Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ : ಉದ್ಯಮಿಗಳು ವಿರೋಧ.. ಸರ್ಕಾರದಿಂದ ಭರವಸೆ..!

---Advertisement---

ಬೆಂಗಳೂರು: ಖಾಸಗಿ ಕ್ಷೇತ್ರದ ಕಂಪನಿಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಮಸೂದೆಯನ್ನು ರಾಜ್ಯ ಸರ್ಕಾರ ಮಂಗಳವಾರ ಅನುಮೋದನೆ ಮಾಡಿದೆ. ಕರವೇ ನಡೆಸಿದ ಹೋರಾಟಕ್ಕೆ ಈ ಮೂಲಕ ಜಯ ಸಿಕ್ಕಂತೆ ಆಗಿದೆ. ಆದರೆ ಇದರ ನಡುವೆ ಖಾಸಗಿ ಉದ್ಯಮಿಗಳು ಈ ಮಸೂದೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಮೋಹನ್ ದಾಸ್ ಪೈ ಅವರು, ಈ ಮಸೂದೆಯನ್ನು ಜಾರಿಗೆ ತರಬಾರದು. ಇದು ಸಂವಿಧಾನ ವಿರೋಧಿಯಾಗಿದೆ. ಖಾಸಗಿ ಕಂಪನಿಗಳಿಗೆ ನೇಮಕ ಮಾಡಿಕೊಳ್ಳುವಾಗ ಸರ್ಕಾರಿ ಅಧಿಕಾರಿಗಳು ಸಂದರ್ಶನಕ್ಕೆ ಬರುತ್ತಾರಾ..? ಸಂದರ್ಶನ ಸಮಯದಲ್ಲಿ ಅವರ ಭಾಷೆಯನ್ನು ಪರೀಕ್ಷಿಸಿ ನೇಮಕ ಮಾಡಿಕೊಳ್ಳಬೇಕಾ..? ಸರ್ಕಾರ ಇಂಥಹ ಮಸೂದೆಯನ್ನು ಜಾರಿಗೆ ತಂದಿರುವುದು ನಂಬಲು ಅಸಾಧ್ಯ ಎಂದು ಟ್ವೀಟ್ ಮಾಡಿದ್ದಾರೆ.

ಇದೀಗ ಉದ್ಯಮಿಗಳ ಆತಂಕಕ್ಕೆ ಸಚಿವರೇ ಉತ್ತರ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಐಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು, ಮಸೂದೆಯ ಷರತ್ತುಗಳ ಬಗ್ಗೆ ಉದ್ಯಮ ತಜ್ಞರು ಮತ್ತು ಇತರ ಇಲಾಖೆಗಳ ಬಳಿ ಸಮಾಲೋಚನೆ ನಡೆಸಿಯೇ ದನ್ನು ಜರಿಗೆ ತರಲು ಸಿಎಂ ಸಿದ್ದರಾಮಯ್ಯ ಅವರ ಬಳಿ‌ಮನವಿ ಮಾಡಿದ್ದೆವು. ಯಾರು ಭಯ ಪಡುವ ಅಗತ್ಯವಿಲ್ಲ. ನಾವೂ ಸುಧೀರ್ಗ ಸಮಾಲೋಚನೆ ನಡೆಸುತ್ತೇವೆ ಮತ್ತು ಒಮ್ಮತಕ್ಕೆ ಬರಲಿದ್ದೇವೆ. ಸ್ಥಳೀಯರಿಗೆ ಉದ್ಯೋಗ ಒದಗಿಸುವುದು ಮತ್ತು ಜೊತೆ ಜೊತೆಗೆ ಹೂಡಿಕೆದಾರರನ್ನು ಆಕರ್ಷಿಸುವುದೇ ರಾಜ್ಯ ಸರ್ಕಾರದ ಗುರಿಯಾಗಿದೆ ಎಂದಿದ್ದಾರೆ.

ಈ ವಿಚಾರಕ್ಕೆ ಸಚುವ ಎಂ.ಬಿ.ಪಾಟೀಲ್ ಅವರು ಮಾತನಾಡಿದ್ದು, ನಾವೂ ಚೀನಾದಂತ ದೇಶಗಳೊಂದಿಗೆ ಸೆಣೆಸಾಡಬೇಕಿದೆ. ಕನ್ನಡಿಗರನ್ನೂ ದೃಷ್ಟಿಯಲ್ಲಿಟ್ಟುಕೊಂಡು ಸಿಎಂ ಮತ್ತು ಡಿಸಿಎಂ ಹಾಗೂ ಪೌರ ಕಾರ್ಮಿಕ ಸಚಿವರು, ಕಾನೂನು ಸಚಿವರ ಜೊತೆಗೆ ಚರ್ಚಿಸುತ್ತೇನೆ. ಕನ್ನಡಿಗರ ರಕ್ಷಣೆಯ ಜೊತೆಗೆ ಉದ್ಯಮಿಗಳ ರಕ್ಷಣೆಯೂ ಆಗಬೇಕಿದೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...