Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ : ಉದ್ಯಮಿಗಳು ವಿರೋಧ.. ಸರ್ಕಾರದಿಂದ ಭರವಸೆ..!

Facebook
Twitter
Telegram
WhatsApp

ಬೆಂಗಳೂರು: ಖಾಸಗಿ ಕ್ಷೇತ್ರದ ಕಂಪನಿಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಮಸೂದೆಯನ್ನು ರಾಜ್ಯ ಸರ್ಕಾರ ಮಂಗಳವಾರ ಅನುಮೋದನೆ ಮಾಡಿದೆ. ಕರವೇ ನಡೆಸಿದ ಹೋರಾಟಕ್ಕೆ ಈ ಮೂಲಕ ಜಯ ಸಿಕ್ಕಂತೆ ಆಗಿದೆ. ಆದರೆ ಇದರ ನಡುವೆ ಖಾಸಗಿ ಉದ್ಯಮಿಗಳು ಈ ಮಸೂದೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಮೋಹನ್ ದಾಸ್ ಪೈ ಅವರು, ಈ ಮಸೂದೆಯನ್ನು ಜಾರಿಗೆ ತರಬಾರದು. ಇದು ಸಂವಿಧಾನ ವಿರೋಧಿಯಾಗಿದೆ. ಖಾಸಗಿ ಕಂಪನಿಗಳಿಗೆ ನೇಮಕ ಮಾಡಿಕೊಳ್ಳುವಾಗ ಸರ್ಕಾರಿ ಅಧಿಕಾರಿಗಳು ಸಂದರ್ಶನಕ್ಕೆ ಬರುತ್ತಾರಾ..? ಸಂದರ್ಶನ ಸಮಯದಲ್ಲಿ ಅವರ ಭಾಷೆಯನ್ನು ಪರೀಕ್ಷಿಸಿ ನೇಮಕ ಮಾಡಿಕೊಳ್ಳಬೇಕಾ..? ಸರ್ಕಾರ ಇಂಥಹ ಮಸೂದೆಯನ್ನು ಜಾರಿಗೆ ತಂದಿರುವುದು ನಂಬಲು ಅಸಾಧ್ಯ ಎಂದು ಟ್ವೀಟ್ ಮಾಡಿದ್ದಾರೆ.

ಇದೀಗ ಉದ್ಯಮಿಗಳ ಆತಂಕಕ್ಕೆ ಸಚಿವರೇ ಉತ್ತರ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಐಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು, ಮಸೂದೆಯ ಷರತ್ತುಗಳ ಬಗ್ಗೆ ಉದ್ಯಮ ತಜ್ಞರು ಮತ್ತು ಇತರ ಇಲಾಖೆಗಳ ಬಳಿ ಸಮಾಲೋಚನೆ ನಡೆಸಿಯೇ ದನ್ನು ಜರಿಗೆ ತರಲು ಸಿಎಂ ಸಿದ್ದರಾಮಯ್ಯ ಅವರ ಬಳಿ‌ಮನವಿ ಮಾಡಿದ್ದೆವು. ಯಾರು ಭಯ ಪಡುವ ಅಗತ್ಯವಿಲ್ಲ. ನಾವೂ ಸುಧೀರ್ಗ ಸಮಾಲೋಚನೆ ನಡೆಸುತ್ತೇವೆ ಮತ್ತು ಒಮ್ಮತಕ್ಕೆ ಬರಲಿದ್ದೇವೆ. ಸ್ಥಳೀಯರಿಗೆ ಉದ್ಯೋಗ ಒದಗಿಸುವುದು ಮತ್ತು ಜೊತೆ ಜೊತೆಗೆ ಹೂಡಿಕೆದಾರರನ್ನು ಆಕರ್ಷಿಸುವುದೇ ರಾಜ್ಯ ಸರ್ಕಾರದ ಗುರಿಯಾಗಿದೆ ಎಂದಿದ್ದಾರೆ.

ಈ ವಿಚಾರಕ್ಕೆ ಸಚುವ ಎಂ.ಬಿ.ಪಾಟೀಲ್ ಅವರು ಮಾತನಾಡಿದ್ದು, ನಾವೂ ಚೀನಾದಂತ ದೇಶಗಳೊಂದಿಗೆ ಸೆಣೆಸಾಡಬೇಕಿದೆ. ಕನ್ನಡಿಗರನ್ನೂ ದೃಷ್ಟಿಯಲ್ಲಿಟ್ಟುಕೊಂಡು ಸಿಎಂ ಮತ್ತು ಡಿಸಿಎಂ ಹಾಗೂ ಪೌರ ಕಾರ್ಮಿಕ ಸಚಿವರು, ಕಾನೂನು ಸಚಿವರ ಜೊತೆಗೆ ಚರ್ಚಿಸುತ್ತೇನೆ. ಕನ್ನಡಿಗರ ರಕ್ಷಣೆಯ ಜೊತೆಗೆ ಉದ್ಯಮಿಗಳ ರಕ್ಷಣೆಯೂ ಆಗಬೇಕಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!