Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೈತ ಮುಖಂಡ ಟಿ.ನುಲೇನೂರು ಶಂರಪ್ಪನವರಿಗೆ ಭಾವಪೂರ್ಣ ವಿದಾಯ : ನುಡಿ ನಮನ ಸಲ್ಲಿಸಿದ ಪ್ರಮುಖರು

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ನವೆಂಬರ್.22 : ಮಧ್ಯ ಕರ್ನಾಟಕದ ಬಯಲುಸೀಮೆ ಚಿತ್ರದುರ್ಗ ಜಿಲ್ಲೆಗೆ ನೀರಾವರಿಗಾಗಿ ನಡೆದ ಹೋರಾಟದಲ್ಲಿ ಟಿ.ನುಲೇನೂರು ಶಂರಪ್ಪನವರು ಪ್ರಮುಖರು ಎಂದು ರೈತ ನಾಯಕ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಪಗಡಲಬಂಡೆ ನಾಗೇಂದ್ರ ಸ್ಮರಿಸಿಕೊಂಡರು.

ಮಂಗಳವಾರ ನಿಧನರಾದ ರೈತ ಹೋರಾಟಗಾರ ಟಿ.ನುಲೇನೂರು ಶಂಕರಪ್ಪನವರ ಪಾರ್ಥಿವ ಶರೀರವನ್ನು ಒನಕೆ ಓಬವ್ವ ವೃತ್ತದಲ್ಲಿ ಬುಧವಾರ ಸಾರ್ವಜನಿಕರ ದರ್ಶನಕ್ಕೆ ಇಟ್ಟಾಗ ಜಿಲ್ಲಾ ನೀರಾವರಿ ಹೋರಾಟ ಅನುಷ್ಟಾನ ಸಮಿತಿಯಿಂದ ನಡೆದ ನುಡಿನಮನದಲ್ಲಿ ಮಾತನಾಡಿದರು.

ವೈಚಾರಿಕ, ಸೈದ್ದಾಂತಿಕವಾಗಿ ಗಟ್ಟಿ ನಿಲುವು ತಾಳುತ್ತಿದ್ದ ಟಿ.ನುಲೇನೂರು ಶಂಕರಪ್ಪನವರು ರೈತ ಸಂಘಕ್ಕೆ ಎಲ್ಲಿಯೂ ಚ್ಯುತಿ ತರಲಿಲ್ಲ. ಬದ್ದತೆಯಿಂದ ರೈತರ ಸಮಸ್ಯೆಗಳ ನಿವಾರಣೆಗೆ ಹೋರಾಡುತ್ತಿದ್ದರು. ಜಾತ್ಯತೀತವಾಗಿ ಕೆಲಸ ಮಾಡಿದ ಅವರ ನಿಧನ ರೈತ ಸಮುದಾಯಕ್ಕಷ್ಟೆ ಅಲ್ಲ. ಅನೇಕ ಸಂಘಟನೆಗಳಿಗೆ ನಷ್ಟವಾಗಿದೆ. ಕೆಲವರು ಬದುಕಿದ್ದು ಸತ್ತಂತೆ ಇರುತ್ತಾರೆ. ಆದರೆ ನುಲೇನೂರು ಶಂಕರಪ್ಪನವರು ಸತ್ತ ಮೇಲೆ ಬದುಕುವ ವ್ಯಕ್ತಿತ್ವದವರು ಎಂದು ಗುಣಗಾನ ಮಾಡಿದರು.

ಸಾಮಾಜಿಕ ಚಿಂತಕ ಜೆ.ಯಾದವರೆಡ್ಡಿ ಮಾತನಾಡಿ ಟಿ.ನುಲೇನೂರು ಶಂರಪ್ಪನವರು ರೈತ ಪರವಾದ ಹೋರಾಟವನ್ನೆ ಬದುಕಿನ ಅವಿಭಾಜ್ಯ ಅಂಗವನ್ನಾಗಿ ಮಾಡಿಕೊಂಡಿದ್ದರು. ಎಂತಹ ಕಠಿಣ ಸಂದರ್ಭ ಎದುರಾದರೂ ಸಂಘರ್ಷದ ಹಾದಿಯನ್ನು ಎಂದಿಗೂ ಹಿಡಿಯಲಿಲ್ಲ. ಅವರ ಹೋರಾಟದ ನಡೆ ಇತರೆಯವರಿಗೆ ಅನುಕರಣೀಯ. ರೈತ ಸಂಘದಲ್ಲಿ ಅನೇಕ ಗುಂಪುಗಳಿದ್ದರು ಎಲ್ಲರ ಪ್ರೀತಿ ವಿಶ್ವಾಸ ಗಳಿಸಿದ್ದರು. ಹೋರಾಟದ ಕೊಂಡಿ ಈಗ ಕಳಚಿದೆ ಎಂದು ದುಃಖ ತೋಡಿಕೊಂಡರು.

ಭದ್ರಾ ಮೇಲ್ದಂಡೆ, ನೇರ ರೈಲು ಮಾರ್ಗ ಯೋಜನೆಗೆ ತಾರ್ಕಿಕ ಅಂತ್ಯ ಕಾಣುವ ಈ ಸಂದರ್ಭದಲ್ಲಿ ಟಿ.ನುಲೇನೂರು ಶಂಕರಪ್ಪನವರು ನಮ್ಮ ಜೊತೆ ಇರಬೇಕಿತ್ತು. ನೀರಾವರಿಗೆ ಸಂಬಂಧಿಸಿದಂತೆ ಅಜ್ಜಂಪುರ ಬಳಿ ಚಿಕ್ಕ ಸಮಸ್ಯೆಯಿದೆ. ಬಗೆಹರಿಸಿದರೆ ನಿಜವಾಗಿಯೂ ಅವರ ಆತ್ಮಕ್ಕೆ ಶಾಂತಿ ಸಿಕ್ಕಂತಾಗುತ್ತದೆ ಎಂದು ನುಡಿನಮನದಲ್ಲಿದ್ದ ಜಿಲ್ಲಾಧಿಕಾರಿಯವರಲ್ಲಿ ಮನವಿ ಮಾಡಿದರು.

ನಿವೃತ್ತ ಪ್ರಾಚಾರ್ಯರಾದ ಸಿ.ಶಿವಲಿಂಗಪ್ಪ ಮಾತನಾಡುತ್ತ ರೈತರ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತಿದ್ದ ಟಿ.ನುಲೇನೂರು ಶಂಕರಪ್ಪ ಜೀವನವಿಡಿ ಹೋರಾಟ ಮಾಡಿಕೊಂಡು ಬಂದರು. ಚಿತ್ರದುರ್ಗ ನಗರದಲ್ಲಿ ಯಾವುದಾದರೂ ಒಂದು ವೃತ್ತಕ್ಕೆ ಶಂಕರಪ್ಪನವರ ಹೆಸರಿಡುವಂತೆ ಜಿಲ್ಲಾಡಳಿತಕ್ಕೆ ಸಲಹೆ ನೀಡಿದರು.

ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಉಪಾಧ್ಯಕ್ಷ ಕೆ.ಪಿ.ಭೂತಯ್ಯ ಮಾತನಾಡಿ ಜಿಲ್ಲೆಗೆ ಭದ್ರಾ ಮೇಲ್ದಂಡೆ ಯೋಜನೆಗಾಗಿ ರಾಂಪುರದಿಂದ ನಡೆದ ಹೋರಾಟದಲ್ಲಿ ಒಂಬತ್ತು ದಿನಗಳ ಕಾಲ ಪಾದಯಾತ್ರೆಯಲ್ಲಿ ಟಿ.ನುಲೇನೂರು ಶಂಕರಪ್ಪ ಭಾಗಿಯಾಗಿ ಜಿಲ್ಲೆಯ ಮೇಲಿರುವ ಕಾಳಜಿಯನ್ನು ತೋರ್ಪಡಿಸಿದರು. ಆಳುವ ಸರ್ಕಾರಗಳಿಗೆ ಬಿಸಿ ಮುಟ್ಟಿಸುವ ಹೋರಾಟ ಅವರದಾಗಿತ್ತು. ಯಾರೊಂದಿಗೂ ಮನಸ್ತಾಪ ಮಾಡಿಕೊಂಡವರಲ್ಲ. ವಿದ್ಯುತ್ ಸಮಸ್ಯೆ, ಬೆಳೆವಿಮೆ, ಬೆಳೆನಷ್ಟ ಪರಿಹಾರ ಹೀಗೆ ರೈತರ ಒಂದಲ್ಲ ಒಂದು ಸಮಸ್ಯೆಗಳಿಗೆ ಸದಾ ಧ್ವನಿಯಾಗಿರುತ್ತಿದ್ದರು ಎಂದು ನೆನಪಿಸಿಕೊಂಡರು.

ಆರ್ಥಿಕ ಚಿಂತಕ ಜಿ.ಎನ್.ಮಲ್ಲಿಕಾರ್ಜುನಪ್ಪ ಮಾತನಾಡುತ್ತ ನಾಲ್ಕುವರೆ ದಶಕಗಳಿಂದ ಚಳುವಳಿಯಲ್ಲಿ ಪಾಲ್ಗೊಂಡಿದ್ದ ಟಿ.ನುಲೇನೂರು ಶಂಕರಪ್ಪ ಜಿಲ್ಲೆಯ ಅಭಿವೃದ್ದಿಗೆ ಹೋರಾಟದ ಶಕ್ತಿಯಾಗಿ ನಿಂತಿದ್ದರೆಂದು ಗುಣಗಾನ ಮಾಡಿದರು.

ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಮಾತನಾಡಿ ಕಾವೇರಿ, ಮಹಾದಾಯಿ, ಭದ್ರಾಮೇಲ್ದಂಡೆ ಹೋರಾಟದಲ್ಲಿ ಟಿ.ನುಲೇನೂರು ಶಂಕರಪ್ಪನವರು ಮುಂಚೂಣಿಯಲ್ಲಿದ್ದರು. ರೈತರು ಬೆಳೆದ ಬೆಳೆಗಳನ್ನು ರಕ್ಷಿಸಿಕೊಳ್ಳಲು ಕೋಲ್ಡ್ ಸ್ಟೋರೇಜ್ ಆಗಬೇಕೆಂಬ ಕನಸು ಕಂಡಿದ್ದರು. ಅದು ಈಡೇರಬೇಕೆಂದು ಜಿಲ್ಲಾಡಳಿತಕ್ಕೆ ವಿನಂತಿಸಿದರು.

ರೈತ ಮುಖಂಡರುಗಳಾದ ಚಾಮರಸ ಮಾಲಿ ಪಾಟೀಲ್, ಪೂಣಚ್ಚ, ಗೋವಿಂದಪ್ಪ, ಮಂಜುಳ ಅಕ್ಕಿ, ಅರುಣ್ ಕುರುಡಿ, ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ಬಸ್ತಿಹಳ್ಳಿ ಜಿ.ಸುರೇಶ್‍ಬಾಬು, ಎಂ.ಸಿದ್ದಪ್ಪ, ನಾಗರಾಜ್ ಮುದ್ದಾಪುರ, ಹೊರಕೇರಪ್ಪ, ತಿಪ್ಪೇಸ್ವಾಮಿ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ನಗರಸಭೆ ಮಾಜಿ ಅಧ್ಯಕ್ಷ ಬಿ.ಕಾಂತರಾಜ್, ನಿವೃತ್ತ ಉಪನ್ಯಾಸಕ ಅಶೋಕ್‍ಕುಮಾರ್ ಸಂಗೇನಹಳ್ಳಿ, ಕಾರ್ಮಿಕ ಮುಖಂಡ ಕಾಂ.ಜಿ.ಸಿ.ಸುರೇಶ್‍ಬಾಬು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಿವಮೂರ್ತಿ, ಹಿರಿಯ ಪತ್ರಕರ್ತರಾದ ಚಿಕ್ಕಪ್ಪನಹಳ್ಳಿ ಷಣ್ಮುಖ ಸೇರಿದಂತೆ ಇನ್ನು ಅನೇಕರು ನುಡಿನಮನದಲ್ಲಿ ಭಾಗವಹಿಸಿ ಅಂತಿಮ ದರ್ಶನ ಪಡೆದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಮೇ 1ರಂದು ವಿದ್ಯುತ್ ವ್ಯತ್ಯಯ

ಚಿತ್ರದುರ್ಗ. ಏ.30: ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ ಪಂಡರಹಳ್ಳಿ ಲೈನ್‍ನ ಟ್ಯಾಪಿಂಗ್ ಪಾಯಿಂಟ್‍ನಿಂದ ಪಂಡರಹಳ್ಳಿ 66/11 ಕೆವಿ ವಿ.ವಿ ಕೇಂದ್ರದವರೆಗೆ ಡ್ರೇಕ್ ಕಂಡಕ್ಟರ್ ಬಳಸಿ ಉದ್ದೇಶಿತ 66 ಕೆವಿ ಲೈನ್ ಮತ್ತು ಕೊಯೊಟ್ ಕಂಡಕ್ಟರ್ ಬಳಸಿ

ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು : ಕೋರ್ ಕಮಿಟಿಯಲ್ಲಿ ತೀರ್ಮಾನ

ಹುಬ್ಬಳ್ಳಿ: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತು ಮಾಡಲಾಗಿದೆ. ಜಿ.ಟಿ ದೇವೇಗೌಡರ ನೇತೃತ್ವದ ಕೋರ್ ಕಮಿಟಿಯಲ್ಲಿ ಈ ಸಂಬಂಧ ನಿರ್ಧಾರವಾಗಿದ್ದು, ಅಮಾನತು ಮಾಡಲಾಗಿದೆ. ಈ ಸಂಬಂಧ

ಬಿಜೆಪಿ ನಾಯಕನಿಗೆ ಮಾತ್ರ ಪೆನ್ ಡ್ರೈವ್ ಕೊಟ್ಟಿದ್ದೆ : ಶಾಕಿಂಗ್ ವಿಡಿಯೋ ಬಿಟ್ಟ ಡ್ರೈವರ್ ಕಾರ್ತಿಕ್

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದಿನೇ ದಿನೇ ಹಲವು ವಿಚಾರಗಳು ಹೊರಗೆ ಬರುತ್ತಿವೆ. ನಿನ್ನೆಯಷ್ಟೇ ವಕೀಲ, ಬಿಜೆಪಿ ನಾಯಕ ದೇವರಾಜೇಗೌಡ, ಪೆನ್ ಡ್ರೈವ್ ವಿಚಾರವಾಗಿ ಮಾತನಾಡಿ, ಕಾರ್ತಿಕ್ ಬಳಿ ಪೆನ್ ಡ್ರೈವ್

error: Content is protected !!