ಅಧಿವೇಶನದಲ್ಲಿ ಮಾತನಾಡಿದ ಅವರು, ಸಮಾಜಕ್ಕೆ ಯಾವಾಗ ಅನ್ಯಾಯವಾಗುತ್ತದೋ, ಸಮಾಜಕ್ಕೆ ಯಾವಾಗ ಧಕ್ಕೆಯಾಗುತ್ತದೋ ಅಂದು ಸಮಾಜದ ಪರವಾಗಿ ನಿಂತಿರುವುದು ಲಿಂಗಾಯತ ಸಮುದಾಯ. ಕೆಲವರು ರಾಜಕೀಯ ವಿಚಾರಕ್ಕೆ ಸಮಾಜವನ್ನು ಒಡೆಯುವ ಕೆಲಸ ಮಾಡಿದ್ದರು. ಆಗ ಸಮಾಜದ ಪರವಾಗಿ ನಿಂತು, ಇಬ್ಬಾಗವಾಗದಂತೆ ತಡೆದವರು ಶಾಮನೂರು ಶಿವಶಂಕರಪ್ಪನವರು. ರಾಜಕೀಯ ಮುಖ್ಯವಲ್ಲ, ಸಮಾಜ ಮುಖ್ಯ ಎಂದು ನಿಂತರು. ಪದೇ ಪದೇ ಸಮಾಜದ ವಿಚಾರಕ್ಕೆ ಕೈ ಹಾಕಿದವರಿಗೆ ಎಚ್ಚರಿಕೆ ಕೊಡುತ್ತೇವೆ. ಹಿಂದೆ ಸಮಾಜ ಒಡೆಯಲು ಹೋಗಿ ಕೈ ಸುಟ್ಟಿಕೊಂಡರು.

ಈಗ ಮತ್ತದೆ ಕೆಲಸವನ್ನು ಮಾಡುವುದಕ್ಕೆ ಹೊರಟಿದ್ದಾರೆ. ಮತ್ತೆ ಕೈ ಸುಟ್ಟುಕೊಳ್ಳಬೇಕಾಗುತ್ತದೆ. ಹಿಂದೆ ಚೆನ್ನಪ್ಪರೆಡ್ಡಿ ಆಯೋಗ ಜಾತಿಗಣತಿ ವರದಿ ಮಾಡಿದಾಗ ಒಂದು ಕೋಟಿಗೂ ಅಧಿಕ ಇತ್ತು. ಈಗ ಮತ್ತೆ ಜಾತಿಗಣತಿ ಮಾಡಿದರೆ ವೀರಶೈವ ಎರಡು ಕೋಟಿಗೂ ಅಧಿಕವಾಗುತ್ತದೆ. ಲಿಂಗಾಯತ ಒಳಪಂಗಡಗಳೆಲ್ಲಾ ಒಂದಾಗಬೇಕು. ಮುಸ್ಲಿಂ ಸಮುದಾಯಕ್ಕೆ ಹೇಗೆ 786 ಕೋಡ್ ಇದೆಯೋ ಅದೇ ತರಹ ವೀರಶೈವ ಲಿಂಗಾಯತ ಧರ್ಮಕ್ಕೆ ಒಂದು ಕೋಡ್ ಹೇಳುತ್ತೇವೆ. 856 ವೀರಶೈವ ಲಿಂಗಾಯತ ಕೋಡ್ ಆಗಿ ಬಳಸಬೇಕು ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!