Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಂಜಿನಿಯರಿಂಗ್ ವಿದ್ಯಾರ್ಥಿ ಶರತ್  ಸ್ಮರಣಾರ್ಥ ರಕ್ತದಾನ ಶಿಬಿರ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ಫೆ.10): ರಸ್ತೆ ಅಪಘಾತದಲ್ಲಿ ಮೃತಪಟ್ಟ ಇಂಜಿನಿಯರಿಂಗ್ ವಿದ್ಯಾರ್ಥಿ ಎಸ್.ಶರತ್‍ರವರ ಸ್ಮರಣಾರ್ಥವಾಗಿ ಅವರ ಜನ್ಮದಿನದಂದು ಶುಕ್ರವಾರ ಐ.ಎಂ.ಎ.ಹಾಲ್‍ನಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಪ್ರಜಾಸೇವಾ ಸಾಂಸ್ಕೃತಿಕ ಮತ್ತು ಕ್ರೀಡಾ ಸಂಘ, ರೋಟರಿ ಕ್ಲಬ್ ಚಿನ್ಮುಲಾದ್ರಿ, ಭಾರತೀಯ ವೈದ್ಯಕೀಯ ಸಂಘ ಹಾಗೂ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಸಹಯೋಗದೊಂದಿಗೆ ಆಯೋಜಿಸಲಾಗಿತ್ತು.

ಈ ರಕ್ತದಾನ ಶಿಬಿರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಂಗನಾಥ್, ರೋಟರಿ ಕ್ಲಬ್ ಚಿನ್ಮುಲಾದ್ರಿ ಅಧ್ಯಕ್ಷ ಈ.ಅರುಣ್‍ಕುಮಾರ್, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಕಾರ್ಯದರ್ಶಿ ಮಜಹರ್‍ವುಲ್ಲಾ, ನಾಗರೀಕ ಬಂದೂಕು ತರಬೇತಿ ಸಂಸ್ಥೆಯ ಮಹಮದ್ ಆಲಿ, ನರೇಂದ್ರರೆಡ್ಡಿ, ಎಸ್.ಜೆ.ಎಂ.ಚಿತ್ರಕಲಾ ಕಾಲೇಜಿನ ಪ್ರಾಂಶುಪಾಲರಾದ ಕಣ್ಮೇಶ್, ಸಮಾಜ ಕಲ್ಯಾಣ ಇಲಾಖೆಯ ಚನ್ನಬಸಪ್ಪ, ಅನುಸೂಯಮ್ಮ, ಹನುಮಂತೆಗೌಡ ಪೂಜಾರ್, ಭರತ್, ರೀನಾ ವೀರಭದ್ರಪ್ಪ, ಮೃತ ವಿದ್ಯಾರ್ಥಿಯ ಪೋಷಕರುಗಳಾದ ಶ್ರೀನಿವಾಸ್ ಮಳಲಿ, ಓಂಕಾರಮ್ಮ, ಜಾನಪದ ಹಾಡುಗಾರರಾದ ಹರೀಶ್, ಗಂಗಾಧರ್, ಹಿಮಂತ್‍ರಾಜ್ ಇವರುಗಳು ನುಡಿನಮನ ಗೀತೆಗಳನ್ನು ಹಾಡಿದರು. ಅಪಾರ ಸಂಖ್ಯೆಯ ಸ್ನೇಹಿತರು, ಹಿತೈಷಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಎಸ್.ಶರತ್ ಆತ್ಮಕ್ಕೆ ಚಿರಶಾಂತಿ ಕೋರಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿಜೆಪಿ ನೇತೃತ್ವದ ಎನ್‍ಡಿಎ ಮತ್ತು ಕಾಂಗ್ರೆಸ್ ನೇತ್ರತ್ವದ ಇಂಡಿಯಾವನ್ನು ನಾವು ಸಮಾನವಾಗಿ ವಿರೋಧಿಸುತ್ತೇವೆ : ಸಂವಾದ ಕಾರ್ಯಕ್ರಮದಲ್ಲಿ ಕಾಮ್ರೇಡ್ ಕೆ.ರಾಧಾಕೃಷ್ಣ ಹೇಳಿಕೆ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 19 : “ದೇಶದಾದ್ಯಂತ ಇಂದು ಎರಡು ಒಕ್ಕೂಟಗಳು ಜನರ ಮುಂದಿವೆ. ಒಂದು ಬಿಜೆಪಿ ನೇತೃತ್ವದ ಎನ್‍ಡಿಎ ಮತ್ತು ಇನ್ನೊಂದು ಕಾಂಗ್ರೆಸ್ ನೇತ್ರತ್ವ ಇಂಡಿಯಾ. ಇವೆರಡನ್ನು ನಾವು ಸಮಾನವಾಗಿ ವಿರೋಧಿಸುತ್ತೇವೆ ಎಂದು

ಕಾರ್ಮಿಕರ ಭವಿಷ್ಯದ ದೃಷ್ಟಿಯಿಂದ ಈ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟಕ್ಕೆ ಬೆಂಬಲ : ಗೌಸ್ ಪೀರ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಏ. 19 : ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಾಯ್ದೆ ಮತ್ತು ಸೆಸ್ ಕಾಯ್ದೆ

ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಯಾವುದೇ ರೀತಿಯ ಸಹಾಯವನ್ನು ಮಾಡಿಲ್ಲ : ರಣದೀಪ್ ಸುರ್ಜೆವಾಲಾ ವಾಗ್ದಾಳಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಏ. 19 : ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಯಾವುದೇ ರೀತಿಯ ಸಹಾಯವನ್ನು ಮಾಡದೇ ಎಲ್ಲದಕ್ಕೂ

error: Content is protected !!