Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಎಲೆಕ್ಷನ್ ಅರ್ಜೆಂಟ್ ನಲ್ಲಿ ಹೇಳಿದ್ದಾರೆ.. ಜಾರಿ ಮಾಡೋದಕ್ಕೆ ಸಮಯ ಕೊಡಿ : ಶಾಸಕ ಶಿವಲಿಂಗೇಗೌಡ

---Advertisement---

 

 

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಜನ ಐದು ಗ್ಯಾರಂಟಿಗಳಿಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಆ ಐದು ಗ್ಯಾರಂಟಿಗಳು ಅದ್ಯಾವಾಗ‌ ಜಾರಿಯಾಗುತ್ತೆ ಎಂಬುದರತ್ತ ಎಲ್ಲರ ಚಿತ್ತ ಹರಿದಿದೆ. ಸರ್ಕಾರ ಕೂಡ ಈ ಬಗ್ಗೆ ಚಿಂತನೆ ನಡೆಸಿ, ತೀರ್ಮಾನ ತೆಗೆದುಕೊಳ್ಳಲು ಸಭೆಗಳ ಮೇಲೆ ಸಭೆ ನಡೆಸುತ್ತಿದೆ.

ಇಂದು ನಿಗಧಿಯಾಗಿದ್ದ ಸಂಪುಟ‌ ಸಭೆಗೂ ಮುನ್ನ ಸಚಿವರ ಜೊತೆಗೆ ಒಂದು ಸಭೆ ನಡೆಯಬೇಕಿತ್ತು. ಆದರೆ ಈ ಸಭೆ ಶುಕ್ರವಾರಕ್ಕೆ ಮುಂದೂಡಲಾಗಿದೆ. ಹುಬ್ಬಳ್ಳಿಗೆ ಹೋಗಿದ್ದ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಸಭೆಗೆ ಇರಲಿಲ್ಲ.

ಇನ್ನು ಸಭೆಗೆ ಹೋಗುವುದಕ್ಕೂ ಮುನ್ನ ಶಾಸಕ ಶಿವಲಿಂಗೇಗೌಡ ಈ ಬಗ್ಗೆ ಮಾತನಾಡಿದ್ದಾರೆ. “ಎಲ್ಲಾ ಗ್ಯಾರಂಟಿಗಳನ್ನು, ಅರ್ಹರಿಗೆ ಈ ಯೋಜನೆಗಳನ್ನು ತಲುಪಿಸುತ್ತೀವಿ ಎಂಬುದನ್ನು ಹೇಳಿದ್ದಾರೆ. ಎಲೆಕ್ಷನ್ ಸ್ಪೀಡ್ ನಲ್ಲಿ ಹೇಳಿದ್ದಾರೆ. ಆಯ್ತು ಅವ್ರು ಕೊಡುವ ತನಕ ತಡೆಯಬೇಕಲ್ವಾ. ಈಗ ಗೃಹಲಕ್ಷ್ಮೀ ಯೋಜನೆಯಲ್ಲಿ ಮನೆಯ ಯಜಮಾನಿಗೆ ಎರಡು ಸಾವಿರ ಹಣ ನಿಒಡಬೇಕು ಎಂಬುದಿದೆ. ಒಂದೇ ಮನೆಯಲ್ಲಿ ಅತ್ತೆ ಸೊಸೆ ಇರುತ್ತಾರೆ. ಯಾರಿಗೆ ಕೊಡೋದು. ಅದನ್ನೆಲ್ಲಾ ಚರ್ಚಿಸಿ ನೋಡಬೇಕು ಅಲ್ವಾ. ಅತ್ತೆ ಇದ್ದಾಗ ಅತ್ತೆಗೆ ಕೊಡಬೇಕು ಅಲ್ವಾ. ಎಲ್ಲಾ ಮಾಧ್ಯಮದಲ್ಲಿಯೇ ಹೇಳ್ತೀರಿ. ಐದು ಗ್ಯಾರಂಟಿಗಳನ್ನು ಹೇಳಿದೆ ಸರ್ಕಾರ ಅದೆಲ್ಲವನ್ನು ಸರ್ಕಾರ ಜಾರಿಗೆ ತರುತ್ತೆ ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment