Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನೇರಳೆ ಹಣ್ಣು ತಿಂದು ನೀರು ಕುಡಿದರೆ ಆರೋಗ್ಯದ ಮೇಲೆ ಈ ಎಲ್ಲಾ ಪರಿಣಾಮ ಉಂಟಾಗಿತ್ತದೆ! 

---Advertisement---

ಬೆಸಿಗೆಗಾಲ ಬಂತೆದಂರೆ ನೇರಳೆ ಹಣ್ಣಿನ ಸೀಸನ್ ಪ್ರಾರಂಭ.ನೇರಳೆ ಹಣ್ಣು ತಿಂದ ತಕ್ಷಣ ನೀರು ಕುಡಿಯಬಾರದು ಎಂದು ಮನೆಯಲ್ಲಿ ಹಿರಿಯರು ಹೇಳುವುದನ್ನು ನೀವು ಕೇಳಿರಬಹುದು. ನಿಮಗೆ ಗೊತ್ತೆ ಆಯುರ್ವೇದದಿಂದ ಆಧುನಿಕ ವಿಜ್ಞಾನದವರೆಗೆ, ಈ ಸಲಹೆಯನ್ನು ಬಹಳ ಗಂಭೀರವಾಗಿ ಪರಿಗಣಿಸಬೇಕು ಎನ್ನಲಾಗಿದೆ.

ನೇರಳೆ ಆರೋಗ್ಯಕ್ಕೆ ವರದಾನವಾಗಿದೆ. ಆದರೆ ತಪ್ಪಾಗಿ ತಿಂದರೆ ಇದು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ನೇರಳೆ ಹಣ್ಣು ತಿಂದ ತಕ್ಷಣ ನೀರು ಕುಡಿಯುವುದರಿಂದ ದೇಹದ ಮೇಲೆ ಯಾವೆಲ್ಲಾ ಪರಿಣಾಮ ಬೀರುತ್ತದೆ ಗೊತ್ತೆ ?

ನೇರಳೆ ಹಣ್ಣು ತಿಂದ ತಕ್ಷಣ ನೀರು ಕುಡಿಯುವುದರಿಂದ ಗಂಟಲು ಒಣಗುತ್ತದೆ ಅಥವಾ ನೋವುಂಟಾಗುತ್ತದೆ. ಇಂತಹ ವೇಳೆ ತಣ್ಣೀರು ಕುಡಿಯುವುದರಿಂದ ಗಂಟಲಿನ ಕಿರಿಕಿರಿ ಅಥವಾ ಟಾನ್ಸಿಲ್ ಸಮಸ್ಯೆಗಳು ಉಂಟಾಗಬಹುದು.

ಮಧುಮೇಹಿಗಳಿಗೆ ನೇರಳೆ ಹಣ್ಣು ಅಮೃತದಂತೆ. ಏಕೆಂದರೆ ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುತ್ತದೆ. ಆದರೆ ನೇರಳೆ ಹಣ್ಣು ತಿಂದ ತಕ್ಷಣ ಹೆಚ್ಚು ನೀರು ಕುಡಿಯುವುದರಿಂದ ಚಯಾಪಚಯ ಕ್ರಿಯೆ ನಿಧಾನವಾಗುತ್ತದೆ, ಇದು ದೇಹದಲ್ಲಿ ಇನ್ಸುಲಿನ್ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರುತ್ತದೆ.

ನೇರಳೆ ಹಣ್ಣನ್ನು ತಿಂದ ತಕ್ಷಣ ನೀರು ಕುಡಿದರೆ, ಕೆಲವು ಜೀರ್ಣಕಾರಿ ರಸಗಳು ನಮ್ಮ ಲಾಲಾರಸದೊಂದಿಗೆ ಬೆರೆತುಹೋಗುತ್ತವೆ.ಹೊಟ್ಟೆ ನೋವಿನಿಂದ ಬಳಲಬಹುದು.

ನೇರಳೆ ಹಣ್ಣನ್ನು ಯಾವಾಗಲೂ ಸ್ವಲ್ಪ ಕಪ್ಪು ಉಪ್ಪು ಅಥವಾ ಸಮುದ್ರ ಉಪ್ಪಿನೊಂದಿಗೆ ತಿನ್ನಬೇಕು. ಇದರಿಂದ ಕಹಿ ಕಡಿಮೆಯಾಗುತ್ತದೆ ಮತ್ತು ಸುಲಭವಾಹಿ ಜೀರ್ಣವಾಗುತ್ತದೆ. ನೇರಳೆ ಹಣ್ಣನ್ನು ತಿಂದ ಕನಿಷ್ಠ 30 ರಿಂದ 45 ನಿಮಿಷಗಳ ನಂತರ ನೀರು ಕುಡಿಯುವುದು ಸುರಕ್ಷಿತವೆಂದು ಪರಿಗಣಿಸಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...