ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 19 : ದಲಿತ ಸಾಹಿತ್ಯ ಪರಿಷತ್ ಚಿತ್ರದುರ್ಗ ಜಿಲ್ಲಾ ಘಟಕದ ಪದಾಧಿಕಾರಿಗಳನ್ನು ಬುಧವಾರ ಆಯ್ಕೆ ಮಾಡಲಾಗಿದೆ.
ಅಧ್ಯಕ್ಷರಾಗಿ ಟಿ.ಶಿವಮೂರ್ತಿ ಸಾಹಿತಿಗಳು ಕೋಡಿಹಳ್ಳಿ, ಉಪಾಧ್ಯಕ್ಷರಾಗಿ ಪ್ರೊ.ಲಿಂಗಪ್ಪ, ಹಿರಿಯ ಸಾಹಿತಿಗಳು, ಕಾರ್ಯದರ್ಶಿಗಳಾಗಿ ಪರಶುರಾಮ್.ಎಂ ಶಿಕ್ಷಕರು ಕೊಳಾಳು, ಖಜಾಂಚಿಯಾಗಿ ಮಲ್ಲಿಕಾರ್ಜುನ್ ತಾಳ್ಯ, ನಿರ್ದೇಶಕರಾಗಿ ಕೆ.ಟಿ ಮುತ್ತುರಾಜ್ ಗಾಯಕರು, ನಿರ್ದೇಶಕರಾಗಿ ಶ್ರೀಮತಿ ಶಬ್ರಿನಾ ಮಹಮದ್ ಅಲಿ ಶಿಕ್ಷಕರು ಚಳ್ಳಕೆರೆ, ಪತ್ರಿಕಾ ಸಲಹೆಗಾರರಾಗಿ ರಾಮಾಂಜನೇಯ. ಕೆ. ದೊಡ್ಮನೆ, ಪ್ರಕಾಶನ ಸಲಹೆಗಾರರಾಗಿ ಶ್ರೀ ರಾಜು.ಎಸ್ ಕವಿ ಸೂಲೇನಹಳ್ಳಿ , ಸಾಹಿತ್ಯಕ ಸಲಹೆಗಾರರಾಗಿ ಡಾ.ಎಸ್.ಏಚ್ ಶಫಿ ಉಲ್ಲಾ ಸಾಹಿತಿಗಳು, ಸದಸ್ಯರಾಗಿ ಕು. ಸಿ.ಎಂ. ನೇತ್ರಾವತಿ ನೆಲ್ಲಿಕಟ್ಟೆ ಕವಯಿತ್ರಿ, ಮತ್ತೊಬ್ಬ ಸದಸ್ಯರಾಗಿ ಶಿವಾನಂದ್.ಎನ್ ಶಿಕ್ಷಕರು, ಗುಳ್ಯಾ, ಹಿರಿಯೂರು ಈ ಮೇಲ್ಕಂಡ ಎಲ್ಲಾ ಪದಾಧಿಕಾರಿಗಳನ್ನು ದಲಿತ ಸಾಹಿತ್ಯ ಪರಿಷತ್ ನ ವಿಭಾಗಿಯ ಸಂಯೋಜಕರಾದ ಗಣಪತಿ ಚಲವಾದಿ ಹಾಗೂ ರಾಜ್ಯಾಧ್ಯಕ್ಷರಾದ ಡಾ.ಅರ್ಜುನ್ ಗೊಳಸಂಗಿ ರವರ ಮತ್ತೂ ರಾಜ್ಯ ಸಮಿತಿಯ ಎಲ್ಲರ ಒಪ್ಪಿಗೆಯ ಮೇರೆಗೆ ಚಿತ್ರದುರ್ಗ ಜಿಲ್ಲಾ ದಲಿತ ಸಾಹಿತ್ಯ ಪರಿಷತ್ ನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.
ಅತೀ ಶೀಘ್ರದಲ್ಲಿ ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ಮತ್ತು ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ದಲಿತ ಸಾಹಿತ್ಯ ಪರಿಷತ್ ಚಿತ್ರದುರ್ಗದ ಜಿಲ್ಲಾಧ್ಯಕ್ಷರಾದ ಶಿವಮೂರ್ತಿ.ಟಿ ಕೋಡಿಹಳ್ಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















