Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಮರ್ಜೆನ್ಸಿ ಮೆಸೇಜ್ ನಿಮ್ಮ ಮೊಬೈಲ್ ಗೂ ಬಂತಾ..!

---Advertisement---

 

ಇವತ್ತು ಮಧ್ಯಾಹ್ನದ ಸಮಯದಲ್ಲಿ ಎಲ್ಲರ ಮೊಬೈಲ್ ಗೂ ಎಮರ್ಜೆನ್ಸಿ ಅಲರ್ಟ್ ಮೆಸೇಜ್ ಬಂದಿದೆ. ಇದನ್ನು ನೋಡಿದ ಕೆಲವರು ಒಂದು ಕ್ಷಣ ಗಾಬರಿಯಾಗಿದ್ದಾರೆ. ಇನ್ನು ಕೆಲವರಿಗೆ ಈ ಮೆಸೇಜ್ ಬಂದಿಲ್ಲ. ಕೇಂದ್ರ ಸರ್ಕಾರ ದೇಶಾದ್ಯಂತ ಜಾರಿಗೆ ತರಲು ಉದ್ದೇಶಿಸಿರುವ ಎಮರ್ಜೆನ್ಸಿ ಸಿಸ್ಟಮ್ ಭಾಗವಾಗಿ ಸೆಲ್ ಬ್ರಾಡ್ ಕಾಸ್ಟ್ ಸಿಸ್ಟಂ ಅನ್ನು ರೂಪಿಸಲಾಗಿದೆ. ಈ ಸಿಸ್ಟಂ ಜಾರಿಗೆ ತರುವ ಮುನ್ನ ದೇಶಾದ್ಯಂತ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಅದರ ಭಾಗವಾಗಿಯೇ ಇಂದು ಎಲ್ಲರ ಮೊಬೈಲ್ ಗೂ ಎಮರ್ಜೆನ್ಸಿ ಅಲರ್ಟ್ ಮೆಸೇಜ್ ಬಂದಿದೆ.

‘ಇದು ಭಾರತ ಸರ್ಕಾರದ ದೂರಸಂಪರ್ಕ ಇಲಾಖೆಯಿಂದ ಸೆಲ್ ಬ್ರಾಡ್ ಕಾಸ್ಟಿಂಗ್ ಸಿಸ್ಟಮ್ ಮೂಲಕ ಕಳುಹಿಸಲಾದ ಮಾದರಿ ಪರೀಕ್ಷಾ ಸಂದೇಶವಾಗಿದೆ. ನಿಮ್ಮ ಕಡೆಯಿಂದ ಯಾವುದೇ ಕ್ರಿಯೆಯ ಅಗತ್ಯವಿಲ್ಲದ ಕಾರಣ ದಯವಿಟ್ಟು ಈ ಸಂದೇಶವನ್ನು ನಿರ್ಲಕ್ಷಿಸಿ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜಾರಿಗೊಳಿಸುತ್ತಿರುವ ಪ್ಯಾನ್-ಇಂಡಿಯಾ ತುರ್ತು ಎಚ್ಚರಿಕೆ ವ್ಯವಸ್ಥೆ ಪರೀಕ್ಷಿಸಲು ಈ ಸಂದೇಶವನ್ನು ಕಳುಹಿಸಲು. ಇದು ಸಾರ್ವಜನಿಕ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ತುರ್ತು ಜನರಿಗೆ ಸಕಾಲಿಕ ಎಚ್ಚರಿಕೆಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ’ ಎಂಬ ಸಂದೇಶ ಎಲ್ಲರ ಮೊಬೈಲ್ ಗೂ ಬಂದಿದೆ.

ಆದರೆ ಇದಕ್ಕರ ಯಾರೂ ಗಾಬರಿ ಪಡಬೇಕಾದ ಅಗತ್ಯವಿಲ್ಲ. ಯಾಕಂದ್ರೆ ವಿಪತ್ತುಗಳ ಸಮಯದಲ್ಲಿ ಎಚ್ಚರಿಸಲು ಇದೊಂದು ಪ್ರಯೋಗವಾಗಿದೆ. ಈ ವಿಚಾರವನ್ನು ಇತ್ತಿಚೆಗಷ್ಟೇ ಕೇಂದ್ರ ಸರ್ಕಾರ ಎಲ್ಲರ ಗಮನಕ್ಕೂ ತಂದಿತ್ತು. ಇದೀಗ ಇಂದು ಮಧ್ಯಾಹ್ನದ ವೇಳೆಗೆ ಎಲ್ಲರ ಮೊಬೈಲ್ ಗೂ ಅಲರ್ಟ್ ಬಂದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...