ಚಿತ್ರದುರ್ಗ. ಆಗಸ್ಟ್.26: ಚಿತ್ರದುರ್ಗ ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳ ಆಯ್ಕೆಗೆ ಇಂದು(ಆ.26) ಸೋಮವಾರ ಚುನಾವಣೆ ನಡೆಯುತ್ತಿದ್ದು, ಬೆಳಿಗ್ಗೆ 10 ಗಂಟೆಯಿಂದ 11 ಗಂಟೆಯವರೆಗೆ ನಾಮಪತ್ರಗಳ ಸಲ್ಲಿಕೆ ಕಾರ್ಯ ನಡೆಯಿತು.
ಅಧ್ಯಕ್ಷ ಸ್ಥಾನಕ್ಕೆ ವಾರ್ಡ್ ನಂ 29 ಸದಸ್ಯೆ ಸುನೀತಾ.ಬಿ.ಎಂ ಹಾಗೂ ವಾರ್ಡ್ ನಂ 32 ಸದಸ್ಯೆ ಎಸ್.ಸಿ.ತಾರಕೇಶ್ವರಿ ನಾಮಪತ್ರ ಸಲ್ಲಿಸಿದರು.

ಉಪಾಧ್ಯಕ್ಷ ಸ್ಥಾನಕ್ಕೆ ವಾರ್ಡ್ ನಂಬರ್ 33 ಸದಸ್ಯೆ ಶ್ರೀದೇವಿ.ಜಿ.ಎಸ್ ಹಾಗೂ ವಾರ್ಡ್ ನಂ.22 ರ ಸದಸ್ಯೆ ಬಿ.ಎಸ್.ರೋಹಿಣಿ ನಾಮಪತ್ರ ಸಲ್ಲಿಸಿದರು.
ಚುನಾವಣಾ ಅಧಿಕಾರಿಯಾಗರುವ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ನಾಮಪತ್ರ ಸ್ವೀಕರಿಸಿದರು.
ಮಧ್ಯಾಹ್ನ 1 ಗಂಟೆಯಿಂದ 1 ಗಂಟೆ 5 ನಿಮಿಷದವರೆಗೆ ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ. ನಂತರ 1 ಗಂಟೆ 5 ನಿಮಿಷದಿಂದ 1 ಗಂಟೆ15 ನಿಮಿಷದವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ. ನಾಮಪತ್ರ ಹಿಂಪಡೆಯದೆ ಇದ್ದರೆ ಮಧ್ಯಾಹ್ನ 1 ಗಂಟೆ 20 ನಿಮಿಷಕ್ಕೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.
ನಾಮಪತ್ರ ಸಲ್ಲಿಕೆ ವೇಳೆ ತಹಶೀಲ್ದಾರ್ ಡಾ.ನಾಗವೇಣಿ ಹಾಗೂ ನಗರ ಸಭೆ ಆಯುಕ್ತೆ ರೇಣುಕಾ.ಎಂ ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.













