Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿದ್ದಾರ್ಥ ಸಂಸ್ಥೆಗಳ ಮೇಲೆ ಇಡಿ ದಾಳಿ : ಪರಮೇಶ್ವರ್ ಅವರ ಫಸ್ಟ್ ರಿಯಾಕ್ಷನ್

ಸಚಿವ ಪರಮೇಶ್ವರ್
---Advertisement---

ಬೆಂಗಳೂರು; ಇಡಿ ಅಧಿಕಾರಿಗಳು ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆಸಿದ್ದಾರೆ. ಈ ಸಂಬಂಧ ಇಂದು ಪ್ರತಿಕ್ರಿಯೆ ನೀಡಿರುವ ಸಚಿವ ಜಿ.ಪರಮೇಶ್ವರ್ ಅವರು, ಯಾವ ವಿಚಾರಕ್ಕೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂಬುದು ಗೊತ್ತಿಲ್ಲ. ಇಡಿ ಅಧಿಕಾರಿಗಳು ನಮ್ಮ ಸಂಸ್ಥೆಯ ಅಕೌಂಟ್ಸ್ ಕೇಳಿದ್ದಾರೆ. ಯಾವ ವರ್ಷದ ಲೆಕ್ಕ ಕೇಳಿದ್ದಾರೆ ಎಂಬುದೆಲ್ಲವನ್ನು ಕೊಡಿ ಎಂದು ನಾನು ಕೂಡ ಹೇಳಿದ್ದೀ‌ನಿ. ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿಯ ಉದ್ದೇಶ ಗೊತ್ತಿಲ್ಲ. ಅವರಿಗೆ ಸಹಕಾರ ಕೊಟ್ಟಿದ್ದೇವೆ. ನಾನು ಕಾನೂನಿಗೆ ಬೆಲೆ ಕೊಟ್ಟು ಬಂದವನು. ಕಾನೂನು ಎಲ್ಲರಿಗೂ ಒಂದೇ. ಕಾನೂನಿಗೆ ಗೌರವ ಕೊಡುತ್ತೇನೆ. ಇಡಿ ಅಧಿಕಾರಿಗಳು ಏನು ಬೇಕಾದರೂ ಪರಿಶೀಲನೆ ಮಾಡಲಿ. ನಾವೂ ಕೂಡ ಸಹಕಾರ ಕೊಡುತ್ತೇವೆ ಎಂದಿದ್ದಾರೆ.

ರಣದೀಪ್ ಸುರ್ಜೆವಾಲ ಅವರು ದಲಿತ ಎಂಬ ಕಾರಣಕ್ಕೆ ದಾಳಿ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಜಿ.ಪರಮೇಶ್ವರ್ ಅವರು, ಅವರು ಯಾವ ಅರ್ಥದಲ್ಲು ಹೇಳಿದ್ದಾರೋ ಗೊತ್ತಿಲ್ಲ. ಇಂಥ ವಿಚಾರಗಳಲ್ಲಿ ಯಾರೂ ಜಾತಿ ನೋಡಿ ಬರುವುದಿಲ್ಲ. ಆ ಬಗ್ಗೆ ನಾನು ಈಗ ಏನು ಹೇಳುವುದಿಲ್ಲ ಎಂದಿದ್ದಾರೆ. ನಮ್ಮ ಶಿಕ್ಷಣ ಸಂಸ್ಥೆಯು ಸ್ಥಾಪನೆಯಾಗಿ 68 ವರ್ಷಗಳೇ ಆಗಿವೆ. ನಮ್ಮ ತಂದೆ ಕಾಲದಿಂದಲೂ ಸಂಸ್ಥೆ ನಡೆಯುತ್ತಿದೆ. ಸಿದ್ದಾರ್ಥ ಸಂಸ್ಥೆಯಿಂದ ಕಲಿತು 40 ಸಾವಿರ ಮಂದಿ ಇಂಜಿನಿಯರ್ ಆಗಿದ್ದಾರೆ. 10 ಸಾವಿರ ಮಂದಿ ವೈದ್ಯರಾಗಿದ್ದಾರೆ. ಜಾರಿ ನಿರ್ದೇಶನಾಲಯ ಇಲ್ಲಿಯವರೆಗೂ ಏನು ಹೇಳಿಲ್ಲ. ಶಫಿ ಅಹ್ಮದ್ ಅವರ ಶಿಕ್ಷಣ ಸಂಸ್ಥೆಯನ್ನು ನಾವೇ ಖರೀದಿ ಮಾಡಿದ್ದೇವೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...