Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಐದು ಗ್ಯಾರೆಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸಿ : ಶಾಸಕ ಕೆ.ಸಿ.ವಿರೇಂದ್ರ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ನ. 01 : ಕಾಂಗ್ರೆಸ್ ಪಕ್ಷ ನೀಡಿದ ಐದು ಗ್ಯಾರೆಂಟಿಗಳು ಉತ್ತಮವಾಗಿದ್ದು, ಇವುಗಳನ್ನು ಜನರ ಮನಕ್ಕೆ ತಲುಪುವಂತೆ ಕಾರ್ಯವನ್ನು ಮಾಡುವುದು ಅನಿವಾರ್ಯವಾಗಿದೆ ಇದು ಮುಂಬರುವ ಲೋಕಸಭಾ ಚುನಾವಣೆಗೆ ಅನುಕೂಲವಾಗಲಿದೆ ಎಂದು ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಆಚರಿಸಿದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡಾಂಬೆಯ ಭಾವಚಿತ್ರಕ್ಕೆ ಪುಪ್ಪ ನಮನ ಸಲ್ಲಿಸಿ ಮಾತನಾಡಿದ ಶಾಸಕರು, ಕಾಂಗ್ರೆಸ್ ಪಕ್ಷ ಚುನಾವಣೆ ಸಮಯದಲ್ಲಿ ಮತದಾರರಿಗೆ ನೀಡಿದ ಭರವಸೆಯಂತೆ ಐದು ಗ್ಯಾರೆಂಟಿಗಳನ್ನು ಈಡೇರಿಸಿದೆ. ಇದನ್ನು ಮತದಾರರ ಮನಕ್ಕೆ ತಲುಪಿಸುವಂತ ಕಾರ್ಯವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕಿದೆ. ಈ ರೀತಿ ಮಾಡುವುದರಿಂದ ಮುಂಬರುವ ಲೋಕಸಭಾ ಚುನಾವಣೆಗೆ ಅನುಕೂಲವಾಗಲಿದೆ. ಈ ಹಿನ್ನಲೆಯಲ್ಲಿ ಪಕ್ಷದ ಕಾರ್ಯಕರ್ತರು ಇದರ ಬಗ್ಗೆ ಹೆಚ್ಚಿನ ಗಮನವನ್ನು ನೀಡಬೇಕಿದೆ ಎಂದು ಶಾಸಕ ವಿರೇಂದ್ರ ಪಪ್ಪಿ ಕರೆ ನೀಡಿದರು.

ರಾಜ್ಯದ ಮುಖ್ಯಮಂತ್ರಿಗಳು ನಮ್ಮ ಕನ್ನಡ ರಾಜ್ಯೋತ್ಸವವನ್ನು ಚೆನ್ನಾಗಿ ಆಚರಣೆ ಮಾಡುವಂತೆ ಸೂಚನೆಯನ್ನು ನೀಡಿದ್ದಾರೆ. ಅದರಂತೆ ನಾವುಗಳೆಲ್ಲಾ ನಮ್ಮ ಮನೆಯ ಮುಂದೆ ಕನ್ನಡದ ರಂಗೋಲಿಯನ್ನು ಹಾಕುವುದರ ಮೂಲಕ ರಾತ್ರಿ ದೀಪವನ್ನು ಬೆಳಗುವುದರ ಮೂಲಕ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡಬೇಕಿದೆ ಎಂದರು.

ಡಿಸಿಸಿ ಅಧ್ಯಕ್ಷರಾದ ಎಂ.ಕೆ.ತಾಜ್‌ಪೀರ್ ಮಾತನಾಡಿ, ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಹಲವಾರು ವರ್ಷಗಳಿಂದ ಶಾಸಕರಿಲ್ಲದೆ ಸೂರಗಿತ್ತು, ಕಳೆದ 50 ವರ್ಷದಲ್ಲಿ ಈಗ ಮೂರನೇ ಅವದಿಯಲ್ಲಿ ಶಾಸಕರನ್ನು ಕಂಡಿದ್ದೇವೆ, ಶಾಸಕರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಸುವುದು ಖುಷಿಯಾದ ಸಂಗತಿಯಾಗಿದೆ. ರಾಜ್ಯ ಮಟ್ಟದಲ್ಲಿ ಶಾಸಕರಾದವರನ್ನು ಸೇರ್ಪಡೆ ಮಾಡುವಂತ ಕಾರ್ಯವನ್ನು ಮಾಡಲಾಗುವುದು ಉಳಿದವರನ್ನು ಜಿಲ್ಲಾ ಮಟ್ಟದಲ್ಲಿಯೇ ಸೇರಿಸಿಕೊಳ್ಳುವ ಕಾರ್ಯವನ್ನು ಮಾಡುವಂತೆ ಕೆಪಿಸಿಸಿ ಅಧ್ಯಕ್ಷ ಸೂಚನೆಯ ಮೇರೆಗೆ ಇಂದು ಹಲವಾರು ಜನರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಲಾಗುತ್ತಿದೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಈ ಬಾರಿ 135 ಸ್ಥಾನಗಳನ್ನು ಗೆಲುವುದರ ಮೂಲಕ ದಾಖಲೆಯನ್ನು ಮಾಡಿದೆ ಇದೇ ರೀತಿ ಮುಂಬರುವ ಲೋಕಸಬಾ ಚುನಾವಣೆಯಲ್ಲಿಯೂ ಸಹಾ ರಾಜ್ಯದಲ್ಲಿ ಇರುವ 28 ಸ್ಥಾನಗಳಲ್ಲಿ ಅಧಿಕ ಸ್ಥಾನಗಳನ್ನು ಗೆಲ್ಲಬೇಕಿದೆ ಇದಕ್ಕೆ ಈಗಿನಿಂದಲೇ ತಯಾರಿಯನ್ನು ಮಾಡಿಕೊಳ್ಳಬೇಕಿದೆ ಈ ಹಿನ್ನಲೆಯಲ್ಲಿ ಪಕ್ಷಕ್ಕೆ ಸೇರುವವರ ಸಂಖ್ಯೆ ಅಧಿಕವಾರದಷ್ಟು ನಮಗೆ ಲಾಭವಾಗಲಿದೆ ಎಂದು ತಾಜ್‌ಪೀರ್ ತಿಳಿಸಿ ನ. 9 ರಂದು ಸೇವಾದಳಕ್ಕೆ 100 ವರ್ಷವಾದ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಇದಕ್ಕೆ ಚಿತ್ರದುರ್ಗದಿಂದ ಬಹಳಷ್ಟು ಜನತೆ ಭಾಗವಹಿಸಬೇಕಿದೆ ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್‌ನ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಗೀತಾ ನಂದಿನಿ ಗೌಡ, ಪ್ರಧಾನ ಕಾರ್ಯದರ್ಶಿಗಳಾದ ಸಂಪತ್ ಕುಮಾರ್, ಮೈಲಾರಪ್ಪ, ಕುಶಲ ಕರ್ಮಿ ಘಟಕದ ರಾಜ್ಯಾಧ್ಯಕ್ಷರಾದ ಪ್ರಸನ್ನ ಕುಮಾರ್, ಓಬಿಸಿಯ ಎನ್.ಡಿ.ಕುಮಾರ್, ನಜ್ಮತಾಜ್, ಮೀನಾಕ್ಷಿ, ಭಾಗ್ಯಮ್ಮ, ಸುಧಾ, ಖಾಸಿಂಆಲಿ, ಶ್ರೀಮತಿ ಮೋಕ್ಷಾ ರುದ್ರಸ್ವಾಮಿ, ತಿಪ್ಪೇಸ್ವಾಮಿ, ಲೋಕೇಶ್, ಅಲ್ಲಾಭಕ್ಷಿ, ಚೋಟು, ಮುದಸಿರ್ ನವಾಜ್, ಷಬ್ಬೀರ್ ಸೇರಿದಂತೆ ಇತರರು ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

ನಾಳೆ ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ :   ಸಿದ್ದತೆ ಹೇಗಿದೆ ?

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಸಹೋದರಿಯರ ನಡುವೆ ಜಗಳ, ಮುನಿಸು ಇರುವುದು ಸಹಜ. ಆದ್ರೆ, ಕೋಟೆನಾಡಿನಲ್ಲಿ ಮಾತ್ರ ಮುನಿದು

error: Content is protected !!