Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚುನಾವಣಾ ಬಾಂಡ್ ಪ್ರಕರಣ : ಬಿಜೆಪಿ ನಾಯಕರಿಗೆ ಬಿಗ್ ರಿಲೀಫ್..!

---Advertisement---

ಬೆಂಗಳೂರು: ಚುನಾವಣಾ ಬಾಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಮಲಾ ಸೀತರಾಮನ್, ನಳೀನ್ ಕುಮಾರ್ ಕಟೀಲು ಸೇರಿದಂತೆ ಹಲವು ಬಿಜೆಪಿ ನಾಯಕರ ಮೇಲೆ ದೂರು ದಾಖಲಾಗಿತ್ತು. ಇದೀಗ ಆ ಕೇಸ್ ನಲ್ಲಿ ಹೆಸರು ಕೇಳಿ ಬಂದ ಎಲ್ಲಾ ನಾಯಕರಿಗೂ ಹೈಕೋರ್ಟ್ ರಿಲೀಫ್ ಕೊಟ್ಟಿದೆ.

ಈ ಕೇಸ್ ನಲ್ಲಿ ದಾಖಲಾಗಿದ್ದ ಎಫ್ಐಆರ್ ರದ್ದು ಕೋರಿ ನಳಿನ್ ಕುಮಾರ್ ಕಟಿಲ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಮುಂದಿನ ತನಿಖೆಗೆ ತಡೆಯಾಜ್ಞೆ ನೀಡಿದೆ. ನಳಿನ್ ಕುಮಾರ್ ಕಟೀಲು ಪರ ವಾದ ಮಂಡಿಸಿದ ಹಿರಿಯ ವಕೀಲ ರಾಘವನ್, ಈ ಪ್ರಕರಣದಡಿಯಲ್ಲಿ ಮಾಡಿರುವ ಆರೋಪವನ್ನು ಉಲ್ಲೇಖಿಸಿ, ಪ್ರಕತಣದಲ್ಲಿ ಸುಲಿಗೆಯ ವಿಚಾರವೇ ಬರುವುದಿಲ್ಲ. ದೂರುದಾರರು ಇಲ್ಲಿ ಒಳಸಂಚು ಮಾಡಿ ಆರೋಪ ಮಾಡಿದ್ದಾರೆ. ಮೂಲ ಅಂಶವೇ ಇಲ್ಲವೆಂದ ಮೇಲೆ ಸುಲಿಗೆ ಅಂಶ ಹೇಗೆ ಸಾಧ್ಯ ಎಂಬುದಾಗಿ ವಾದ ಮಂಡಿಸಿದ್ದಾರೆ.

ಇದನ್ನು ಆಕ್ಷೇಪಿಸಿದ ದೂರುದಾರ ಆದರ್ಶ ಐಯ್ಯರ್ ಪರ ವಕೀಲರಾದ ಪ್ರಶಾಂತ್​ ಭೂಷಣ್ , ಇದು ಸುಲಿಗೆಗೆ ಒಂದು ಅತ್ಯುತ್ತವಾದ ಉದಾಹರಣೆಯಾಗಿದೆ. ನಾವು ಕಾನೂನು ಪ್ರಕ್ರಿಯೆಗಳನ್ನು ಸರಿಯಾಗಿ ಅನುಸರಿಸಿದ್ದೇವೆ. ಅದರಂತೆಯೇ ಮ್ಯಾಜಿಸ್ಟ್ರೇಟ್ ಮುಂದೆ ಹೋಗಿ ಅರ್ಜಿ ಸಲ್ಲಿಸಿದ್ದು. ಕೋರ್ಟ್ ಅದನ್ನು ಪರಿಗಣಿಸಿಯೇ ಎಫ್​ಐಆರ್​ಗೆ ಸೂಚನೆ ನೀಡಿದ್ದು. ಇದು ಇಡಿ ಅಧಿಕಾರಿಗಳನ್ನು ಬಳಸಿ ಬಂಧಿಸುವ ಬೆದರಿಕೆ ನೀಡಿ ಸುಲಿಗೆ ಮಾಡಲಾಗಿದೆ. ಕಂಪನಿಗಳ ಮೇಲೆ ದೌರ್ಜನ್ಯವೆಸಗಿ ಸುಲಿಗೆ ಮಾಡಿದ್ದಾರೆ. ಹೀಗಾಗಿ ಯಾವುದೇ ಮಧ್ಯಂತರ ಆದೇಶ ನೀಡದಂತೆ ಮನವಿ ಮಾಡಿಕೊಳ್ಳುತ್ತೇವೆ ಎಂದರು ಎರಡು ಕಡೆ ವಾದ ಪ್ರತುವಾದ ಆಲಿಸಿದ ಕೋರ್ಟ್ ಮುಂದಿನ ತನಿಖೆಗೆ ತಡೆಯಾಜ್ಞೆ ನೀಡಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment