Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಉತ್ತಮ ಪೋಷಕಾಂಶಗಳುಳ್ಳ ಆಹಾರ ಸೇವಿಸಿ ಸದೃಢ ಆರೋಗ್ಯವಂತರಾಗಿ : ಶ್ರೀನಿವಾಸ ಮೂರ್ತಿ

---Advertisement---

ಚಿತ್ರದುರ್ಗ ಫೆ. 05 : ಉತ್ತಮ ಪೋಷಕಾಂಶಗಳುಳ್ಳ ಸಮತೋಲನ ಆಹಾರ ಸೇವನೆಯಿಂದ ಉತ್ತಮ ಸದೃಡ ಆರೋಗ್ಯವಂತರಾಗಬಹುದು ಎಂದು  ಬುದ್ಧನಗರ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಟಿ.ಶ್ರೀನಿವಾಸಮೂರ್ತಿ ಹೇಳಿದರು.

 

ರಾಜೇಂದ್ರ ನಗರದ ಅಂಗನವಾಡಿ ಕೇಂದ್ರದಲ್ಲಿ ಬಾಣಂತಿ ಗರ್ಭಿಣಿಯರಿಗಾಗಿ ಏರ್ಪಡಿಸಿದ್ದ ಪೌಷ್ಠಿಕಾಂಶಿ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಜನರು ಆಧುನಿಕ ಆಹಾರ ಪದ್ಧತಿಗೆ ಮಾರು ಹೋಗಿ, ಕಾಳುಗಳು ಕಾಯಿ ಪಲ್ಯೆಗಳ ಉಪಯೋಗ ಕಡಿಮೆ ಮಾಡಿದ್ದಾರೆ. ಇಡ್ಲಿ, ದೋಸೆ, ಪಲಾವ್, ಅವಲಕ್ಕಿ, ಪುಳಿಯೋಗರೆ, ಬೇಳೆ ಬಾತ್ ಹೀಗೆ ಹೇಳುತ್ತಾ ಹೋದರೆ ಅಕ್ಕಿಯಿಂದ ತಯಾರಿಸಿದ ತಿನಿಸುಗಳ ದೊಡ್ಡ ಪಟ್ಟಿಯೇ ಬೆಳೆಯುತ್ತದೆ ಇವೆಲ್ಲವುಗಳ ಮಧ್ಯೆ ಕಾಳುಗಳು, ಮೊಳಕೆ ಕಾಳುಗಳು, ಕಾಯಿ ಪಲ್ಯೆಗಳು, ರೊಟ್ಟಿ, ಚಟ್ಣಿ,  ರಾಗಿ, ಜೋಳ ಗೋಧಿ, ಸಿರಿಧಾನ್ಯಗಳನ್ನು  ಬಹಳಷ್ಟು ಜನ ಮರೆತೇ ಹೋಗಿದ್ದಾರೆ. ಹಿಂದೆ ಇವುಗಳನ್ನೆ ತಿನ್ನುವ ಪದ್ಧತಿ ಇದ್ದುದರಿಂದ ಜನರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಗೆ ಇದ್ದುದು ತಿಳಿದಿದೆ.  ಇತ್ತೀಚಿನ ಜನರಲ್ಲಿ ಆಧುನಿಕ ಆಹಾರ ಪದ್ಧತಿಗಳಿಂದ ಬಹುತೇಕ ಜನರಲ್ಲಿ ರೋಗನಿರೋಧಕ ಶಕ್ತಿ ಕಡಿಮೆಯಾಗುತ್ತಿದೆಯೇನೊ ಎಂಬ ಅನುಮಾನ ಉಂಟಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು. ಎಲ್ಲರು ಉತ್ತಮ ಪೆÇೀಷಕಾಂಶಗಳುಳ್ಳ ಆಹಾರ ಸೇವಿಸಿ, ಬಾಣಂತಿಯರು, ಗರ್ಭಿಣಿಯರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಕರೆ ನೀಡಿದರು
ಜಿಲ್ಲಾ ಪೌಷ್ಠಿಕಾಂಶ ಮೇಲ್ವಿಚಾರಕಿ ಸಣ್ಣ ರಂಗಮ್ಮ ಸೇರಿದಂತೆ ಸಿಬ್ಬಂದಿಗಳಾದ ಉಷಾ, ಏಕಾಂತಮ್ಮ, ಸುಜಾತ, ಗೀತಮ್ಮ, ವಿಜಯಮ್ಮ, ಹಾಗೂ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಬಾಣಂತಿ ಗರ್ಭಿಣಿಯರು ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...