Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಶಿಕ್ಷಣವೆಂದರೆ ಕೇವಲ ಓದು ಬರೆಯುವುದನ್ನು ಕಲಿಯುವುದಲ್ಲ : ತಾರಿಣಿ ಶುಭದಾಯಿನಿ

---Advertisement---

 

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.01 : ಶಿಕ್ಷಣವೆಂದರೆ ಕೇವಲ ಓದು ಬರೆಯುವುದನ್ನು ಕಲಿಯುವುದಲ್ಲ ಎಂದು ಶ್ರೀಮತಿ ತಾರಿಣಿ ಶುಭದಾಯಿನಿ ಹೇಳಿದರು.

ಎಸ್‍.ಆರ್. ಎಸ್. ಹೆರಿಟೇಜ್ ಶಾಲೆಯಲ್ಲಿ
10ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದ “ಪ್ರಗತಿಪಥಂ” ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.
ಅದು ವ್ಯಕ್ತಿಯಲ್ಲಿನ ವಿಷಯ ಜ್ಞಾನವನ್ನು ಒಡಮೂಡಿಸುವುದರೊಂದಿಗೆ ವರ್ತನೆ,ನಡವಳಿಕೆ, ಬದುಕುವ ಕಲೆ, ಕೌಶಲ, ಮೌಲ್ಯಗಳು, ನಡೆನುಡಿ, ಆಚಾರವಿಚಾರ ಕಲಿತು ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆಯುವುದರ ಜೊತೆ ಜೀವನದಲ್ಲಿ ಯಶಸ್ಸು ಪಡೆಯಲು ಬೇಕಾದ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕೆಂದು ಶ್ರೀಮತಿ ತಾರಿಣಿ ಶುಭದಾಯಿನಿ ಹೇಳಿದರು.

ಕಾರ್ಯಕ್ರಮ ಅಧ್ಯಕ್ಷರಾದ ಬಿ ಎ ಲಿಂಗಾರೆಡ್ಡಿ ಮಾತನಾಡಿ ವಿದ್ಯಾರ್ಥಿಗಳ ಮುಂದಿನ ಭವಿಷ್ಯ ಕುರಿತು ಸ್ಫೂರ್ತಿದಾಯಕ ನುಡಿಮುತ್ತುಗಳನ್ನು ತಿಳಿಸುವುದರ ಜೊತೆ ವಿದ್ಯಾರ್ಥಿಗಳಿಗೆ ಶುಭಕೋರಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀಮತಿ ಸುಜಾತ ಲಿಂಗಾರೆಡ್ಡಿ, ಆಡಳಿತಾಧಿಕಾರಿಗಳಾದ ಡಾ|| ರವಿ ಟಿ ಎಸ್ ಶಾಲೆಯ ಪ್ರಾಂಶುಪಾಲರಾದ ಪ್ರಭಾಕರ್ ಎಂ ಎಸ್, ಐಸಿಎಸ್‍ಈ ವಿಭಾಗದ ಪ್ರಾಂಶುಪಾಲರಾದ ಅರ್ಪಿತಾ ಎಮ್ ಎಸ್, ಸ್ಟೇಟ್‍ಬೋರ್ಡ್ ವಿಭಾಗದ ಶ್ರೀಮತಿ ಪದ್ಮಾವತಮ್ಮ ಕೆ ಜೆ, ಶೈಕ್ಷಣಿಕ ಸಹಸಂಯೋಜಕರಾದ ರಾಕೇಶ್ ಬಿ ವಿ, ಶಾಲೆಯ ಬೋಧಕ ಸಿಬ್ಬಂದಿವರ್ಗ ಮತ್ತು ಪೋಷಕರು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...