Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಏಕನಾಥೇಶ್ವರಿ–ಬರಗೇರಮ್ಮ ಮೆರವಣಿಗೆ ವೈಭವ: ತಾರಕಕ್ಕೇರಿದ ಭಕ್ತರ ಉತ್ಸಾಹ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 03 : ಐತಿಹಾಸಿಕ ಚಿತ್ರದುರ್ಗ ನಗರದಲ್ಲಿ ಶುಕ್ರವಾರ ಏಕನಾಥೇಶ್ವರಿ ಹಾಗೂ ಬರಗೇರಮ್ಮನವರ ಮೆರವಣಿಗೆ ವೈಭವೋಪೇತವಾಗಿ ನಡೆಯಿತು.

ಕೋಟೆ ರಸ್ತೆಯಲ್ಲಿರುವ ಪಾದಗುಡಿ ಮುಂಭಾಗದಲ್ಲಿ ತಹಶೀಲ್ದಾರ್ ಮೆರವಣಿಗೆ ಉದ್ಘಾಟಿಸಿದರು. ಡೊಳ್ಳು, ತಮಟೆ, ವಿವಿಧ ಕಲಾ ತಂಡಗಳೊಂದಿಗೆ ಸಾಗಿದ ಮೆರವಣಿಗೆ ಆನೆಬಾಗಿಲು, ಬುರುಜನಹಟ್ಟಿ, ಸಿಹಿನೀರು ಹೊಂಡದ ರಸ್ತೆ, ಸಿದ್ದರಾಮೇಶ್ವರ ಸರ್ಕಲ್, ಗಾಯತ್ರಿ ಭವನ ವೃತ್ತ, ಕರುವಿನಕಟ್ಟೆ, ಜೋಗಿಮಟ್ಟಿ ರಸ್ತೆಯಲ್ಲಿ ಸಂಚರಿಸಿತು.

 

ಜೋಡೆತ್ತಿನ ಬಂಡಿಯಲ್ಲಿ ಏಕನಾಥೇಶ್ವರಿಯನ್ನು ವಿವಿಧ ಬಗೆಯ ಬೃಹಧಾಕಾರವಾದ ಹಾರ ಹಾಗೂ ಬಣ್ಣ ಬಣ್ಣದ ಹೂವುಗಳಿಂದ ಸಿಂಗರಿಸಲಾಗಿತ್ತು. ರಸ್ತೆಯುದ್ದಕ್ಕೂ ಅಲ್ಲಲ್ಲಿ ಭಕ್ತರು ಏಕನಾಥೇಶ್ವರಿ ಅಮ್ಮನಿಗೆ ಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು. ಉರಿ ಬಿಸಿಲನ್ನು ಲೆಕ್ಕಿಸದೆ ಮೆರವಣಿಗೆಯಲ್ಲಿ ಹೊರಟವರಿಗೆ ಭಕ್ತರು ತಮ್ಮ ಮನೆಗಳ ಮುಂದೆ ತಂಪಾದ ಪಾನೀಯ ಹಾಗೂ ಮಜ್ಜಿಗೆಯನ್ನು ವಿತರಿಸಿದರು.

 

ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಮಂಜಪ್ಪ, ಮಾಜಿ ಉಪಾಧ್ಯಕ್ಷ ಎಸ್.ಬಿ.ಎಲ್.ಮಲ್ಲಿಕಾರ್ಜುನ್, ಮಾಜಿ ಸದಸ್ಯ ಗಾಡಿ ಮಂಜ, ಮೃತ್ಯುಂಜಯ, ಕುಮಾರಸ್ವಾಮಿ, ನಗರಸಭೆ ಮಾಜಿ ಸದಸ್ಯ ಸಿ.ಟಿ.ರಾಜೇಶ್, ಮಾಜಿ ನಾಮ ನಿರ್ದೇಶಿತ ಸದಸ್ಯ ಓಂಕಾರ್ ಇನ್ನು ಮುಂತಾದವರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...