ಚಿತ್ರದುರ್ಗ ಫೆ. 05 : ಉತ್ತಮ ಪೋಷಕಾಂಶಗಳುಳ್ಳ ಸಮತೋಲನ ಆಹಾರ ಸೇವನೆಯಿಂದ ಉತ್ತಮ ಸದೃಡ ಆರೋಗ್ಯವಂತರಾಗಬಹುದು ಎಂದು ಬುದ್ಧನಗರ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಟಿ.ಶ್ರೀನಿವಾಸಮೂರ್ತಿ ಹೇಳಿದರು.
ರಾಜೇಂದ್ರ ನಗರದ ಅಂಗನವಾಡಿ ಕೇಂದ್ರದಲ್ಲಿ ಬಾಣಂತಿ ಗರ್ಭಿಣಿಯರಿಗಾಗಿ ಏರ್ಪಡಿಸಿದ್ದ ಪೌಷ್ಠಿಕಾಂಶಿ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಜನರು ಆಧುನಿಕ ಆಹಾರ ಪದ್ಧತಿಗೆ ಮಾರು ಹೋಗಿ, ಕಾಳುಗಳು ಕಾಯಿ ಪಲ್ಯೆಗಳ ಉಪಯೋಗ ಕಡಿಮೆ ಮಾಡಿದ್ದಾರೆ. ಇಡ್ಲಿ, ದೋಸೆ, ಪಲಾವ್, ಅವಲಕ್ಕಿ, ಪುಳಿಯೋಗರೆ, ಬೇಳೆ ಬಾತ್ ಹೀಗೆ ಹೇಳುತ್ತಾ ಹೋದರೆ ಅಕ್ಕಿಯಿಂದ ತಯಾರಿಸಿದ ತಿನಿಸುಗಳ ದೊಡ್ಡ ಪಟ್ಟಿಯೇ ಬೆಳೆಯುತ್ತದೆ ಇವೆಲ್ಲವುಗಳ ಮಧ್ಯೆ ಕಾಳುಗಳು, ಮೊಳಕೆ ಕಾಳುಗಳು, ಕಾಯಿ ಪಲ್ಯೆಗಳು, ರೊಟ್ಟಿ, ಚಟ್ಣಿ, ರಾಗಿ, ಜೋಳ ಗೋಧಿ, ಸಿರಿಧಾನ್ಯಗಳನ್ನು ಬಹಳಷ್ಟು ಜನ ಮರೆತೇ ಹೋಗಿದ್ದಾರೆ. ಹಿಂದೆ ಇವುಗಳನ್ನೆ ತಿನ್ನುವ ಪದ್ಧತಿ ಇದ್ದುದರಿಂದ ಜನರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಗೆ ಇದ್ದುದು ತಿಳಿದಿದೆ. ಇತ್ತೀಚಿನ ಜನರಲ್ಲಿ ಆಧುನಿಕ ಆಹಾರ ಪದ್ಧತಿಗಳಿಂದ ಬಹುತೇಕ ಜನರಲ್ಲಿ ರೋಗನಿರೋಧಕ ಶಕ್ತಿ ಕಡಿಮೆಯಾಗುತ್ತಿದೆಯೇನೊ ಎಂಬ ಅನುಮಾನ ಉಂಟಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು. ಎಲ್ಲರು ಉತ್ತಮ ಪೆÇೀಷಕಾಂಶಗಳುಳ್ಳ ಆಹಾರ ಸೇವಿಸಿ, ಬಾಣಂತಿಯರು, ಗರ್ಭಿಣಿಯರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಕರೆ ನೀಡಿದರು
ಜಿಲ್ಲಾ ಪೌಷ್ಠಿಕಾಂಶ ಮೇಲ್ವಿಚಾರಕಿ ಸಣ್ಣ ರಂಗಮ್ಮ ಸೇರಿದಂತೆ ಸಿಬ್ಬಂದಿಗಳಾದ ಉಷಾ, ಏಕಾಂತಮ್ಮ, ಸುಜಾತ, ಗೀತಮ್ಮ, ವಿಜಯಮ್ಮ, ಹಾಗೂ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಬಾಣಂತಿ ಗರ್ಭಿಣಿಯರು ಹಾಜರಿದ್ದರು.
ಚಿತ್ರದುರ್ಗ. ಫೆ.05: ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ತಮ್ಮ ಅವಶ್ಯಕತೆಗಳಿಗಾಗಿ ಸಣ್ಣ ಫೈನಾನ್ಸ್ ಕಂಪನಿಗಳಲ್ಲಿ ಸಾಲ ಪಡೆದು,ಮರುಪಾವತಿಸುವಲ್ಲಿ ವಿಳಂಬ…
ಚಿತ್ರದುರ್ಗ.ಫೆ.05: ಜಿಲ್ಲಾಸ್ಪತ್ರೆಗೆ ಆಗಮಿಸುವ ರೋಗಿಗಳಿಗೆ ಆಯುಷ್ಮಾನ್ ಭಾರತ ಆರೋಗ್ಯ ಯೋಜನೆಯಡಿ ಸೂಕ್ತ ಚಿಕಿತ್ಸೆ ನೀಡಬೇಕು. ಆಸ್ಪತ್ರೆಯಲ್ಲಿ ಎಲ್ಲ ರೀತಿಯ ಮೂಲಭೂತ…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿವೈ ವಿಜಯೇಂದ್ರ ಅವರನ್ನು ಕೆಳಗೆ ಇಳಿಸಬೇಕೆಂದು ಯತ್ನಾಳ್ ಬಣ ಪ್ರಯತ್ನ ಪಡುತ್ತಿದೆ. ಇದರ ನಡುವೆ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಫೆ.…