Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

85 ವರ್ಷ ದಾಟಿದ ಹಿರಿಯರಿಗೆ ಮನೆಯಿಂದ ಮತದಾನ ಮಾಡಲು ಅವಕಾಶ : ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್

---Advertisement---

ಚಿತ್ರದುರ್ಗ. ಏ.10: 85 ವರ್ಷ ದಾಟಿದ ಹಿರಿಯ ನಾಗರೀಕರಿಗೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮನೆಯಿಂದಲೇ ಮತ ಚಲಾಯಿಸುವ ಹಕ್ಕು ನೀಡಲಾಗಿದೆ. ಇದರೊಂದಿಗೆ ಮತಗಟ್ಟೆ ಕೇಂದ್ರಗಳಲ್ಲಿ ಹಿರಿಯರು ನಾಗರಿಕರು ಮತದಾನ ಮಾಡಲು ಅನುಕೂಲವಾಗುವಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷ ಹಾಗೂ ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್ ಹೇಳಿದರು.

ಸೋಮವಾರ ಸಂಜೆ ನಗರದ ಕೆಳಗೋಟೆಯ ಸಿ. ಕೆ ಪುರ ಬಡಾವಣೆಯಲ್ಲಿರುವ ಈಶ್ವರಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಹಿರಿಯ ನಾಗರಿಕರ ಮತದಾನ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು‌.

ಏಪ್ರಿಲ್ 26 ರಂದು ನಡೆಯುವ ಮತದಾನ ಎನ್ನುವ, ಪ್ರಜಾಪ್ರಭುತ್ವ ಹಬ್ಬದಲ್ಲಿ ಎಲ್ಲರು ಪಾಲ್ಗೊಂಡು ತಮ್ಮ ಮತದಾನ ಹಕ್ಕು ಚಲಾಯಿಸಬೇಕು. ಪ್ರತಿ 5 ವರ್ಷಕೊಮ್ಮೆ ಬರುವ ಈ ಹಬ್ಬದಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರುಳ್ಳ 18 ವರ್ಷ ತುಂಬಿದ ಪುರುಷ ಮತ್ತು ಮಹಿಳೆಯರು ಕಡ್ಡಾಯವಾಗಿ ಮತದಾನ ಮಾಡಬೇಕು. ಮತದಾನ ಸುವರ್ಣ ಅವಕಾಶವನ್ನು ಯಾರು ಕೈಚೆಲ್ಲಬಾರದು ಎಂದರು.

ಕುಟುಂಬದಲ್ಲಿ ಗೌರವ, ಪ್ರೀತಿ ಮತ್ತು ಮಮತೆ ಇವೆಲ್ಲವನ್ನು ಕಾಪಾಡಿಕೊಂಡು ಬಂದಿರುವ ಹಿರಿಯರು, ಮನೆಯ ಎಲ್ಲ ಸದಸ್ಯರು ಹಾಗೂ ಸ್ನೇಹಿತರು, ಬಂಧು ಬಳಗದವರು ಮತದಾನ ಮಾಡುವಂತೆ ತಿಳಿ ಹೇಳಬೇಕು. ನಿಮ್ಮ ಜೀವನದಲ್ಲಿ ಬಹಳಷ್ಟು ಚುನಾವಣೆಗಳನ್ನು ನೋಡಿದ್ದೀರಿ, ಕಳೆದ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಶೇಕಡ.70/% ರಷ್ಟು ಮತದಾನವಾಗಿತ್ತು. ಈ ಬಾರಿ ಶೇಕಡ.5% ರಷ್ಟು ಮತದಾನದ ಪ್ರಮಾಣ ಹೆಚ್ಚು ಮಾಡಲು ಗುರಿ‌ ಹೊಂದಲಾಗಿದೆ. ಪ್ರತಿಯೊಬ್ಬರು ಮತದಾನ ಮಾಡಬೇಕು ಎನ್ನುವ ಉದ್ದೇಶದಿಂದ ಜಿಲ್ಲೆಯಾದ್ಯಂತ ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ ಎಂದು ಎಸ್.ಜೆ.ಸೋಮಶೇಖರ್ ತಿಳಿಸಿದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ 80 ವರ್ಷ ದಾಟಿದ ವೃದ್ಧರಿಗೆ ಮನೆಯಿಂದ ಮತ ಚಲಾಯಿಸುವ ಅವಕಾಶ ನೀಡಲಾಗಿತ್ತು. ಬಾರಿ ಲೋಕಸಭೆ ಚುನಾವಣೆಯಲ್ಲಿ ಕೇಂದ್ರ ಚುನಾವಣಾ ಆಯೋಗ ವಯೋಮಿತಿಯನ್ನು 85 ವರ್ಷಕ್ಕೆ ಏರಿಕೆ ಮಾಡಿದೆ. ಜಿಲ್ಲೆಯಲ್ಲಿ 85 ವರ್ಷ ದಾಟಿದ 11,827 ಮತದಾರರು ಇದ್ದಾರೆ. ಬೇಸಿಗೆಯ ಬಿಸಿಲಿನಲ್ಲಿ ಮತಗಟ್ಟೆಗೆ ಬರಲು ತೀವ್ರ ಸಮಸ್ಯೆ ಎದುರಿಸುತಿದ್ದ ವಯೋವೃದ್ಧರು, ಹಾಸಿಗೆ ಹಿಡಿದವರು ಮನೆಯಿಂದ ಮತದಾನ ಮಾಡಬಹದು. ಮತಗಟ್ಟೆ ಕೇಂದ್ರಗಳಿಗೆ ಬರುವ ಹಿರಿಯ ನಾಗರಿಕರಿಗೆ ವೀಲ್ ಚೇರ್ ವ್ಯವಸ್ಥೆಯನ್ನು ಮಾಡಲಾಗಿರುತ್ತದೆ. ಇದರೊಂದಿಗ ಅಗತ್ಯ ವೈದ್ಯಕೀಯ ಸಿಬ್ಬಂದಿಗಳನ್ನು ಸಹ ನೇಮಕ ಮಾಡಲಾಗಿರುತ್ತದೆ. ಆದ್ದರಿಂದ ಯಾರು ಮತದಾನದಿಂದ ವಂಚಿತರಾಗದೆ ಮತದಾನ ಮಾಡುವಂತೆ ಎಸ್.ಜೆ.ಸೋಮಶೇಖರ್ ಕೋರಿದರು.

ಇದೇ ವೇಳೆ ಮತದಾರ ಪ್ರತಿಜ್ಞಾ ವಿಧಿಯನ್ನು ಎಸ್.ಜೆ.ಸೊಮಶೇಖರ್ ಭೋದಿಸಿದರು. ಕಾರ್ಯಕ್ರಮದಲ್ಲಿ ಉಪ ಕಾರ್ಯದರ್ಶಿ ಕೆ. ತಿಮಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಭಾರತಿ ಬಣಕಾರ್, ನಗರ ಸಭೆಯ ಆಯುಕ್ತೆ ರೇಣುಕಾ,ಜಿಲ್ಲಾ ಸ್ವೀಪ್ ಸಮಿತಿಯ ಸಂಯೋಜಕಿ ಸುಷ್ಮಾರಾಣಿ,ಈಶ್ವರಿ ವಿಶ್ವವಿದ್ಯಾಲಯದ ರಶ್ಮಿ‌ ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment